Homeಮುಖಪುಟರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

ರಾಷ್ಟ್ರೀಯ ಲಾಂಛನ ವಿರೂಪ; ಬಿಜೆಪಿ ವಿರುದ್ಧ ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

“ತಾಳ್ಮೆ ಹಾಗೂ ಘನತೆಯಿಂದ ಕೂಡಿದ ನಾಲ್ಕು ತಲೆಯ ಸಿಂಹವನ್ನು ಶತಮಾನದಿಂದ ನೋಡುತ್ತಿದ್ದೇವೆ. ಆದರೆ ಅಶೋಕ ಚಕ್ರವರ್ತಿಯ ಸಿಂಹಗಳು ಸಹ ಈಗ ಕೋಪಗೊಂಡಿವೆ…” ಎಂಬ ಟೀಕೆಗಳು ವ್ಯಕ್ತವಾಗಿವೆ.

ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು. ಆದರೆ ರಾಷ್ಟ್ರೀಯ ಲಾಂಛನವು ಮೂಲವನ್ನು ಹೋಲುತ್ತಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಟ್ವೀಟ್ ಮಾಡಿ, “ರಾಷ್ಟ್ರೀಯ ಲಾಂಛನದಲ್ಲಿರುವ ಸಿಂಹಗಳು ಸೌಮ್ಯವಾದ ಅಭಿವ್ಯಕ್ತಿಯನ್ನು ಹೊಂದಿವೆ. ಆದರೆ ಹೊಸ ಶಿಲ್ಪದಲ್ಲಿ ನರಭಕ್ಷಕ ಪ್ರವೃತ್ತಿ ಕಾಣಬಹುದು” ಎಂದು ಟೀಕಿಸಿದೆ.

“ಆಕರ್ಷಕತೆಯಿಂದ ವಿರೂಪದ ಕಡೆಗೆ, ಫಿಟ್‌ನಿಂದ ಕೊಬ್ಬಿನ ಕಡೆಗೆ, ಸೌಂದರ್ಯದಿಂದ ಕುರೂಪದ ಕಡೆಗೆ ರಾಷ್ಟ್ರೀಯ ಲಾಂಛನವೂ ಏಕೆ ಕೆಟ್ಟ ಸ್ವಭಾವವನ್ನು ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವು ವಿಫಲವಾಗಿದೆ” ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಆಶಿಷ್‌ ದುಅ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಪ್ರತಿಕ್ರಿಯೆ ನೀಡಿದ್ದು, “ನಮ್ಮ ರಾಷ್ಟ್ರೀಯ ಲಾಂಛನಕ್ಕೆ ಮಾಡಿದ ಅವಮಾನ” ಎಂದಿದ್ದಾರೆ.

ಎನ್‌ಡಿಟಿವಿ ಜೊತೆ ಮಾತನಾಡಿದ ಅವರು, “ಸಿಂಹದ ಮುಖದ ನೋಟದಲ್ಲಿ ಆಕ್ರಮಣಶೀಲತೆ ಇದೆ ಎಂದು ಸೂಕ್ಷ್ಮವಾಗಿ ಗಮನಿಸಬಹುದು, ಆದರೆ ಸಾಮ್ರಾಟ್ ಅಶೋಕ ಹೇಳಲು ಪ್ರಯತ್ನಿಸಿದ್ದು ಇದಲ್ಲ. ತುಂಬಾ ಆಕ್ರಮಣಕಾರಿ ಜೀವಿಗಳ ಮುಖದಲ್ಲಿನ ಶಾಂತ ಅಭಿವ್ಯಕ್ತಿಯನ್ನು ಸಾಮ್ರಾಟ್ ಅಶೋಕ ತೆರೆದಿಟ್ಟಿದ್ದನು. ಅಶೋಕನು ನೀಡಲು ಪ್ರಯತ್ನಿಸುತ್ತಿದ್ದ ಶಾಂತಿಯ ಸಂದೇಶದ ಸಾಕಾರವಾಗಿ ಸಿಂಹಗಳನ್ನು ನೋಡಬಹುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಭವ್ಯವಾದ, ಶಾಂತಿಪ್ರಿಯ, ತಾಳ್ಮೆ ಮತ್ತು ವೈಭವದಿಂದ ಕೂಡಿದ ಸಿಂಹವು ಈಗ ತನ್ನ ಹೊಸ ನೋಟದಲ್ಲಿ ಕೋಪಗೊಂಡಿದೆ, ಕ್ರೂರವಾಗಿದೆ, ಬೆದರಿಸುತ್ತಿದೆ ಮತ್ತು ಹಿಂಸಾತ್ಮಕವಾಗಿ ಕಾಣುತ್ತಿದೆ. ಬಹುತೇಕ ದ್ವೇಷವನ್ನು ಹುಟ್ಟುಹಾಕುವ ರಂಗಾ ಬಿಲ್ಲಾ ಮತ್ತು ಅವರ 8 ವರ್ಷಗಳ ವಿಶ್ವಾಸಘಾತುಕ ಆಡಳಿತವನ್ನು ಇದು ಪುನರಾವರ್ತಿಸುತ್ತದೆ. ಮೋದಿ ಸರ್ಕಾರ ನಮ್ಮ ರಾಷ್ಟ್ರೀಯ ಲಾಂಛನವನ್ನು ಏಕೆ ವಿರೂಪಗೊಳಿಸಿದೆ ಎಂದು ನಾವು ಪ್ರಶ್ನಿಸಬಹುದೇ?” ಎಂದು ಕಾಂಗ್ರೆಸ್ ನಾಯಕ ವಿನಯ್‌ ಕುಮಾರ್‌ ದೊಕನಿಯ ಪ್ರಶ್ನಿಸಿದ್ದಾರೆ.

“ಈ ದೇಶದಲ್ಲಿ ಏನಾದ್ರೂ ಆಗ್ತಿದೆ ಎಲ್ಲರೂ ಸುಮ್ಮನಿರ್ತಾರಾ? ಇದು ರಾಷ್ಟ್ರೀಯ ಚಿಹ್ನೆಗೆ ಮಾಡಿದ ಅವಮಾನ” ಎಂದು ಚಲನಚಿತ್ರ ನಿರ್ದೇಶಕ ವಿನೋದ್ ಕಾಪ್ರಿ ಟ್ವೀಟ್ ಮಾಡಿದ್ದಾರೆ.

‌ಈ ಲಾಂಛನವು ಒಟ್ಟು 9,500 ಕೆಜಿ ತೂಕದ ಕಂಚಿನಿಂದ ಮಾಡಲ್ಪಟ್ಟಿದೆ, 6.5 ಮೀಟರ್ ಎತ್ತರವಿದೆ. ಲಾಂಛನವನ್ನು ಈಗಿನಂತೆ ಕಾಣುವಂತೆ ಮಾಡಲು 100ಕ್ಕೂ ಹೆಚ್ಚು ಕುಶಲಕರ್ಮಿಗಳು ಆರು ತಿಂಗಳ ಕಾಲ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸಾಮ್ರಾಟ್ ಅಶೋಕನ ಕಾಲದ ನಾಲ್ಕು ತಲೆಯ ಸಿಂಹಕ್ಕೂ, ಹೊಸ ಸಂಸತ್‌‌ ಭವನದ ಮೇಲೆ ನಿರ್ಮಿಸಲಾಗಿರುವ ಸಿಂಹಕ್ಕೂ ವ್ಯತ್ಯಾಸಗಳು ಕಂಡು ಬರುತ್ತಿವೆ.

ಭಾರತದ ಲಾಂಛನವನ್ನು ಜನವರಿ 26, 1950ರಂದು ಅಂದರೆ ಭಾರತದ ಸಂವಿಧಾನವು ಜಾರಿಗೆ ಬಂದ ದಿನ ಅಂಗೀಕರಿಸಲಾಗಿದೆ.

ಬಿಜೆಪಿ ನಾಯಕನ ಸಮರ್ಥನೆ

ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರತಿಕ್ರಿಯೆ ನೀಡಿದ್ದು, “ಸಮಾಜದಲ್ಲಿ ಎಲ್ಲವೂ ವಿಕಸನವಾಗುತ್ತಿದೆ. ಸ್ವಾತಂತ್ರ್ಯದ 75 ವರ್ಷಗಳ ನಂತರ ನಾವು ಕೂಡ ವಿಕಸನಗೊಂಡಿದ್ದೇವೆ. ಕಲಾವಿದನ ಅಭಿವ್ಯಕ್ತಿಗೆ ಸರ್ಕಾರದ ಅನುಮೋದನೆ ಅಗತ್ಯವಿಲ್ಲ. ಎಲ್ಲದಕ್ಕೂ ನೀವು ಭಾರತ ಸರ್ಕಾರವನ್ನು, ಪ್ರಧಾನಿ ಮೋದಿಯನ್ನು ದೂಷಿಸಲು ಸಾಧ್ಯವಿಲ್ಲ. ಸಂರಚನೆಯಲ್ಲಿ ಬದಲಾವಣೆ, ಮಾರ್ಪಾಡು ಇದೆ ಎಂಬ ವಾದವನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾವು ಯಾವಾಗಲೂ ಟೀಕಿಸಬಾರದು. ಬಹುಶಃ ಭಾರತ ಇಂದು ವಿಭಿನ್ನವಾಗಿದೆ” ಎಂದು ಸಮರ್ಥಿಸಿದ್ದಾರೆ.

‘ರಾಷ್ಟ್ರ ಲಾಂಛನ ತಿರುಚುವುದು ಶಿಕ್ಷಾರ್ಹ ಅಪರಾಧ’

‘ರಾಷ್ಟ್ರ ಲಾಂಛನವನ್ನು ತಿರುಚುವುದು ಶಿಕ್ಷಾರ್ಹ ಅಪರಾಧ’ ಎಂದು ಚಿಂತಕ, ರಾಜಕೀಯ ವಿಶ್ಲೇಷಕರಾದ ರಾಜಾರಾಮ್ ತಲ್ಲೂರು ತಿಳಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ ಪೋಸ್ಟ್ ಮಾಡಿರುವ ಅವರು, “ಸಾರನಾಥದ ಮ್ಯೂಸಿಯಂನಲ್ಲಿ ಸಂರಕ್ಷಿಸಲಾಗಿರುವ ಅಶೋಕ ಚಕ್ರವರ್ತಿಯ -ಲಯನ್ ಕ್ಯಾಪಿಟಲ್- ಈ ದೇಶದ ಲಾಂಛನ. THE STATE EMBLEM OF INDIA (PROHIBITION OF IMPROPER USE) ACT, 2005 ACT NO. 50 OF 2005 ಎಂಬ ಸಾಂವಿಧಾನಿಕ ರಕ್ಷಣೆ ಈ ಲಾಂಛನಕ್ಕಿದೆ. ಈ ಲಾಂಛನವನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ” ಎಂದು ಎಚ್ಚರಿಸಿದ್ದಾರೆ.

“ಒಕ್ಕೂಟ ಸರ್ಕಾರಕ್ಕೆ ಈ ಲಾಂಛನದ ಬಳಕೆಯನ್ನು ನಿರ್ದೇಶಿಸುವ ಕಾನೂನುಬದ್ಧ ಅಧಿಕಾರ ಇದೆಯೇ ಹೊರತು ಇದನ್ನು ವಿರೂಪಗೊಳಿಸುವ ಅಥವಾ ತನ್ನ ಮನಸ್ಸಿಗೆ ಬಂದಂತೆ ಸ್ವರೂಪದಲ್ಲಿ ಬದಲಾವಣೆಗಳನ್ನು ಮಾಡುವ ಹಕ್ಕಿಲ್ಲ. ಈಗ ಹೊಸ ಸಂಸತ್ ಭವನದ ಮೇಲುಭಾಗದಲ್ಲಿ ಉದ್ಘಾಟನೆಗೊಂಡಿರುವ ವ್ಯಗ್ರ ಸಿಂಹಗಳನ್ನು ಹೊಂದಿರುವ ಪ್ರತಿಮೆಗೂ ಮತ್ತು ಸಾರನಾಥದ ಪ್ರಶಾಂತ ಮುದ್ರೆಯ ಘನಗಂಭೀರ ಸಿಂಹಗಳಿರುವ ದೇಶದ ಲಾಂಛನಕ್ಕೂ ಎದ್ದು ಕಾಣುವ ವ್ಯತ್ಯಾಸ ತೋರುತ್ತಿದೆ. ಇದನ್ನು ಉದ್ಘಾಟನೆಗೆ ಮುನ್ನ ಒಕ್ಕೂಟ ಸರ್ಕಾರ ಗಮನಿಸಬೇಕಿತ್ತು. ಇದೊಂದು ಲೋಪವೇ ಸರಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಲೇ ಗಾಂಡುಗಳ,ಇಷ್ಟು ದಿನ ಸಿಂಹ ಸೈಲಾಂಟಾಗಿ ಕುಳಿತಿತ್ತು,ಆದರೆ ಈಗ ಸಿಂಹ ಘರ್ಜನೆ ಮಾಡ್ತಿದೆ ಪ್ರಪಂಚದಾದ್ಯಂತ ಆ ಸಂಕೇತ ಕಣ್ರೋ ಇದು ಕಲಬೆರಕೆಗಳಾ

  2. ರಾಷ್ಟ್ರೀಯ ಲಾಂಚನವನ್ನು ಬೇಕಾಬಿಟ್ಟಿಯಾಗಿ ತಮಗಿಶ್ಟ ಬಂದಂತೆ ಬದಲಾಯಿಸುವ ಯಾವ ಅದಿಕಾರವೂ, ಯಾವ ಸರ್ಕಾರಕ್ಕೂ ಇಲ್ಲ. ಆದ್ದರಿಂದ ಮೋದಿ ಸರ್ಕಾರದ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...