Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...