Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...