Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....