Homeಕರ್ನಾಟಕಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

ಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

- Advertisement -
- Advertisement -

ಮಂಗಳೂರಿನಲ್ಲಿರುವ ಅವ್ಯವಸ್ಥೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ವಿಶೇಷವಾದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳೂರಿನ ನಿವಾಸಿ, ಹೋರಾಟಗಾರ ಸುನಿಲ್ ಬಜಿಲಕೇರಿಯವರು ಈ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಸಮಸ್ಯೆಗಳ ಕುರಿತು ವಿಡಿಯೊ ಮಾಡಿ ಕಳುಹಿಸುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪು ಹಾಗೂ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಗುಂಪು ಸ್ಪರ್ಧೆಗೆ 10,000 ರೂ. ಪ್ರಥಮ ಬಹುಮಾನ, 5,000 ರೂ. ದ್ವಿತೀಯ ಬಹುಮಾನ, ವೈಯಕ್ತಿಕ ಸ್ಪರ್ಧೆಗೆ ಮೊದಲ ಬಹುಮಾನ 5,000 ರೂ., ಎರಡನೇ ಬಹುಮಾನ 2,500 ರೂ. ನಿಗದಿ ಮಾಡಲಾಗಿದೆ.

ಏನಿದು ಸ್ಪರ್ಧೆ?

ನಿಮ್ಮ ಗಮನಕ್ಕೆ ಬರುವ ರೋಡು, ತೋಡು, ಒಳಚರಂಡಿ ಇತ್ಯಾದಿ ಯಾವುದೇ ಸಮಸ್ಯೆ ಇದ್ದರೂ ಅದನ್ನು 3 ನಿಮಿಷಗಳ ವಿಡಿಯೋ ಮಾಡಿ, ನಿಮ್ಮ ಫೇಸ್‌ಬುಕ್‌ ಅಥವಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಬೇಕು.

ಇಲ್ಲಿ ನೀವು ವೈಯಕ್ತಿಕವಾಗಿ ಪೋಸ್ಟ್‌ ಹಾಕಿದರೆ, ವೈಯಕ್ತಿಕ ಸ್ಪರ್ಧೆ ಎಂದು ಪರಿಗಣಿಸಲಾಗುವುದು. ಒಂದು ಊರಿನವರು/ ಸಂಸ್ಥೆಯವರು/ ಗುಂಪಿನವರು ಭಾಗವಹಿಸಿ ಹಾಕಿದರೆ ಅದನ್ನು ಗುಂಪು ಸ್ಪರ್ಧೆ ಎಂದು ಪರಿಗಣಿಸಲಾಗುವುದು.

ನೀವು ಪೋಸ್ಟ್ ಮಾಡಿದ ಬಳಿಕ ಪೋಸ್ಟ್‌ನ ಲಿಂಕ್‌ಅನ್ನು ವಾಟ್ಸಾಪ್ ನಂಬರ್ +91 99166 91455ಕ್ಕೆ ಕಳುಹಿಸಬೇಕು. ಇದು ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌‌ಗಳಿಗೆ ಮಾತ್ರ ಸೀಮಿತವಾದ ಸ್ಪರ್ಧೆ. ಯಾವುದೇ ವ್ಯಕ್ತಿ ನಿಂದನೆ, ಜಾತಿ, ಮತದ ವಿಷಯದ ಮಾತುಗಳಿದ್ದರೆ ತಿರಸ್ಕರಿಸಲಾಗುವುದು.

“ಯಾರ ಪೋಸ್ಟ್ ಗೆ ಹೆಚ್ಚು ಲೈಕ್ ಬಂದಿದೆಯೋ ಅವರಿಗೆ ಈ ಎರಡು ಪ್ರಶಸ್ತಿ ನೀಡಲಾಗುವುದು. ದಿನಾಂಕ 21-7-22 ರಿಂದ 25-7-22ರ ತನಕ ನೀವು ಪೋಸ್ಟ್ ಮಾಡಿ ಲಿಂಕ್ ಕಳಿಸಬಹುದು. ಆನಂತರ ಸ್ವೀಕರಿಸಲಾಗದು. ನೀವು ಪೋಸ್ಟ್ ಮಾಡಿದ ದಿನಾಂಕದಿಂದ ಒಂದು ವಾರಗಳ ಕಾಲದ ಲೈಕ್ಅನ್ನು ಪರಿಗಣಿಸಿ ಬಹುಮಾನ ನೀಡಲಾಗುವುದು” ಎಂದು ಸುನಿಲ್‌ ಮಾಹಿತಿ ನೀಡಿದ್ದಾರೆ.

ಹೋರಾಟಗಾರ ಸುನಿಲ್ ಬಜಿಲಕೇರಿ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸುನಿಲ್‌ ಬಜಿಲಕೇರಿ ಅವರು, “ಮಂಗಳೂರಿನಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಕುರಿತು ಗಮನ ಸೆಳೆಯಲು ಈ ಸ್ಪರ್ಧೆಯನ್ನು ಆಯೋಜಿಸಿದ್ದೇನೆ. ಜನ ಜಾಗೃತಿ ಮತ್ತು ನಮ್ಮ ಊರಿನ ಅಭಿವೃದ್ಧಿ ವಿಷಯದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ” ಎಂದು ತಿಳಿಸಿದರು.

“ಸ್ಪರ್ಧೆಯನ್ನು ಘೋಷಿಸಿದ ಬಳಿಕ ಕರೆಗಳು ಬರಲು ಶುರುವಾಗಿವೆ. ಇದು ಜನರಿಂದ ಜನರಿಗಾಗಿ ಜನರಿಗೋಸ್ಕರವೇ ಮಾಡಿರುವ ಸ್ಪರ್ಧೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...