Homeಕರ್ನಾಟಕಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

ಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

- Advertisement -
- Advertisement -

ಮಂಗಳೂರಿನಲ್ಲಿರುವ ಅವ್ಯವಸ್ಥೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ವಿಶೇಷವಾದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳೂರಿನ ನಿವಾಸಿ, ಹೋರಾಟಗಾರ ಸುನಿಲ್ ಬಜಿಲಕೇರಿಯವರು ಈ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಸಮಸ್ಯೆಗಳ ಕುರಿತು ವಿಡಿಯೊ ಮಾಡಿ ಕಳುಹಿಸುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪು ಹಾಗೂ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಗುಂಪು ಸ್ಪರ್ಧೆಗೆ 10,000 ರೂ. ಪ್ರಥಮ ಬಹುಮಾನ, 5,000 ರೂ. ದ್ವಿತೀಯ ಬಹುಮಾನ, ವೈಯಕ್ತಿಕ ಸ್ಪರ್ಧೆಗೆ ಮೊದಲ ಬಹುಮಾನ 5,000 ರೂ., ಎರಡನೇ ಬಹುಮಾನ 2,500 ರೂ. ನಿಗದಿ ಮಾಡಲಾಗಿದೆ.

ಏನಿದು ಸ್ಪರ್ಧೆ?

ನಿಮ್ಮ ಗಮನಕ್ಕೆ ಬರುವ ರೋಡು, ತೋಡು, ಒಳಚರಂಡಿ ಇತ್ಯಾದಿ ಯಾವುದೇ ಸಮಸ್ಯೆ ಇದ್ದರೂ ಅದನ್ನು 3 ನಿಮಿಷಗಳ ವಿಡಿಯೋ ಮಾಡಿ, ನಿಮ್ಮ ಫೇಸ್‌ಬುಕ್‌ ಅಥವಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಬೇಕು.

ಇಲ್ಲಿ ನೀವು ವೈಯಕ್ತಿಕವಾಗಿ ಪೋಸ್ಟ್‌ ಹಾಕಿದರೆ, ವೈಯಕ್ತಿಕ ಸ್ಪರ್ಧೆ ಎಂದು ಪರಿಗಣಿಸಲಾಗುವುದು. ಒಂದು ಊರಿನವರು/ ಸಂಸ್ಥೆಯವರು/ ಗುಂಪಿನವರು ಭಾಗವಹಿಸಿ ಹಾಕಿದರೆ ಅದನ್ನು ಗುಂಪು ಸ್ಪರ್ಧೆ ಎಂದು ಪರಿಗಣಿಸಲಾಗುವುದು.

ನೀವು ಪೋಸ್ಟ್ ಮಾಡಿದ ಬಳಿಕ ಪೋಸ್ಟ್‌ನ ಲಿಂಕ್‌ಅನ್ನು ವಾಟ್ಸಾಪ್ ನಂಬರ್ +91 99166 91455ಕ್ಕೆ ಕಳುಹಿಸಬೇಕು. ಇದು ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌‌ಗಳಿಗೆ ಮಾತ್ರ ಸೀಮಿತವಾದ ಸ್ಪರ್ಧೆ. ಯಾವುದೇ ವ್ಯಕ್ತಿ ನಿಂದನೆ, ಜಾತಿ, ಮತದ ವಿಷಯದ ಮಾತುಗಳಿದ್ದರೆ ತಿರಸ್ಕರಿಸಲಾಗುವುದು.

“ಯಾರ ಪೋಸ್ಟ್ ಗೆ ಹೆಚ್ಚು ಲೈಕ್ ಬಂದಿದೆಯೋ ಅವರಿಗೆ ಈ ಎರಡು ಪ್ರಶಸ್ತಿ ನೀಡಲಾಗುವುದು. ದಿನಾಂಕ 21-7-22 ರಿಂದ 25-7-22ರ ತನಕ ನೀವು ಪೋಸ್ಟ್ ಮಾಡಿ ಲಿಂಕ್ ಕಳಿಸಬಹುದು. ಆನಂತರ ಸ್ವೀಕರಿಸಲಾಗದು. ನೀವು ಪೋಸ್ಟ್ ಮಾಡಿದ ದಿನಾಂಕದಿಂದ ಒಂದು ವಾರಗಳ ಕಾಲದ ಲೈಕ್ಅನ್ನು ಪರಿಗಣಿಸಿ ಬಹುಮಾನ ನೀಡಲಾಗುವುದು” ಎಂದು ಸುನಿಲ್‌ ಮಾಹಿತಿ ನೀಡಿದ್ದಾರೆ.

ಹೋರಾಟಗಾರ ಸುನಿಲ್ ಬಜಿಲಕೇರಿ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸುನಿಲ್‌ ಬಜಿಲಕೇರಿ ಅವರು, “ಮಂಗಳೂರಿನಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಕುರಿತು ಗಮನ ಸೆಳೆಯಲು ಈ ಸ್ಪರ್ಧೆಯನ್ನು ಆಯೋಜಿಸಿದ್ದೇನೆ. ಜನ ಜಾಗೃತಿ ಮತ್ತು ನಮ್ಮ ಊರಿನ ಅಭಿವೃದ್ಧಿ ವಿಷಯದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ” ಎಂದು ತಿಳಿಸಿದರು.

“ಸ್ಪರ್ಧೆಯನ್ನು ಘೋಷಿಸಿದ ಬಳಿಕ ಕರೆಗಳು ಬರಲು ಶುರುವಾಗಿವೆ. ಇದು ಜನರಿಂದ ಜನರಿಗಾಗಿ ಜನರಿಗೋಸ್ಕರವೇ ಮಾಡಿರುವ ಸ್ಪರ್ಧೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...