Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...