Homeಕರ್ನಾಟಕವರ್ಗಾವಣೆ ಬೆದರಿಕೆ: ಲಿಖಿತ ಆದೇಶದಲ್ಲೂ ಜಸ್ಟೀಸ್‌ ಸಂದೇಶ್‌ ಉಲ್ಲೇಖ

ವರ್ಗಾವಣೆ ಬೆದರಿಕೆ: ಲಿಖಿತ ಆದೇಶದಲ್ಲೂ ಜಸ್ಟೀಸ್‌ ಸಂದೇಶ್‌ ಉಲ್ಲೇಖ

- Advertisement -
- Advertisement -

ರಾಜ್ಯ ಪೊಲೀಸ್‌ನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ನಂತರ ತಮಗೆ ವರ್ಗಾವಣೆ ಬೆದರಿಕೆಗಳು ಬಂದಿವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್‌ ಲಿಖಿತ ಆದೇಶದಲ್ಲೂ ಉಲ್ಲೇಖಿಸಿದ್ದಾರೆ.

ಜುಲೈ 4ರಂದು ನಡೆದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಎಸಿಬಿ ವಿರುದ್ಧ ಹೇಳಿಕೆ ನೀಡಿದ ನಂತರ ನನಗೆ ಪರೋಕ್ಷವಾಗಿ ವರ್ಗಾವಣೆ ಬೆದರಿಕೆ ಹಾಕಲಾಗಿದೆ ಎಂದು ಮೌಖಿಕವಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ಕಾರ್ಯನಿರ್ವಹಣಾ ಮುಖ್ಯಸ್ಥ ಹೆಚ್ಚುವರಿ ಡಿಜಿಪಿ (ಎಡಿಜಿಪಿ) ಕಳಂಕಿತ ಅಧಿಕಾರಿ ಎಂದೂ ಅವರು ತಿಳಿಸಿದ್ದರು.

“ನಿಮ್ಮ ಎಸಿಬಿ ಎಡಿಜಿಪಿ ಶಕ್ತಿಶಾಲಿ ವ್ಯಕ್ತಿ ಎಂದು ತೋರುತ್ತಿದೆ. ಇದನ್ನು ಯಾರೋ ನನ್ನ ಸಹೋದ್ಯೋಗಿಗೆ ಹೇಳಿದ್ದಾರೆ. ಆ ನ್ಯಾಯಾಧೀಶರು ಬಂದು ನನಗೆ ತಿಳಿಸಿದ್ದಾರೆ. ವರ್ಗಾವಣೆ ಬೆದರಿಕೆಯನ್ನು ಆದೇಶದಲ್ಲಿ ದಾಖಲಿಸಲಾಗುವುದು” ಎಂದು ನ್ಯಾಯಮೂರ್ತಿ ಸಂದೇಶ್ ತಿಳಿಸಿದ್ದರು.

ಸಿಜೆ ಆಗಿದ್ದ ರಿತುರಾಜ್‌ ಅವಸ್ಥಿ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾಯಮೂರ್ತಿಯೊಬ್ಬರು ಹೇಳಿದ ವಿಷಯವನ್ನು ಜಸ್ಟೀಸ್ ಸಂದೇಶ್ ಪ್ರಸ್ತಾಪಿಸಿದ್ದರು. ಜುಲೈ 4ರಂದು ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ತನಗೆ ಬಂದಿದ್ದ ಬೆದರಿಕೆಯನ್ನು ಉಲ್ಲೇಖಿಸಿದ್ದರು.

“ವ್ಯಕ್ತಿಯೊಬ್ಬರು ನನ್ನ ಬಗ್ಗೆ ವಿಚಾರಿಸಿದ್ದಾರೆ. ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ” ಎಂದು ನ್ಯಾಯಮೂರ್ತಿ ಸಂದೇಶ್ ಸ್ಪಷ್ಟಪಡಿಸಿದ್ದರು.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯ ಲಂಚ ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶರು ಈ ಹೇಳಿಕೆ ನೀಡಿದ್ದರು.

ಜಮೀನು ವಿವಾದದಲ್ಲಿ ಅನುಕೂಲಕರ ಆದೇಶಕ್ಕೆ ಬದಲಾಗಿ 5 ಲಕ್ಷ ರೂಪಾಯಿ ಲಂಚ ಪಡೆದಿದ್ದಕ್ಕಾಗಿ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿರಿ: ಯುಪಿ ಸಿಎಂ ಅಲಹಾಬಾದ್ ಹೈಕೋರ್ಟ್ ಸಿಜೆ ರೀತಿ ವರ್ತಿಸುತ್ತಿದ್ದಾರೆ: ಓವೈಸಿ

ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ, ಕಿರಿಯ ಸಿಬ್ಬಂದಿಯನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಹೈಕೋರ್ಟ್ ಆಕ್ಷೇಪಣೆ ಎತ್ತಿದೆ.

ಎಸಿಬಿ ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ ಮತ್ತು ಸಂಸ್ಥೆಯು ಲಂಚದ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ನ್ಯಾಯಮೂರ್ತಿ ಸಂದೇಶ್ ಅಭಿಪ್ರಾಯಪಟ್ಟಿದ್ದಾರೆ.

“ಎಸಿಬಿಗೆ ಕಳಂಕಿತ ಅಧಿಕಾರಿಗಳನ್ನು ನಿಯೋಜನೆ ಮಾಡಬೇಡಿ. ಎಸಿಬಿಗೆ ಅಧಿಕಾರಿಗಳನ್ನು ನಿಯೋಜಿಸುವ ಮೊದಲು ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಬೇಕು. ರಾಜ್ಯದಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲೆಂದೇ ಎಸಿಬಿ ರಚಿಸಲಾಗಿದೆ. ಎಸಿಬಿಗೆ ಅಧಿಕಾರಿಯಾಗುವವರಿಗೆ ವಿಶ್ವಾಸಾರ್ಹತೆ ಬಹುಮುಖ್ಯವಾಗಿರುತ್ತದೆ. ಎಸಿಬಿ ಘನತೆಯನ್ನು ಕಾಪಾಡುವ, ಉನ್ನತ ಸ್ಥಾನಕ್ಕೆ ಒಯ್ಯುವ ಕ್ಷಮತೆ ಇರಬೇಕು. ಸರ್ವೀಸ್‌ ರೆಕಾರ್ಡ್, ಅಧಿಕಾರಿಯ ಸಮಗ್ರತೆಯನ್ನು ಪರಿಗಣಿಸಬೇಕು” ಎಂದು ನ್ಯಾಯಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.

“ಎಸಿಬಿಗೆ ಅಧಿಕಾರಿಗಳನ್ನು ನೇಮಿಸುವಾಗ ಆಂತರಿಕ, ಬಾಹ್ಯ ಪ್ರಭಾವಕ್ಕೆ ಒಳಗಾಗದೆ ನೇಮಕ ಮಾಡಬೇಕು. ಇಂತಹ ಅಧಿಕಾರಿಗಳ ಹಾಗೂ ಅವರ ಕುಟುಂಬದವರ ವಿರುದ್ಧವೂ ಎಸಿಬಿ, ಲೋಕಾಯುಕ್ತ ತನಿಖೆ ನಡೆಯುತ್ತಿರಬಾರದು” ಎಂದು ತಿಳಿಸಿದೆ.

ನ್ಯಾಯಮೂರ್ತಿ ಸಂದೇಶ್ ನೀಡಿದ ಲಿಖಿತ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಎಸಿಬಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 12 ರಂದು ಪ್ರಕರಣದ ವಿಚಾರಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....