Homeಕರ್ನಾಟಕಬರಹಗಾರರಿಗೆ ಸರಣಿ ಜೀವ ಬೆದರಿಕೆ ಪತ್ರ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಆಕ್ರೋಶ

ಬರಹಗಾರರಿಗೆ ಸರಣಿ ಜೀವ ಬೆದರಿಕೆ ಪತ್ರ: ಸರ್ಕಾರದ ನಿರ್ಲಕ್ಷ್ಯಕ್ಕೆ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೆ ಪದೆ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ ಎಂದಿದ್ದಾರೆ.

ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವಾ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ. ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗೂ ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗೂ ಮನು ಸಂಸ್ಕೃತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕೃತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ. ಈಗಷ್ಟೆ ಆ ಇಬ್ಬರು ಹುತಾತ್ಮ ಚಿಂತಕರನ್ನು ಕೊಂದವರ ವಿಚಾರಣೆ ಪ್ರಾರಂಭವಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಸಿಎಂಗಳಾದ ಎಚ್‌ಡಿಕೆ, ಸಿದ್ದರಾಮಯ್ಯ, ಸಾಹಿತಿ ಕುಂವೀ ಸೇರಿ 61+ ಜನರಿಗೆ ಕೊಲೆ ಬೆದರಿಕೆ

‘ಸರ್ವಜನಾಂಗದ ಶಾಂತಿಯ ತೋಟ’ ಎಂದು ಹೆಸರಾದ ಕನ್ನಡ ನಾಡಿನಲ್ಲಿ ಸಮರ್ಥವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಬೇಕಾದ ತುರ್ತು ಅಗತ್ಯವಿದೆ. ಯಾಕೆಂದರೆ ನಾಡಿನಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆ ಕುಸಿದು ಬೀಳುತ್ತಿದೆ. ಆದ್ದರಿಂದ ಸರ್ಕಾರ ಕ್ರಿಯಾಶೀಲವಾಗಬೇಕು. ಬೆದರಿಕೆ ಪತ್ರಗಳನ್ನು ಬರೆಯುತ್ತಿರುವ ದುರುಳರನ್ನು ಕೂಡಲೆ ಪತ್ತೆ ಹಚ್ಚಿ, ಶಿಕ್ಷೆ ವಿಧಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...