Homeಕರ್ನಾಟಕಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ವಿರುದ್ಧದ ಪ್ರಕರಣಗಳನ್ನು ಪರಿಶೀಲಿಸಲು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜುಬೇರ್‌ ಅವರನ್ನು ಪ್ರಸ್ತುತ ಸೀತಾಪುರ ಜೈಲಿನಲ್ಲಿ ಇರಿಸಲಾಗಿದೆ.

ಮೂಲಗಳ ಪ್ರಕಾರ, ಇಬ್ಬರು ಸದಸ್ಯರ ಎಸ್‌ಐಟಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಪ್ರೀತೀಂದರ್ ಸಿಂಗ್ ನೇತೃತ್ವ ವಹಿಸಲಿದ್ದು, ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮಿತ್ ಕುಮಾರ್ ವರ್ಮಾ ತಂಡದ ಸದಸ್ಯರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರ, ಲಖಿಂಪುರ ಖೇರಿ, ಹತ್ರಾಸ್ ಮತ್ತು ಮುಜಾಫರ್‌ನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದ್ದರೂ, ಕಳೆದ ವರ್ಷ ಇದೇ ಜಿಲ್ಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖಿಂಪುರ ಖೇರಿ ಜಿಲ್ಲಾ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಜುಬೇರ್‌‌ ಜೈಲಿನಲ್ಲಿಯೇ ಇರುವಂತಾಗಿದೆ.

ಜುಬೇರ್ ಅವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ಬುಧವಾರ ವಿಚಾರಣೆ ನಡೆಸಲಿದೆ. ಜುಬೈರ್ ವಿರುದ್ಧ ಹಲವು ಸ್ಥಳಗಳಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಎಸ್‌ಐಟಿ ರಚನೆಗೆ ನಿರ್ಧರಿಸಲಾಗಿದೆ ಮತ್ತು ಈ ವಿಷಯದಲ್ಲಿ “ಸಂಪೂರ್ಣ ತನಿಖೆ” ಅತ್ಯಗತ್ಯ ಎಂದು ಮೂಲಗಳು ತಿಳಿಸಿವೆ.

ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಜೂನ್ 27 ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿದ್ದರು. ಮುಸ್ಲಿಮ್ ಮಹಿಳೆಯರನ್ನು ರೇಪ್‌ ಮಾಡುವುದಾಗಿ ಹೇಳಿಕೆ ನೀಡಿರುವ ಹಿಂದುತ್ವ ಧರ್ಮಗುರು ಬಜರಂಗ ಮುನಿಯನ್ನು ‘ಹೇಟ್‌ ಮಾಂಗರ್‌‌’ (ಅಲ್ಪಸಂಖ್ಯಾತರ ಮೇಲೆ ದ್ವೇಷ ಹರಡುವವನು) ಎಂದು ಕರೆದಿದ್ದಕ್ಕೆ ಸೀತಾಪುರದಲ್ಲಿ ಜುಬೇರ್‌‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಜುಬೇರ್ ವಿರುದ್ಧ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು. ಖಾಸಗಿ ಟಿವಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದ ಆಶಿಶ್ ಕುಮಾರ್ ಕಟಿಯಾರ್ ಎಂಬ ಸ್ಥಳೀಯ ವರದಿಗಾರ ಜುಬೈರ್ ವಿರುದ್ಧ ಜಿಲ್ಲೆಯ ಮೊಹಮ್ಮದಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು.

ಕಟಿಯಾರ್ ತಮ್ಮ ದೂರಿನಲ್ಲಿ, “ಜುಬೈರ್ ಅವರು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ವೀಡಿಯೊವನ್ನು “ಎಡಿಟ್” ಮಾಡಿದ್ದಾರೆ. ಅಲ್ಲದೆ ತಮ್ಮ ಆಲ್ಟ್ ನ್ಯೂಸ್ ವೆಬ್‌ಸೈಟ್‌ನಲ್ಲಿ ಅದನ್ನು ಪೋಸ್ಟ್ ಮಾಡಿದ್ದಾರೆ” ಎಂದಿದ್ದರು. ಜಿಲ್ಲಾ ಪೊಲೀಸರು ಕೆಲ ದಿನಗಳ ಹಿಂದೆ ಜುಬೈರ್ ವಿರುದ್ಧ ಬಂಧನ ವಾರಂಟ್ ಪಡೆದು ಜುಬೇರ್‌ ಅವರನ್ನು ಬಂಧಿಸಿ ಸೀತಾಪುರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಮೊದಲಿಗೆ ದೆಹಲಿ ಪೊಲೀಸರು ಬಂಧಿಸಿದರು.

ಇದನ್ನೂ ಓದಿರಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಸಿನಿಮಾ ದೃಶ್ಯವೊಂದರ ಕಾರಣಕ್ಕೆ ಜುಬೇರ್‌ ಬಂಧನವಾದ ಬಳಿಕ ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ಮೇಲೆ ತನಿಖೆ ನಡೆಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್ ಮೂಲಕ ಖ್ಯಾತರಾಗಿದ್ದ ಜುಬೇರ್‌ ಅವರು, ದ್ವೇಷ ಭಾಷಣಕಾರರನ್ನು ಅನೇಕ ಸಲ ಬಯಲಿಗೆಳೆದಿದ್ದಾರೆ. ದ್ವೇಷ ಭಾಷಣಗಳನ್ನು ಹೊರಗೆಳೆದು ಪೊಲೀಸರ ಗಮನಕ್ಕೆ ತರುವಲ್ಲಿ ಮುಂಚೂಣಿಯಲ್ಲಿದ್ದ ಜುಬೇರ್‌ ಅವರನ್ನು ಪೊಲೀಸರು ತೀವ್ರತರನಾಗಿ ತನಿಖೆಗೆ ಒಳಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...