Homeಮುಖಪುಟಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

- Advertisement -
- Advertisement -

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಾಳಗಂ (ಎಐಎಡಿಎಂಕೆ) ಒಳಗಿನ ಒಳ ಜಗಳದ ನಡುವೆ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್‌) ಅವರನ್ನು ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಆಯ್ಕೆ ಘೋಷಣೆಯಾದ ಕೂಡಲೇ ಕಾರ್ಯಕಾರಿ ಮಂಡಳಿ ಸದಸ್ಯರು ನಿರ್ಣಯವನ್ನು ಅಂಗೀಕರಿಸಿ ಓ ಪನ್ನರ್‌ಸೆಲ್ವಂ (ಒಪಿಎಸ್‌) ಮತ್ತು ಅವರ ಬೆಂಬಲಿಗರನ್ನು ಪಕ್ಷದಿಂದ ಉಚ್ಚಾಟಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಐಎಡಿಎಂಕೆಯ ಟ್ವಿಟ್ಟರ್‌ ಪ್ರೊಫೈಲ್‌‌ ಚಿತ್ರವಾಗಿ ಪಳನಿಸ್ವಾಮಿ ಫೋಟೋವನ್ನು ಹಾಕಿಕೊಳ್ಳಲಾಯಿತು. ಇದಕ್ಕೂ ಮುನ್ನ ಬೆಳಿಗ್ಗೆ ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯನ್ನು ಬೆಳಗ್ಗೆ 9 ಗಂಟೆಗೆ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಓ ಪನ್ನೀರ ಸೆಲ್ವಂ ಮನವಿಯನ್ನು ಕೋರ್ಟ್ ತಿರಸ್ಕರಿಸಿ‌ತು. ಬಹುಮತದವರ ಇಚ್ಛೆ ಮೇಲುಗೈ ಸಾಧಿಸಬೇಕು. ಹೀಗಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ನಾಯಕತ್ವ ತಿಕ್ಕಾಟದಿಂದಾಗಿ ಎಐಎಡಿಎಂಕೆಯ ಎರಡು ಬಣಗಳ ನಡುವಿನ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಪಕ್ಷದ ಪ್ರಧಾನ ಕಚೇರಿಯ ಹೊರಗೆ ಅಹಿತಕರ ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಂಯೋಜಕ ಓ ಪನ್ನೀರಸೆಲ್ವಂ ಬೆಂಬಲಿಗರೊಂದಿಗೆ ಪಕ್ಷದ ಕಚೇರಿಗೆ ಆಗಮಿಸಿದ್ದರು. ಜನರಲ್ ಕೌನ್ಸಿಲ್ ಸಭೆ ನಡೆಯಲಿರುವ ನಗರದ ಮದುವೆ ಮಂಟಪಕ್ಕೆ ಇಪಿಎಸ್ ಅವರು ತೆರಳುತ್ತಿದ್ದರು.

ಇಬ್ಬರು ನಾಯಕರ ಬೆಂಬಲಿಗರೆಂದು ಶಂಕಿಸಲಾದ ಮತ್ತು ಎಐಎಡಿಎಂಕೆ ಧ್ವಜಗಳನ್ನು ಹೊತ್ತ ಎರಡು ಗುಂಪುಗಳು ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದವು. ಕೆಲವು ವ್ಯಕ್ತಿಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತಿರುವುದನ್ನು, ಹತ್ತಿರದಲ್ಲಿ ನಿಲ್ಲಿಸಿದ ಕೆಲವು ವಾಹನಗಳು ಹಾನಿಗೊಳಿಸಿರುವುದನ್ನು ಸೆರೆಯಾದ ದೃಶ್ಯಗಳಲ್ಲಿ ಕಾಣಬಹುದಾಗಿದೆ. ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದೇ ವೇಳೆ ಕೆಲವರು ಪಕ್ಷದ ಕಚೇರಿಯ ಬಾಗಿಲು ಮುರಿದು ಬಲವಂತವಾಗಿ ಒಳಗೆ ನುಗ್ಗಿದ್ದು ಕಂಡುಬಂದಿದೆ. ಪಕ್ಷದ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಘರ್ಷಣೆಯ ಕುರಿತು ಮಾತನಾಡಿದ ಪಳನಿಸ್ವಾಮಿ, “ಸಮಾಜ ವಿರೋಧಿಗಳು ಪಕ್ಷದ ಮುಖ್ಯ ಕಚೇರಿಗೆ ಪ್ರವೇಶಿಸಬಹುದು ಎಂದು ನಮ್ಮ ಪಕ್ಷದ ಕಾರ್ಯಕರ್ತರು ರಾಯಪೆಟ್ಟಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಕೋರಿದ್ದರು. ನಮ್ಮ ಮಾಹಿತಿ ನಿಜವೆಂದು ಸಾಬೀತಾಗಿದೆ” ಎಂದಿದ್ದಾರೆ.

ಪಕ್ಷದ ಕೇಂದ್ರ ಕಚೇರಿಗೆ ಸೂಕ್ತ ಭದ್ರತೆ ಒದಗಿಸಲು ರಾಯಪೆಟ್ಟಾ ಪೊಲೀಸರು ಮತ್ತು ಆಯುಕ್ತರ ಕಚೇರಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪುಷ್ಪ ನಮನ

ಎಐಎಡಿಎಂಕೆ ನಾಯಕ ಮತ್ತು ಮಾಜಿ ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಎಂಜಿಆರ್ ಹಾಗೂ ಜಯಲಲಿತಾ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

‘ವೈಯಕ್ತಿಕ ಹಿತಾಸಕ್ತಿಯಿಂದ ಜನರಲ್ ಕೌನ್ಸಿಲ್ ಸಭೆ ನಡೆಸಲಾಗಿದೆ’: ವಿಕೆ ಶಶಿಕಲಾ

‘ವೈಯಕ್ತಿಕ ಹಿತಾಸಕ್ತಿಗಾಗಿ ಸೋಮವಾರದ ಸಾಮಾನ್ಯ ಸಭೆ ನಡೆಸಲಾಗಿದೆ’ ಎಂದು ಹೇಳಿದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ, ‘ಹೈಕೋರ್ಟ್‌ನಲ್ಲಿ ನಾನು ಹೂಡಿರುವ ಪ್ರಕರಣ ಬಾಕಿ ಇರುವಾಗ ಇಂತಹ ಕಾರ್ಯಕ್ರಮಗಳನ್ನು ನಡೆಸಬಾರದು. ಇಂದು ನಡೆದ ಸಾಮಾನ್ಯ ಮಂಡಳಿ ಸಭೆ ಖಂಡಿತವಾಗಿಯೂ ಅಸಿಂಧು” ಎಂದಿದ್ದಾರೆ.

“ತಮಿಳುನಾಡಿನ ಮಾಜಿ ಸಿಎಂ ಎಂಜಿಆರ್ ಅವರು ಡಿಎಂಕೆಯಲ್ಲಿನ ತಪ್ಪುಗಳನ್ನು ಖಂಡಿಸಿ ಪ್ರತ್ಯೇಕ ಪಕ್ಷವನ್ನು ಪ್ರಾರಂಭಿಸಿದರು. ಅವರು ಪ್ರಾರಂಭಿಸಿದ ಪಕ್ಷದಲ್ಲಿ ಯಾರಿಗೂ ಈ ಪರಿಸ್ಥಿತಿ ಬರಬಾರದು. ಪ್ರಧಾನ ಕಾರ್ಯದರ್ಶಿಯನ್ನು ತಳಮಟ್ಟದ ಕಾರ್ಯಕರ್ತರಿಂದ ಆಯ್ಕೆ ಮಾಡಬೇಕಾದ ವ್ಯವಸ್ಥೆಯನ್ನು ಎಂಜಿಆರ್‌‌ ಸೃಷ್ಟಿಸಿದ್ದರು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...