Homeಕರ್ನಾಟಕNEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

- Advertisement -
- Advertisement -

“ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ವೇಳೆ ಮೊಟ್ಟೆಗಳನ್ನು ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಬೆಳೆಸಿದಂತಾಗುತ್ತದೆ. ಮೊಟ್ಟೆ ಮತ್ತು ಮಾಂಸದ ನಿಯಮಿತ ಸೇವನೆಯಿಂದ ಉಂಟಾಗುವ ಕೊಲೆಸ್ಟ್ರಾಲ್, ಜೀವನಶೈಲಿಯ ಸಮಸ್ಯೆಗಳಿಗೆ ಕಾರಣವಾಗುತ್ತದೆ” ಎಂಬ ಅಂಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿ ರೂಪಿಸಲಾಗಿರುವ ‘ಆರೋಗ್ಯ ಮತ್ತು ಯೋಗಕ್ಷೇಮ’ದ ಪೊಷಿಷನ್‌ ಪೇಪರ್‌‌ ಪ್ರಸ್ತಾಪಿಸಿದೆ.

ಯಾವುದಾದರೂ ಒಂದು ವಿಷಯವನ್ನು ಯಾವ ಆಧಾರದ ಮೇಲೆ ಬೋಧಿಸಬೇಕಾಗುತ್ತದೆ ಎಂದು ತಿಳಿಸುವ ಪ್ರಬಂಧವೇ ಪೊಸಿಷನ್ ಪೇಪರ್‌. ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪೊಷಿಷನ್‌ ಪೇಪರ್‌ಗಳನ್ನು ಸಲ್ಲಿಸುತ್ತವೆ. ಅವುಗಳ ಆಧಾರದಲ್ಲಿ ಪಠ್ಯಪುಸ್ತಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರವು 26 ವಿಷಯಗಳಿಗೆ ಸಂಬಂಧಿಸಿದಂತೆ ಪೊಸಿಷನ್ ಪೇಪರ್‌ಗಳನ್ನು ಎನ್‌ಸಿಇಆರ್‌ಟಿಗೆ ಸಲ್ಲಿಸಿದ್ದು, ಅವುಗಳಲ್ಲಿನ ಬ್ರಾಹ್ಮಣೀಕರಣ ಒಂದೊಂದಾಗಿ ಹೊರಬೀಳತೊಡಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಮ್ಹಾನ್ಸ್‌ನ ಮಕ್ಕಳ ಮತ್ತು ಹದಿಹರೆಯದವರ ಮನೋವೈದ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಜಾನ್ ವಿಜಯ್ ಸಾಗರ್ ಅವರ ನೇತೃತ್ವದ ತಜ್ಞರ ಸಮಿತಿ ‘ಆರೋಗ್ಯ ಮತ್ತು ಯೋಗಕ್ಷೇಮ’ಕ್ಕೆ ಸಂಬಂಧಿಸಿದ ಪೋಷಿಷನ್‌ ಪೇಪರ್‌ ರೂಪಿಸಿದ್ದು, ಮಕ್ಕಳ ಮೊಟ್ಟೆಯ ಮೇಲೆ ಸಮಿತಿ ಕೆಂಗಣ್ಣಿಟ್ಟಿದೆ.

“ಒಂದೇ ತರಗತಿಯ ಮಕ್ಕಳ ನಡುವೆ ವಿವಿಧ ರೀತಿಯ ಆಹಾರ ವಿತರಿಸುವುದರಿಂದ ಮಕ್ಕಳಲ್ಲಿ ಪೋಷಕಾಂಶಗಳ ವಿತರಣೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಉದಾಹರಣೆಗೆ ಮೊಟ್ಟೆ ಅಥವಾ ಕಾಳು, ಮೊಟ್ಟೆ ಅಥವಾ ಬಾಳೆಹಣ್ಣು ನೀಡುವುದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಎದುರಾಗುತ್ತದೆ” ಎಂದಿದೆ ಸಮಿತಿ.

ಮಕ್ಕಳಲ್ಲಿ ಸಂಕೀರ್ಣ ಬೆಳವಣಿಗೆಗಳಾಗುತ್ತವೆ. ಗೆಳೆತನದಲ್ಲಿ ಭಾವನಾತ್ಮಕ ಅಡಚಣೆಗಳು ಉಂಟಾಗುತ್ತವೆ. ಎಲ್ಲಾ ಮಕ್ಕಳನ್ನು ಸಮಾನವಾಗಿ ಮತ್ತು ಯಾವುದೇ ತಾರತಮ್ಯವಿಲ್ಲದೆ ಪರಿಗಣಿಸುವುದು ಅಧಿಕೃತ ಭಾರತೀಯ ತತ್ವಶಾಸ್ತ್ರ ಅಥವಾ ಧರ್ಮವಾಗಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

‘ಸಾತ್ವಿಕ ಆಹಾರ’- ಪರಿಕಲ್ಪನೆಯನ್ನು ಸಮಿತಿ ಶಿಫಾರಸ್ಸು ಮಾಡುತ್ತದೆ. ಕಡಲೆಕಾಯಿ, ಎಳ್ಳುಂಡೆ, ಬೆಲ್ಲದಂತಹ “ನೈಸರ್ಗಿಕ ಆಹಾರ”ವನ್ನು ಮಕ್ಕಳಿಗೆ ನೀಡಬೇಕು. ಈ ಆಹಾರ ಕ್ರಮವು ಕುಂಠಿತ ಬೆಳವಣಿಗೆ ಮತ್ತು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತವೆ ಎಂಬುದು ಸಮಿತಿಯ ವಾದ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೋಟೀನ್ ಕೊರತೆಯಿಂದ ಬಳಲುತ್ತಿರುವ 6 ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುವ ಮಹತ್ವದ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸಿದೆ. ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಯೋಜಿಸಿದೆ. ಹೀಗಿರುವ ಸಮಿತಿಯ ಸಲಹೆಗಳು ಆತಂಕಕಾರಿಯಾಗಿವೆ.

ಈ ಪೊಸಿಷನ್‌ ಪೇಪರ್‌ನ ನೇತೃತ್ವ ವಹಿಸಿದ್ದ ವಿಜಯ್‌ ಸಾಗರ್‌, “ಕೊಬ್ಬಿನಾಂಶ ಮುಕ್ತವಾಗಿರುವಂತಹ ಬಿಸಿಯೂಟ ನೀಡಬೇಕು. ಹೆಚ್ಚುವರಿ ತೂಕ, ಕೊಬ್ಬಿನಿಂದ ಉಂಟಾಗುವ ಸ್ಥೂಲಕಾಯತೆ, ಹಾರ್ಮೋನ್ ಅಸಮತೋಲನವನ್ನು ತಡೆಗಟ್ಟಲು ಮೊಟ್ಟೆ, ಹಾಲು, ಬಿಸ್ಕತ್ತುಗಳಂತಹ ಪದಾರ್ಧಗಳನ್ನು ನೀಡುವುದನ್ನು ನಿಷೇಧಿಸಬೇಕು. ಹಾರ್ಮೊನ್ ವೃದ್ಧಿಗೆ ಪ್ರಾಣಿ ಮೂಲ ಆಹಾರಗಳು ತೊಡಕಾಗಿವೆ…” ಎಂದಿದ್ದಾರೆ.

ಭೀಮ, ಹನುಮಂತನ ಆಹಾರ ಪದ್ಧತಿಯ ಕುರಿತ ಕತೆಗಳು ಮಕ್ಕಳಲ್ಲಿ ಧೈರ್ಯ, ಶೌರ್ಯ, ಉತ್ತಮ ಆಹಾರ ಸೇವನೆಗೆ ಪ್ರೇರಣೆಯಾಗುತ್ತವೆ. ಆರೋಗ್ಯ ರಕ್ಷಣೆಯ ಕುರಿತ ಜಾನಪದ ಹಾಗೂ ಪಂಚತಂತ್ರ ಕಥೆಗಳನ್ನು ಮಕ್ಕಳಿಗೆ ಹೇಳಿಕೊಡಬೇಕು ಎಂದು ಸಮಿತಿ ಸಲಹೆ ನೀಡುತ್ತದೆ.

ಇದನ್ನೂ ಓದಿರಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಮೊಟ್ಟೆ ನೀಡುವುದು ಅಗತ್ಯ: ವೈದ್ಯರ ಸಲಹೆ

“ಹಸಿರು ಕ್ರಾಂತಿಯ ನಂತರ ಹೆಚ್ಚೆಚ್ಚು ಶರ್ಕರಪಿಷ್ಟವಿರುವ ಏಕದಳ ಬೆಳೆಗಳಿಗೆ ಮಾತ್ರ ಹೆಚ್ಚಿನ ಪ್ರೋತ್ಸಾಹ ದೊರೆಯಿತು, ಬೆಂಬಲ ಬೆಲೆಯೂ ಅದಕ್ಕೇ ಸಿಗುತ್ತದೆ, ಸಾರ್ವಜನಿಕ ಆಹಾರ ವ್ಯವಸ್ಥೆ (ರೇಷನ್ ಅಂಗಡಿ)ಯಲ್ಲೂ ಅವೇ ದೊರೆಯುತ್ತವೆ ಮತ್ತು ಅವೇ ಹೆಚ್ಚು ಅಗ್ಗದ ಆಹಾರ ಪದಾರ್ಥಗಳಾಗಿವೆ. ಹೀಗಾಗಿ ಹಲವು ರೀತಿಯ ರೋಗಗಳು ಜನರನ್ನು ಬಾಧಿಸುತ್ತಿವೆ. ಇವೆಲ್ಲಕ್ಕೆ ಮೊಟ್ಟೆ ಅತ್ಯುತ್ತಮ ಪರಿಹಾರವಾಗಬಲ್ಲದು. ಜೊತೆಗೆ ದೇಶದ ಬಹುಸಂಖ್ಯಾತರಿಗೆ ಮೊಟ್ಟೆ ತಿನ್ನುವುದು ಅಪಥ್ಯವೂ ಅಲ್ಲ. ಆದರೆ ಹುಸಿ ಶ್ರೇಷ್ಠತೆಯ ವ್ಯಸನ ಹತ್ತಿಸಿಕೊಂಡು, ಹುಸಿ ಸಾಂಸ್ಕೃತಿಕ ಮೇಲ್ಮೆಯನ್ನು ಪ್ರತಿಪಾದಿಸುವ ಚಿಂತನೆಗಳು ಇದಕ್ಕೆ ಅಡ್ಡಿಯಾಗಿವೆ. ಮಕ್ಕಳಿಗೆ ಮೊಟ್ಟೆಯನ್ನು ಕೊಡಲು ವಿರೋಧಿಸುವವರು ವಾಸ್ತವದಲ್ಲಿ ಜೀವವಿರೋಧಿಗಳಾಗಿದ್ದಾರೆ. ಇದು ಅರ್ಥವಾಗದೇ ವಿರೋಧಿಸುತ್ತಿರುವವರೂ ಇದ್ದಾರೆ, ಅರ್ಥವಾಗಿಯೂ ವಿರೋಧಿಸುತ್ತಿರುವವರು ಇದ್ದಾರೆ. ಇದೇ ದುರಂತ” ಎನ್ನುತ್ತಾರೆ ಡಾ.ಎಚ್.ವಿ.ವಾಸು.

“ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಐದು ದಿನ ಮೊಟ್ಟೆಗಳನ್ನು ನೀಡುತ್ತಿದ್ದಾರೆ. ಈ ರಾಜ್ಯಗಳಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲೇ ಕನಿಷ್ಠ ಮಟ್ಟದಲ್ಲಿದೆ. ಮಕ್ಕಳಲ್ಲಿ ಕುಪೋಷಣೆ ಇಲ್ಲವೇ ಇಲ್ಲ ಅನ್ನುವ ಮಟ್ಟಕ್ಕೆ ಈ ರಾಜ್ಯಗಳು ಯಶಸ್ಸು ಪಡೆದಿವೆ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬೇವರ್ಸಿ ಸರ್ಕಾರಕ್ಕೆ ಇದಕ್ಕಿಂತ ಒಳ್ಳೆಯ ವಿಷಯ ಸಿಕ್ಕಲಿಲ್ಲವೇ? ಯಾಕೆ ಈ ಬೇವರ್ಸಿ ಬ್ರಹ್ಮಣ್ಯದ ಕುನ್ನಿಗಳಿಗೆ ಬಹುಜನರ ಆಹಾರದ ಮೇಲೆ ಕಣ್ಣು? ಇದನ್ನ ಪ್ರಸ್ತಾಪಿಸಿದ ಮನೋವೈದ್ಯನಿಗೆ ಬಹುಶಃ ಗುಣಪಡಿಸಲಾಗದ ಜಾತಿ ರೋಗ ವಿರಬೇಕು,ಅಲ್ಲಾ ಬೆಳೆಯುವ ಮಕ್ಕಳು ಅದರಲ್ಲಿಯೂ ಗ್ರಾಮೀಣ ಮತ್ತು ನಗರದ ಬಡ ಮಕ್ಕಳಿಗೆ ಯಾವ ರೀತಿಯ ಅಗತ್ಯ ಪೋಷಕಾಂಶಗಳ ಕೊರತೆ ಇದೆ ಅನ್ನೋದು ಸರ್ವರಿಗೂ ತಿಳಿದ ವಿಷಯ, ಆ 3ಶೇ ಸಂಖ್ಯೆಯ ಸಮುದಾಯದವರು ಏನನ್ನಾದರೂ ತಿನ್ನಲು ಅರ್ಹರು ಅದೇ ರೀತಿಯಲ್ಲಿ ಬಹುಸಂಖ್ಯಾತ ಉಳಿದ ಸಮುದಾಯದ ಮಕ್ಜಳು, ಈ 3ಶೇ ಸಮುದಾಯದವರ ಆಹಾರವನ್ನ ಉಳಿದವರ ಮೇಲೆ ಹೇರಲು ಅಧಿಕಾರ ಕೊಟ್ಟವರಾರು ಮೂರ್ಖರೆ ಅಥವಾ ಬ್ರಾಹ್ಮಣ್ಯದ ಗುಲಾಮರೆ?

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...