Homeಚಳವಳಿಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯ ಭಾಗವಾಗಿ ಸಲ್ಲಿಸಲಾಗಿರುವ 26 ಪೊಸಿಷನ್ ಪೇಪರ್‌ಗಳು ವಿವಾದ ಕಾರಣವಾಗಿವೆ. ಇತಿಹಾಸ ವಿಷಯದ ತಜ್ಞರು ಸಲ್ಲಿಸಿರುವ ವರದಿಯ ಶಿಫಾರಸ್ಸಿನಲ್ಲಿ “ಭಾರತದ ಇತಿಹಾಸದಲ್ಲಿ ನಡೆದ ಹಿಂದೂ ಹತ್ಯಾಕಾಂಡಗಳು ಸೇರಿಸಬೇಕು” ಎಂಬುದಕ್ಕೆ ಇತಿಹಾಸ ತಜ್ಞರು, ಪ್ರಾಧ್ಯಾಪಕರು, ನಿವೃತ್ತ ಉಪಕುಲಪತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂತಹ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸುವುದು ಮಕ್ಕಳ ಮನಸ್ಸಿನಲ್ಲಿ ಪರಸ್ಪರ ದ್ವೇಷ, ವೈಷಮ್ಯದ ಭಾವನೆಯನ್ನು ಮೂಡಿಸುತ್ತದೆ. ಇಂತಹ ಪಠ್ಯ ಸಂವಿಧಾನದ ಆಶಯಗಳಿಗೆ ಮತ್ತು ಶೈಕ್ಷಣಿಕ ಚೌಕಟ್ಟಿಗೆ ವಿರುದ್ಧವಾಗಿದ್ದು, ಸಮಾಜದ ಶಾಂತಿ, ಸೌಹಾರ್ದತೆ, ಸಹಭಾಳ್ವೆಗೆ ಭಂಗ ತರುತ್ತದೆ ಎಂದು ಗುಲ್ಬರ್ಗಾ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ-ಕುಲಪತಿಗಳಾದ ಪ್ರೊ. ಎಸ್.ಚಂದ್ರಶೇಖರ್, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಓ. ಅನಂತರಾಮಯ್ಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಅಶೋಕ್ ಶೆಟ್ಟರ್, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಭಾರತದ ಇತಿಹಾಸದಲ್ಲಿ ಅನೇಕ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರಣಗಳಿಗಾಗಿ ಹಿಂದೂ – ಬೌದ್ಧರ ನಡುವೆ, ಹಿಂದೂ – ಜೈನರ ನಡುವೆ, ಹಿಂದೂ – ಹಿಂದೂಗಳ ನಡುವೆಯೇ ಹತ್ಯಾಕಾಂಡಗಳು ನಡೆದಿವೆ. ಅವುಗಳನ್ನು ಮರೆಮಾಚಿ ಯಾವುದೋ ಒಂದು ಧರ್ಮಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತದ ಇತಿಹಾಸದಲ್ಲಿ ಹಿಂದೂಗಳ ಹತ್ಯಾಕಾಂಡವಷ್ಟೆ ನಡೆದಿದೆ ಎಂದು ಬಿಂಬಿಸುವುದು ಚರಿತ್ರೆಗೆ ಮಾಡಿದ ಅಪಚಾರವಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚರಿತ್ರೆಯಲ್ಲಿ ನಡೆದಿರುವ ಹತ್ಯಾಕಾಂಡಗಳಿಗೆ ಮೊದಲೂ ಇಲ್ಲ, ಕೊನೆಯೂ ಇಲ್ಲ. ಹರಪ್ಪ ನಾಗರಿಕತೆಯ ಅಂತ್ಯಕ್ಕೆ ಹೊರಗಿನಿಂದ ಬಂದ ಆಕ್ರಮಣಕಾರರು ಕಾರಣವೆಂದು ಹಲವು ಇತಿಹಾಸಕಾರರು ಬರೆದಿಲ್ಲವೇ? ಅಶೋಕ ಕಳಿಂಗ ರಾಜ್ಯದ ಮೇಲೆ ನಡೆಸಿದ ಯುದ್ಧದ ಭೀಕರತೆ ಕುರಿತು ತನ್ನ ಶಾಸನದಲ್ಲಿಯೇ ತಿಳಿಸಿಲ್ಲವೇ? ಮಾಗಡಿ ಸಮೀಪದ ಕಲ್ಯದಲ್ಲಿ ಶ್ರೀವೈಷ್ಣವರು ಜೈನರನ್ನು ಕೊಲ್ಲಲಿಲ್ಲವೇ? ರೈತರ ಮೇಲಿನ ತೆರಿಗೆ ವಿರೋಧಿಸಿದ ನೂರಾರು ಜಂಗಮರನ್ನು ಮಾತುಕತೆಗೆ ಕರೆದು ಚಿಕ್ಕದೇವರಾಜ ಒಡೆಯರ್ ಹತ್ಯೆಗೈಯಲಿಲ್ಲವೇ? ಮೈಸೂರು ರಾಜ್ಯದಲ್ಲಿ ಮರಾಠರು ಮಾಡಿದ ಲೂಟಿ ಮತ್ತು ಸಾವು ನೋವುಗಳಿಗೆ ಲೆಕ್ಕವಿದೆಯೆ? ದಲಿತರು, ಬುಡಕಟ್ಟು ಜನಾಂಗಗಳ ಮೇಲೆ ನೂರಾರು ಹತ್ಯಾಕಾಂಡಗಳು ನಡೆದಿಲ್ಲವೇ? ಅವುಗಳಲ್ಲಿ ತಮಗೆ ಬೇಕಾದ್ದನ್ನು ಮಾತ್ರ ಆಯ್ದು ಹೇಳುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ. ಇತಿಹಾಸದಿಂದ ಸ್ನೇಹ, ಪ್ರೀತಿ, ಸಹಬಾಳ್ವೆ, ಸೌಹಾರ್ದತೆಯ ವಿಚಾರಗಳನ್ನು ಮುಗ್ಧ ಮನಸಿನ ಮಕ್ಕಳಿಗೆ ಕಲಿಸುವ ಮೂಲಕ ಬೌದ್ಧಿಕ ವಿಕಾಸಗೊಳಿಸಬೇಕೇ ಹೊರತು; ಕ್ರೌರ್ಯ, ದ್ವೇಷ, ಅಸೂಯೆಯ ಮೂಲಕ ವಿಕಾರಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಗೆ ಡಾ. ಎಸ್.ಪಿ. ವಾಗೀಶ್ವರಿ,ಪ್ರಾಧ್ಯಾಪಕರು, ಕ್ರೈಸ್ಟ್ ವಿಶ್ವವಿದ್ಯಾಲಯ, ಡಾ. ಹಂ.ಗು. ರಾಜೇಶ್
ಸಂಪಾದಕರು, ಇತಿಹಾಸ ದರ್ಪಣ, ಡಾ. ಅಶ್ವತ್ಥನಾರಾಯಣ, ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಡಾ. ಕೆ.ಸದಾಶಿವ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಎಂ. ಜಮುನಾರವರು ಸಹಿ ಹಾಕಿದ್ದಾರೆ.

ಇದನ್ನೂ ಓದಿ; NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...