Homeಮುಖಪುಟದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್‌ ಮೇಲೆ ಒತ್ತಡ ಹೇರಿಕೆ: ಯಶವಂತ ಸಿನ್ಹಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬಲವಂತವಾಗಿ ಬೆಂಬಲಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ತಿಳಿಸಿದ್ದಾರೆ.

“ನಾನು ರಾಜಕೀಯ ಪಕ್ಷದ ವಿರುದ್ಧ ಹೋರಾಡುತ್ತಿಲ್ಲ, ಆದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡುತ್ತಿದ್ದೇನೆ” ಎಂದು ಸಿನ್ಹಾ ಅವರು ಗುವಾಹಟಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉದ್ಧವ್ ಠಾಕ್ರೆ ಆರಂಭದಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯ ಬೆಂಬಲಿಗರಾಗಿದ್ದರು. ಆದರೆ ಶಿವಸೇನೆಯ 16 ಜನಪ್ರತಿನಿಧಿಗಳ ಗುಂಪು ಒತ್ತಾಯಿಸಿದ ನಂತರ ಈ ವಾರದ ಆರಂಭದಲ್ಲಿ ಮುರ್ಮು ಅವರಿಗೆ ಬೆಂಬಲವನ್ನು ಘೋಷಿಸಿದ್ದಾರೆ.

ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಉದ್ಧವ್‌, “ಪ್ರಸ್ತುತ ರಾಜಕೀಯ ವಾತಾವರಣವನ್ನು ನೋಡಿದರೆ, ನಾನು ಮುರ್ಮು ಅವರನ್ನು ಬೆಂಬಲಿಸಬಾರದಿತ್ತು, ಆದರೆ ನಾವು ಸಂಕುಚಿತ ಮನಸ್ಸಿನವರಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಆದಾಗ್ಯೂ, ಅವರು ಮುರ್ಮು ಅವರಿಗೆ ಬೆಂಬಲ ನೀಡಲು ಬಯಸಿದ್ದಾರೆ. ಶಿವಸೇನೆ ಪಕ್ಷದಲ್ಲಿ ಬೆಳೆಯುತ್ತಿರುವ ವಿಭಜನೆಯನ್ನು ತಡೆಯುವ ಪ್ರಯತ್ನವಾಗಿ ಉದ್ಧವ್ ಈ ಹೆಜ್ಜೆ ಇರಿಸಿದ್ದಾರೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ಮುಖ್ಯಮಂತ್ರಿಯಾಗಿರುವ ಏಕನಾಥ್ ಶಿಂಧೆ ಬಂಡಾಯವೆದ್ದ ನಂತರ ರಾಷ್ಟ್ರಪತಿ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಕಳೆದ ತಿಂಗಳು ಪತನಗೊಂಡಿತ್ತು. 55 ಸೇನಾ ಶಾಸಕರ ಪೈಕಿ 40 ಮಂದಿ ಶಿಂಧೆ ಅವರನ್ನು ಬೆಂಬಲಿಸಿದ್ದರು. ಸಂಸತ್ತಿನಲ್ಲೂ ಕನಿಷ್ಠ ಆರು ಮಂದಿ ಸಂಸದರು ಇನ್ನೊಂದು ಬದಿಯಲ್ಲಿದ್ದಂತೆ ಕಂಡುಬಂದಿತು.

ರಾಷ್ಟ್ರಪತಿ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ದುರ್ಬಲಗೊಳಿಸಲು ಕೇಂದ್ರವು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಯಶವಂತ್ ಸಿನ್ಹಾ, “ಜಾರಿ ನಿರ್ದೇಶನಾಲಯದ ದುರುಪಯೋಗ ನಡೆಯುತ್ತಿದೆ. ಸೆಂಟ್ರಲ್‌ ಏಜೆನ್ಸಿಗಳನ್ನು ಬಳಸಿಕೊಂಡು ಚುನಾಯಿತ ಸರ್ಕಾರಗಳನ್ನು ಉರುಳಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ರಾಷ್ಟ್ರಪತಿ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳನ್ನು ಒಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಆದರೆ ಪ್ರಾದೇಶಿಕ ಪಕ್ಷಗಳು ಒಂದರ ನಂತರ ಒಂದರಂತೆ ಮುರ್ಮುವನ್ನು ಬೆಂಬಲಿಸಲು ಉತ್ಸುಕತೆಯನ್ನು ತೋರಿಸುತ್ತಿದ್ದರೂ, ಸಿನ್ಹಾ ಲವಲವಿಕೆಯಿಂದ ಇದ್ದಾರೆ.

“ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆಮ್ ಆದ್ಮಿ ಪಕ್ಷವು ಶೀಘ್ರದಲ್ಲೇ ಬೆಂಬಲ ಸೂಚಿಸುವುದೆಂದು ನನಗೆ ತಿಳಿದಿದೆ. ವಿರೋಧ ಪಕ್ಷದ ಪಾಳಯದಲ್ಲಿ ಕೇವಲ ಒಂದು ಪಕ್ಷ ಮಾತ್ರ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ – ಅದು ಶಿವಸೇನೆ. ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಸಭೆಯ ಭಾಗವಾಗಿರಲಿಲ್ಲ, ಆದರೆ ಆ ಪಕ್ಷವೂ ನನ್ನನ್ನು ಬೆಂಬಲಿಸಲಿದೆ. ಆದ್ದರಿಂದ ನಮಗೆ ಸಾಕಷ್ಟು ವಿರೋಧ ಪಕ್ಷದ ಬೆಂಬಲವಿದೆ” ಎಂದು ಸಿನ್ಹಾ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...