Homeಕರ್ನಾಟಕಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

ಬರಹಗಾರರಿಗೆ ಕೊಲೆ ಬೆದರಿಕೆ: ತನಿಖೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿ ನೇಮಕ

- Advertisement -
- Advertisement -

ಏಪ್ರಿಲ್‌‌ ತಿಂಗಳಿನಿಂದಲೂ ಏಳು ಬರಹಗಾರರು ಸ್ವೀಕರಿಸಿರುವ ಕನಿಷ್ಠ 19 ಕೊಲೆ ಬೆದರಿಕೆ ಪತ್ರಗಳ ತನಿಖೆಗೆ ಪೊಲೀಸ್ ಅಧೀಕ್ಷಕ (ಎಸ್‌ಪಿ) ಶ್ರೇಣಿಯ ಅಧಿಕಾರಿಯನ್ನು ಕರ್ನಾಟಕ ಪೊಲೀಸ್‌ ಇಲಾಖೆ ನೇಮಿಸಿದೆ.

ಕೊಲೆ ಬೆದರಿಕೆಗಳು ಬಂದರೂ ಎಫ್‌ಐಆರ್‌ಗಳು ದಾಖಲಾಗಿಲ್ಲ, ಪೋಲೀಸರ ನಿಷ್ಕ್ರಿಯರಾಗಿದ್ದಾರೆ ಎಂದು ಲೇಖಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

“ಒಬ್ಬನೇ ವ್ಯಕ್ತಿ ಎಲ್ಲಾ ಬರಹಗಾರರಿಗೆ ಈ ಬೆದರಿಕೆ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ಕೆಲವು ಲೋಪಗಳಾಗಿವೆ, ಆದರೂ ತನಿಖೆಗಳು ಈಗಾಗಲೇ ನಡೆಯುತ್ತಿವೆ. ಈಗ ತನಿಖೆಯನ್ನು ಹೆಚ್ಚು ಸಂಘಟಿತ ರೀತಿಯಲ್ಲಿ ಮಾಡಲಾಗುತ್ತದೆ ” ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ‘ದಿ ಹಿಂದೂ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸಹಿಷ್ಣು ಹಿಂದೂ’ಎಂದು ಸಹಿ ಹಾಕಿರುವ ವ್ಯಕ್ತಿಯು ಏಳು ಬರಹಗಾರರಿಗೆ 19 ಕೊಲೆ ಬೆದರಿಕೆ ಪತ್ರಗಳನ್ನು ಬರೆದಿದ್ದಾನೆ. ಈ ಬರಹಗಾರರ ನಿಲುವುಗಳನ್ನು “ಹಿಂದೂ ವಿರೋಧಿ” ಎಂದು ಕರೆದಿದ್ದಾನೆ. ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಆರು ಪತ್ರ, ಚಿಂತಕ ಬಂಜಗೆರೆ ಜಯಪ್ರಕಾಶ್ ಅವರಿಗೆ ಐದು ಪತ್ರ ಬಂದಿವೆ.  ಹಿಜಾಬ್ ವಿವಾದದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬಹಿರಂಗ ಪತ್ರ ಬರೆದ 61 ಬರಹಗಾರರನ್ನು ಪಟ್ಟಿ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನೂ ಟಾರ್ಗೆಟ್ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ. ರಾಜ್ಯ ಪೊಲೀಸರು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ ಎಡವಿದ್ದಾರೆ ಎಂದು ಆರೋಪಗಳು ಬಂದಿದ್ದವು. ಲೇಖಕಿ ವಸುಂಧರಾ ಭೂಪತಿ ಅವರು ಬುಧವಾರ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡು ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜುಲೈ 2ರಂದು ತಮ್ಮ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರ ಬಂದಿದ್ದ ಕುರಿತು ಎಂ.ಎಸ್.ಭೂಪತಿ ಅವರು ಬಸವೇಶ್ವರನಗರ ಪೊಲೀಸರಿಗೆ ದೂರು ನೀಡಿದ್ದರು, ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದರು.

“ಬುಧವಾರ ಬೆಳಿಗ್ಗೆ, ನನ್ನ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ನನ್ನ ಫೋನ್‌ಗೆ ಸಂದೇಶ ಬಂದಿತು. ಸ್ವಲ್ಪ ಸಮಯದ ನಂತರ, ಇಬ್ಬರು ಪೊಲೀಸರು ನನ್ನ ಮನೆಗೆ ಬಂದು ನನ್ನ ನಿವಾಸದಲ್ಲಿ ಪೊಲೀಸ್ ಬೀಟ್ ಪಾಯಿಂಟ್ ಹಾಕಿದರು. ಭದ್ರತೆಯ ಭರವಸೆ ನೀಡಿದರು” ಎಂದು ಅವರು ತಿಳಿಸಿದ್ದಾರೆ.

‘ಪ್ರಕರಣ ದಾಖಲಿಸಲಾಗಿದೆ’

ಅನಾಮಧೇಯ ಪತ್ರ ಬರೆದಿರುವ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 (ಅನಾಮಧೇಯ ಸಂವಹನದ ಮೂಲಕ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್‌ ಅವರ ದೂರು ಆಧರಿಸಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎರಡು ಎಫ್‌ಐಆರ್ ದಾಖಲಾಗಿದೆ. ಆದಾಗ್ಯೂ, ರಾಜ್ಯದ ಇತರ ಬರಹಗಾರರಿಗೆ ಇದೇ ರೀತಿಯ ಬೆದರಿಕೆ ಪತ್ರಗಳು ಬಂದಿರುವ ಕುರಿತು ಯಾವುದೇ ಎಫ್‌ಐಆರ್‌ಗಳು ದಾಖಲಾಗಿಲ್ಲ.

ಇದನ್ನೂ ಓದಿರಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

“ಒಬ್ಬನೇ ವ್ಯಕ್ತಿ ಎಲ್ಲಾ ಪತ್ರಗಳನ್ನು ಬರೆಯುತ್ತಿರುವುದು ಸ್ಪಷ್ಟವಾಗಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಸಿದ್ದರಾಮಯ್ಯ ಆಕ್ರೋಶ

ಕೊಲೆ ಬೆದರಿಕೆ ಬಂದಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. “ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ” ಎಂದು ತಿಳಿಸಿದ್ದರು.

“ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಗರ ನಕ್ಸಲರಿಗೆಲ್ಲಾ ಸಾರ್ವಜನಿಕರ ಹಣದಲ್ಲಿ ಭದ್ರತೆ ಯಾಕೆ,ಭದ್ರತೆಯ ವೆಚ್ಚವನ್ನ ಈ ದ್ರೋಹಿಗಳ ಮೂಲಕವೇ ವಸೂಲಿ ಮಾಡಬೇಕಿದೆ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...