Homeಮುಖಪುಟರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

ರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

“ತಾಳ್ಮೆ ಹಾಗೂ ಘನತೆಯಿಂದ ಕೂಡಿದ ನಾಲ್ಕು ತಲೆಯ ಸಿಂಹವನ್ನು ಶತಮಾನದಿಂದ ನೋಡುತ್ತಿದ್ದೇವೆ. ಆದರೆ ಅಶೋಕ ಚಕ್ರವರ್ತಿಯ ಸಿಂಹಗಳು ಸಹ ಈಗ ಕೋಪಗೊಂಡಿವೆ…” ಎಂಬ ಟೀಕೆಗಳು ವ್ಯಕ್ತವಾಗಿವೆ.

ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಆದರೆ ರಾಷ್ಟ್ರೀಯ ಲಾಂಛನವು ಮೂಲವನ್ನು ಹೋಲುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಟ್ವೀಟ್ ಮಾಡಿ, “ರಾಷ್ಟ್ರೀಯ ಲಾಂಛನದಲ್ಲಿರುವ ಸಿಂಹಗಳು ಸೌಮ್ಯವಾದ ಅಭಿವ್ಯಕ್ತಿಯನ್ನು ಹೊಂದಿವೆ. ಆದರೆ ಹೊಸ ಶಿಲ್ಪದಲ್ಲಿ ನರಭಕ್ಷಕ ಪ್ರವೃತ್ತಿ ಕಾಣಬಹುದು” ಎಂದು ಟೀಕಿಸಿದೆ.

“ಆಕರ್ಷಕತೆಯಿಂದ ವಿರೂಪದ ಕಡೆಗೆ, ಫಿಟ್‌ನಿಂದ ಕೊಬ್ಬಿನ ಕಡೆಗೆ, ಸೌಂದರ್ಯದಿಂದ ಕುರೂಪದ ಕಡೆಗೆ ರಾಷ್ಟ್ರೀಯ ಲಾಂಛನವೂ ಏಕೆ ಕೆಟ್ಟ ಸ್ವಭಾವವನ್ನು ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವು ವಿಫಲವಾಗಿದೆ” ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಷ್‌ ದುಅ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಪ್ರತಿಕ್ರಿಯೆ ನೀಡಿದ್ದು, “ನಮ್ಮ ರಾಷ್ಟ್ರೀಯ ಲಾಂಛನಕ್ಕೆ ಮಾಡಿದ ಅವಮಾನ” ಎಂದಿದ್ದಾರೆ.

ಎನ್‌ಡಿಟಿವಿ ಜೊತೆ ಮಾತನಾಡಿದ ಅವರು, “ಸಿಂಹದ ಮುಖದ ನೋಟದಲ್ಲಿ ಆಕ್ರಮಣಶೀಲತೆ ಇದೆ ಎಂದು ಸೂಕ್ಷ್ಮವಾಗಿ ಗಮನಿಸಬಹುದು, ಆದರೆ ಸಾಮ್ರಾಟ್ ಅಶೋಕ ಹೇಳಲು ಪ್ರಯತ್ನಿಸಿದ್ದು ಇದಲ್ಲ. ತುಂಬಾ ಆಕ್ರಮಣಕಾರಿ ಜೀವಿಗಳ ಮುಖದಲ್ಲಿನ ಶಾಂತ ಅಭಿವ್ಯಕ್ತಿಯನ್ನು ಸಾಮ್ರಾಟ್ ಅಶೋಕ ತೆರೆದಿಟ್ಟಿದ್ದನು. ಅಶೋಕನು ನೀಡಲು ಪ್ರಯತ್ನಿಸುತ್ತಿದ್ದ ಶಾಂತಿಯ ಸಂದೇಶದ ಸಾಕಾರವಾಗಿ ಸಿಂಹಗಳನ್ನು ನೋಡಬಹುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಭವ್ಯವಾದ, ಶಾಂತಿಪ್ರಿಯ, ತಾಳ್ಮೆ ಮತ್ತು ವೈಭವದಿಂದ ಕೂಡಿದ ಸಿಂಹವು ಈಗ ತನ್ನ ಹೊಸ ನೋಟದಲ್ಲಿ ಕೋಪಗೊಂಡಿದೆ, ಕ್ರೂರವಾಗಿದೆ, ಬೆದರಿಸುತ್ತಿದೆ ಮತ್ತು ಹಿಂಸಾತ್ಮಕವಾಗಿ ಕಾಣುತ್ತಿದೆ. ಬಹುತೇಕ ದ್ವೇಷವನ್ನು ಹುಟ್ಟುಹಾಕುವ ರಂಗಾ ಬಿಲ್ಲಾ ಮತ್ತು ಅವರ 8 ವರ್ಷಗಳ ವಿಶ್ವಾಸಘಾತುಕ ಆಡಳಿತವನ್ನು ಇದು ಪುನರಾವರ್ತಿಸುತ್ತದೆ. ಮೋದಿ ಸರ್ಕಾರ ನಮ್ಮ ರಾಷ್ಟ್ರೀಯ ಲಾಂಛನವನ್ನು ಏಕೆ ವಿರೂಪಗೊಳಿಸಿದೆ ಎಂದು ನಾವು ಪ್ರಶ್ನಿಸಬಹುದೇ?” ಎಂದು ಕಾಂಗ್ರೆಸ್ ನಾಯಕ ವಿನಯ್‌ ಕುಮಾರ್‌ ದೊಕನಿಯ ಪ್ರಶ್ನಿಸಿದ್ದಾರೆ.

“ಈ ದೇಶದಲ್ಲಿ ಏನಾದ್ರೂ ಆಗ್ತಿದೆ ಎಲ್ಲರೂ ಸುಮ್ಮನಿರ್ತಾರಾ? ಇದು ರಾಷ್ಟ್ರೀಯ ಚಿಹ್ನೆಗೆ ಮಾಡಿದ ಅವಮಾನ” ಎಂದು ಚಲನಚಿತ್ರ ನಿರ್ದೇಶಕ ವಿನೋದ್ ಕಾಪ್ರಿ ಟ್ವೀಟ್ ಮಾಡಿದ್ದಾರೆ.

‌ಈ ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ, 6.5 ಮೀಟರ್ ಎತ್ತರವಿದೆ. ಲಾಂಛನವನ್ನು ಈಗಿನಂತೆ ಕಾಣುವಂತೆ ಮಾಡಲು 100ಕ್ಕೂ ಹೆಚ್ಚು ಕುಶಲಕರ್ಮಿಗಳು ಆರು ತಿಂಗಳ ಕಾಲ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸಾಮ್ರಾಟ್ ಅಶೋಕನ ಕಾಲದ ನಾಲ್ಕು ತಲೆಯ ಸಿಂಹಕ್ಕೂ, ಹೊಸ ಸಂಸತ್‌‌ ಭವನದ ಮೇಲೆ ನಿರ್ಮಿಸಲಾಗಿರುವ ಸಿಂಹಕ್ಕೂ ವ್ಯತ್ಯಾಸಗಳು ಕಂಡು ಬರುತ್ತಿವೆ.

ಭಾರತದ ಲಾಂಛನವನ್ನು ಜನವರಿ 26, 1950ರಂದು ಅಂದರೆ ಭಾರತದ ಸಂವಿಧಾನವು ಜಾರಿಗೆ ಬಂದ ದಿನ ಅಂಗೀಕರಿಸಲಾಗಿದೆ.

ಬಿಜೆಪಿ ನಾಯಕನ ಸಮರ್ಥನೆ

ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರತಿಕ್ರಿಯೆ ನೀಡಿದ್ದು, “ಸಮಾಜದಲ್ಲಿ ಎಲ್ಲವೂ ವಿಕಸನವಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ ನಾವು ಕೂಡ ವಿಕಸನಗೊಂಡಿದ್ದೇವೆ. ಕಲಾವಿದನ ಅಭಿವ್ಯಕ್ತಿಗೆ ಸರ್ಕಾರದ ಅನುಮೋದನೆ ಅಗತ್ಯವಿಲ್ಲ. ಎಲ್ಲದಕ್ಕೂ ನೀವು ಭಾರತ ಸರ್ಕಾರವನ್ನು, ಪ್ರಧಾನಿ ಮೋದಿಯನ್ನು ದೂಷಿಸಲು ಸಾಧ್ಯವಿಲ್ಲ. ಸಂರಚನೆಯಲ್ಲಿ ಬದಲಾವಣೆ, ಮಾರ್ಪಾಡು ಇದೆ ಎಂಬ ವಾದವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾವು ಯಾವಾಗಲೂ ಟೀಕಿಸಬಾರದು. ಬಹುಶಃ ಭಾರತ ಇಂದು ವಿಭಿನ್ನವಾಗಿದೆ” ಎಂದು ಸಮರ್ಥಿಸಿದ್ದಾರೆ.

‘ರಾಷ್ಟ್ರ ಲಾಂಛನ ತಿರುಚುವುದು ಶಿಕ್ಷಾರ್ಹ ಅಪರಾಧ’

‘ರಾಷ್ಟ್ರ ಲಾಂಛನವನ್ನು ತಿರುಚುವುದು ಶಿಕ್ಷಾರ್ಹ ಅಪರಾಧ’ ಎಂದು ಚಿಂತಕ, ರಾಜಕೀಯ ವಿಶ್ಲೇಷಕರಾದ ರಾಜಾರಾಮ್ ತಲ್ಲೂರು ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಅವರು, “ಸಾರನಾಥದ ಮ್ಯೂಸಿಯಂನಲ್ಲಿ ಸಂರಕ್ಷಿಸಲಾಗಿರುವ ಅಶೋಕ ಚಕ್ರವರ್ತಿಯ -ಲಯನ್ ಕ್ಯಾಪಿಟಲ್- ಈ ದೇಶದ ಲಾಂಛನ. THE STATE EMBLEM OF INDIA (PROHIBITION OF IMPROPER USE) ACT, 2005 ACT NO. 50 OF 2005 ಎಂಬ ಸಾಂವಿಧಾನಿಕ ರಕ್ಷಣೆ ಈ ಲಾಂಛನಕ್ಕಿದೆ. ಈ ಲಾಂಛನವನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ” ಎಂದು ಎಚ್ಚರಿಸಿದ್ದಾರೆ.

“ಒಕ್ಕೂಟ ಸರ್ಕಾರಕ್ಕೆ ಈ ಲಾಂಛನದ ಬಳಕೆಯನ್ನು ನಿರ್ದೇಶಿಸುವ ಕಾನೂನುಬದ್ಧ ಅಧಿಕಾರ ಇದೆಯೇ ಹೊರತು ಇದನ್ನು ವಿರೂಪಗೊಳಿಸುವ ಅಥವಾ ತನ್ನ ಮನಸ್ಸಿಗೆ ಬಂದಂತೆ ಸ್ವರೂಪದಲ್ಲಿ ಬದಲಾವಣೆಗಳನ್ನು ಮಾಡುವ ಹಕ್ಕಿಲ್ಲ. ಈಗ ಹೊಸ ಸಂಸತ್ ಭವನದ ಮೇಲುಭಾಗದಲ್ಲಿ ಉದ್ಘಾಟನೆಗೊಂಡಿರುವ ವ್ಯಗ್ರ ಸಿಂಹಗಳನ್ನು ಹೊಂದಿರುವ ಪ್ರತಿಮೆಗೂ ಮತ್ತು ಸಾರನಾಥದ ಪ್ರಶಾಂತ ಮುದ್ರೆಯ ಘನಗಂಭೀರ ಸಿಂಹಗಳಿರುವ ದೇಶದ ಲಾಂಛನಕ್ಕೂ ಎದ್ದು ಕಾಣುವ ವ್ಯತ್ಯಾಸ ತೋರುತ್ತಿದೆ. ಇದನ್ನು ಉದ್ಘಾಟನೆಗೆ ಮುನ್ನ ಒಕ್ಕೂಟ ಸರ್ಕಾರ ಗಮನಿಸಬೇಕಿತ್ತು. ಇದೊಂದು ಲೋಪವೇ ಸರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಲೇ ಗಾಂಡುಗಳ,ಇಷ್ಟು ದಿನ ಸಿಂಹ ಸೈಲಾಂಟಾಗಿ ಕುಳಿತಿತ್ತು,ಆದರೆ ಈಗ ಸಿಂಹ ಘರ್ಜನೆ ಮಾಡ್ತಿದೆ ಪ್ರಪಂಚದಾದ್ಯಂತ ಆ ಸಂಕೇತ ಕಣ್ರೋ ಇದು ಕಲಬೆರಕೆಗಳಾ

  2. ರಾಷ್ಟ್ರೀಯ ಲಾಂಚನವನ್ನು ಬೇಕಾಬಿಟ್ಟಿಯಾಗಿ ತಮಗಿಶ್ಟ ಬಂದಂತೆ ಬದಲಾಯಿಸುವ ಯಾವ ಅದಿಕಾರವೂ, ಯಾವ ಸರ್ಕಾರಕ್ಕೂ ಇಲ್ಲ. ಆದ್ದರಿಂದ ಮೋದಿ ಸರ್ಕಾರದ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...