Homeಕರ್ನಾಟಕಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

ಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಕ್ಕೆ ನಾರಾಯಣ ಗುರು ಪಾಠವನ್ನು ಮರು ಸೇರ್ಪಡೆ ಮಾಡುವಂತೆ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ಭುಗಿಲೆದ್ದಿದ್ದ ಬಿಲ್ಲವ ಸಮಾಜದ ಹೋರಾಟಕ್ಕೆ ಕೇಸರಿ ಪಡೆ ಮಣಿದಿದೆ.

ಅವ್ಯವಸ್ಥೆಗಳ ಆಗರವಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯು, ಮುಗಿಯದ ಪುರಾಣವಾಗಿ ಮಾರ್ಪಟ್ಟಿದೆ. ಅಲ್ಲಿದ್ದದ್ದನ್ನು ಇಲ್ಲಿಗೆ, ಇಲ್ಲಿದ್ದಿದ್ದನ್ನು ಅಲ್ಲಿಗೆ ಸ್ಥಾನ ಪಲ್ಲಟ ಮಾಡುವಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಇಡೀ ಪಠ್ಯಪುಸ್ತಕವನ್ನೇ ರದ್ದು ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದರೂ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಷ್ಟೇ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪರಿಷ್ಕರಣೆ ಸಮಿತಿಯು ಹತ್ತನೇ ತರಗತಿಯ ಸಮಾಜ ವಿಜ್ಞಾನದಲ್ಲಿದ್ದ ಶ್ರೀ ನಾರಾಯಣಗುರು ವಿಷಯಾಂಶವನ್ನು ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕಕ್ಕೆ ವರ್ಗಾಯಿಸಿತ್ತು. ಆದರೆ ಅದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕನ್ನಡ ಭಾಷಾ ವಿಷಯದಿಂದ ಪುನಃ ಸಮಾಜ ವಿಜ್ಞಾನಕ್ಕೆ ನಾರಾಯಣ ಗುರು ಪಠ್ಯ ವರ್ಗಾಯಿಸಿ ಸರ್ಕರ ಆದೇಶ ಹೊರಡಿಸಿದೆ.

“10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಇರುವ ಶ್ರೀ ನಾರಾಯಣಗುರು ಅವರ ವಿಷಯಾಂಶಗಳನ್ನು 2022-23ನೇ ಸಾಲಿಗೆ ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನದಿಂದ ಕೈಬಿಟ್ಟು, ಹಿಂದಿನಂತೆ ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಅಳವಡಿಸಿಕೊಂಡು ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರವನ್ನೂ ಬರೆದಿದ್ದರು.

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಸುನಿಲ್‌ಕುಮಾರ್‌ ಮನವಿ ಮಾಡಿದ್ದರು.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಬೃಹತ್ ಹೋರಾಟವನ್ನು ಬಿಲ್ಲವ ಸಮುದಾಯ ಕೈಗೊಂಡಿತ್ತು.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಹೊರಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...