Homeಮುಖಪುಟಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

ಉದ್ಧವ್ ಠಾಕ್ರೆಗೆ ಮತ್ತೆ ಸಂಕಷ್ಟ: ದ್ರೌಪದಿ ಮುರ್ಮು ಬೆಂಬಲಿಸುವಂತೆ 16 ಸಂಸದರ ಒತ್ತಡ

- Advertisement -
- Advertisement -

ಶಿವಸೇನೆ ಪಕ್ಷದ 40 ಶಾಸಕರು ಬಂಡಾಯವೆದ್ದು ಮಹಾವಿಕಾಸ್ ಅಘಾಡಿ ಸರ್ಕಾರ ಕೆಡವಿ, ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಉದ್ಧವ್ ಠಾಕ್ರೆಗೆ ಸವಾಲೆಸೆದಿದ್ದಾರೆ. ಈ ಬೆನ್ನಲ್ಲೆ ಪಕ್ಷದ 16 ಸಂಸದರು ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನು ಬೆಂಬಲಿಸುವಂತೆ ಮಾಜಿ ಸಿಎಂ ಠಾಕ್ರೆ ಮೇಲೆ ಒತ್ತಡ ಹೇರುವ ಮೂಲಕ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಇಂದು ಉದ್ಧವ್ ಠಾಕ್ರೆಯವರು ನಡೆಸಿದ ಸಭೆಯಲ್ಲಿ ಭಾಗವಹಿಸಿರುವ ಸಂಸದರು, “ಮಹಾರಾಷ್ಟ್ರದಲ್ಲಿ ಆದಿವಾಸಿ ಜನಸಂಖ್ಯೆ ಗಣನೀಯ ಮಟ್ಟದಲ್ಲಿದೆ. ದ್ರೌಪದಿ ಮುರ್ಮುರವರು ಬುಡಕಟ್ಟು ಮಹಿಳೆಯಾದ ಕಾರಣ ಅವರನ್ನು ಬೆಂಬಲಿಸಬೇಕೆಂದು” ಒತ್ತಡ ತಂದಿದ್ದಾರೆ. ಇದುವರೆಗೂ ವಿರೋಧ ಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾರನ್ನು ಬೆಂಬಲಿಸುವುದಾಗಿ ಘೋಷಿಸಿದ್ದ ಠಾಕ್ರೆಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಶಿವಸೆನೆಯ ಸಂಸದ ಗಜಾನನ ಕೀರ್ತಿಕರ್ 16 ಸಂಸದರ ಪರವಾಗಿ ಮಾತನಾಡಿದ್ದು, ಬುಡಕಟ್ಟು ಅಭ್ಯರ್ಥಿ ದ್ರೌಪದಿ ಮುರ್ಮುರವರನ್ನೆ ಬೆಂಬಲಿಸುತ್ತೇವೆ ಎಂದಿದ್ದಾರೆ. ಏಕನಾಥ್ ಶಿಂಧೆ ಬಂಡಾಯವೆದ್ದು ಸಿಎಂ ಆದ ನಂತರ ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿರುವ ಠಾಕ್ರೆಗೆ ಸಂಸದರ ನಿರ್ಣಯ ಗಾಯದ ಮೇಲೆ ಬರೆ ಎಳೆದಂತೆ ಪರಿಣಮಿಸಿದೆ. ಹಾಗಾಗಿ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪ್ ಜಾರಿಗೊಳಿಸದೆ ಸಂಸದರು ತಮಗೆ ಸರಿ ಎನಿಸಿದವರಿಗೆ ಮತ ಹಾಕಲು ಬಿಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಈ ಕುರಿತು ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿರುವ ಉದ್ಧವ್ ಠಾಕ್ರೆ ಈ ಬಗ್ಗೆ ಇನ್ನು ಎರಡು ದಿನದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅವರ ಸಹವರ್ತಿ ರಾಜ್ಯಸಭಾ ಸಂಸದ ಸಂಜಯ್ ರಾವತ್ ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಇದು ಅವರಿಗೆ ಸಂಸದರ ನಿರ್ಣಯ ಕೋಪ ತರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಿವಸೇನೆಯು 19 ಲೋಕಸಭಾ ಸಂಸದರು ಮತ್ತು 03 ರಾಜ್ಯಸಭಾ ಸಂಸದರನ್ನು ಹೊಂದಿದೆ. ಸಂಸತ್ ಸದಸ್ಯರಲ್ಲಿ ಬಂಡಾಯವನ್ನು ತಪ್ಪಿಸಲು ಕಳೆದ ವಾರ ಠಾಕ್ರೆ ಲೋಕಸಭಾ ಹೊಸ ಮುಖ್ಯ ಸಚೇತಕರನ್ನು ನೇಮಿಸಿದ್ದರು. ಆದರೆ ಇಂದಿನ ಸಭೆಗೆ ಏಕನಾಥ್ ಶಿಂಧೆಯ ಪುತರ ಸೇರಿದಂತೆ 06 ಜನರು ಗೈರು ಹಾಜರಾಗಿದ್ದಾರೆ.

ಠಾಕ್ರೆ ಬೆಂಬಲಿಗ ಸಂಸದ ಅರವಿಂದ್ ಸಾವಂತ್ ಕಳೆದ ವಾರ ಸಂದರ್ಶನದಲ್ಲಿ ಮಾತನಾಡುತ್ತಾ, “ಯಾರಿಗೆ ಪಕ್ಷದಲ್ಲಿ ಇರಲು ಇಷ್ಟವಿಲ್ಲವೊ ಅವರು ಪಕ್ಷ ತ್ಯಜಿಸಲಿ. ನಾವು 19 ಸಂಸದರಿದ್ದ ಪಕ್ಷಾಂತರ ನಿಷೇಧ ಕಾಯ್ದೆಯಿಂದ ತಪ್ಪಿಸಿಕೊಳ್ಳಲು ಮೂರನೇ ಎರಡು ಬಹುಮತವಾದ 12 ಸಂಸದರು ಇದಕ್ಕೆ ಸಿದ್ದವಿದ್ದಾರೆಯೆ?” ಎಂದು ಪ್ರಶ್ನಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ನಾಯಕತ್ವ ಸಮರ: ಕಾರ್ಯಕರ್ತರ ನಡುವೆ ಮಾರಾಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...