Homeಕರ್ನಾಟಕಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

ಬಿಬಿಎಂಪಿ: 243 ವಾರ್ಡ್‌ ವಿಂಗಡನೆಗೆ ಅಂತಿಮ ಅಧಿಸೂಚನೆ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 243 ವಾರ್ಡ್‌ಗಳ ಅಂತಿಮ ಡಿಲಿಮಿಟೇಶನ್ ವರದಿಯನ್ನು ರಾಜ್ಯ ಸರ್ಕಾರ ಗುರುವಾರ ಅಧಿಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಎರಡು ವರ್ಷಗಳ ಕಾಲ ವಿಳಂಬಗೊಳಿಸಿದ್ದ ಕಸರತ್ತು ಕೊನೆಗೂ ಪೂರ್ಣಗೊಂಡಿದೆ.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಒಂದು ವಾರ್ಡ್‌ಗೆ ಸ್ಯಾಂಡಲ್‌ವುಡ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಹೆಸರಿಡಲಾಗಿದೆ ಎಂಬುದು ವರದಿಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. 3,833 ಆಕ್ಷೇಪಣೆಗಳ ಪೈಕಿ 1,800 ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಅಂತಿಮ ವರದಿಯಲ್ಲಿ ಪರಿಗಣಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

243 ವಾರ್ಡ್‌ಗಳಿಗೆ ಗಡಿಗಳ ಅಂತಿಮಗೊಳಿಸುವಿಕೆಯು ಬಿಬಿಎಂಪಿಗೆ ಚುನಾವಣಾ ಪ್ರಕ್ರಿಯೆಯನ್ನು ವೇಗವಾಗಿ ಮಾಡುವ ನಿರೀಕ್ಷೆಯಿದೆ. ಬಿಬಿಎಂಪಿಯ ಅವಧಿಯು ಸೆಪ್ಟೆಂಬರ್ 2020 ರಲ್ಲಿ ಮುಕ್ತಾಯಗೊಂಡಿತ್ತು. ಉಳಿದಿರುವಂತೆ, ವಾರ್ಡ್‌ಗಳ ಮೀಸಲಾತಿಯನ್ನು ಮುಂದಿನ ಒಂದು ಅಥವಾ ಎರಡು ವಾರಗಳಲ್ಲಿ ಪ್ರಕಟಿಸಬಹುದು ಎಂದು ವರದಿಯಾಗಿದೆ.

ನಾಗರಿಕರು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಿ ಸಿದ್ಧಪಡಿಸಿದ ಅಂತಿಮ ವರದಿಯಲ್ಲಿ ಕನಿಷ್ಠ 18 ವಾರ್ಡ್‌ಗಳ ಹೆಸರನ್ನು ಬದಲಾಯಿಸಲಾಗಿದೆ. ಜೊತೆಗೆ 42 ವಾರ್ಡ್‌ಗಳಿಗೆ ಮತ್ತೊಮ್ಮೆ ಗಡಿಯನ್ನು ಮರು ರಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌‌ ವರದಿ ತಿಳಿಸಿವೆ. ಆಕ್ಷೇಪಣೆಗಳ ಆಧಾರದ ಮೇಲೆ ಬದಲಾವಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3,833 ಆಕ್ಷೇಪಣೆಗಳಲ್ಲಿ ಅರ್ಧದಷ್ಟು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಂದಿವೆ. ಇವುಗಳಲ್ಲಿ ಹೆಚ್ಚಿನ ಆಕ್ಷೇಪಣೆಗಳು ವಾರ್ಡ್‌ನ ಹೆಸರು ಬದಲಾವಣೆಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಆರ್ ಪುರಂನಿಂದ 479 ಆಕ್ಷೇಪಣೆಗಳು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಗಾಂಧಿನಗರ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರಗಳಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಆಕ್ಷೇಪಣೆಗಳನ್ನು ಅಧ್ಯಯನ ಮಾಡಲು ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿಯ ವಿಶೇಷ ಆಯುಕ್ತ (ಕಂದಾಯ) ದೀಪಕ್ ಆರ್ ಎಲ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನು ರಚಿಸಿದೆ.

ಹೆಚ್ಚಿನ ಆಕ್ಷೇಪಣೆಗಳು ಹೊಸ ಗಡಿಗಳಿಗೆ ಸಂಬಂಧಿಸಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. “ವಾರ್ಡ್‌ನ್ನು ಎರಡು ಭಾಗಗಳಾಗಿ ವಿಭಜಿಸುವ ರಾಷ್ಟ್ರೀಯ ಹೆದ್ದಾರಿ ಗೊಂದಲಕ್ಕೆ ಕಾರಣವಾಗಲಿದೆ ಎಂದು ಕೆಲವು ನಿವಾಸಿಗಳು ಆಕ್ಷೇಪಿಸಿದ್ದಾರೆ. ಆ ಆಕ್ಷೇಪಣೆಗಳ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಲಿದೆ” ಎಂದು ಹೇಳಿದ್ದಾರೆ.

ಕರ್ನಾಟಕ ನಗರಾಭಿವೃದ್ಧಿ ಇಲಾಖೆ ಜೂನ್ 23 ರಂದು ವಿಂಗಡಣೆ ಮಾಡಲಾದ ವಾರ್ಡ್‌ಗಳ ಕರಡನ್ನು ಅಧಿಸೂಚಿಸಿತ್ತು. ವಾರ್ಡ್‌ಗಳ ಸಂಖ್ಯೆಯನ್ನು 198 ರಿಂದ 243 ಕ್ಕೆ ಹೆಚ್ಚಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿತ್ತು.

ಇದನ್ನೂ ಓದಿ: ಬೆಂಗಳೂರು ವಿವಿ: ಪ್ರವೇಶಾತಿ ಅನುಮೋದನೆ ನೀಡದೆ ಪ್ರಾಧ್ಯಾಪಕರಿಂದ ತೊಂದರೆ; ವಿದ್ಯಾರ್ಥಿಗಳ ಆರೋಪ

ಹಿಂದಿನ ವಾರ್ಡ್‌ಗಳು 28,000 ರಿಂದ 1 ಲಕ್ಷದವರೆಗಿನ ಜನಸಂಖ್ಯೆಯೊಂದಿಗೆ ಭಾರಿ ಅಸಮಾನತೆಯನ್ನು ಹೊಂದಿದ್ದರೆ, ಹೊಸ ವಾರ್ಡ್‌ಗಳು ಸರಾಸರಿ 34,700 ಜನಸಂಖ್ಯೆಯನ್ನು ಹೊಂದಿವೆ. ಆದಾಗ್ಯೂ, 2011 ರ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯು ಹಳೆಯ ಜನಸಂಖ್ಯೆಯ ಆಧಾರವಾಗಿ ಮಾಡಲಾಗಿದೆ ಎಂಬ ಟೀಕೆಗೆ ಒಳಗಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...