Homeಮುಖಪುಟಲಕ್ನೋ: ಲುಲು ಮಾಲ್‌ನಲ್ಲಿ ನಮಾಜ್‌ ಮಾಡಿದವರ ವಿರುದ್ಧ ಎಫ್‌ಐಆರ್‌

ಲಕ್ನೋ: ಲುಲು ಮಾಲ್‌ನಲ್ಲಿ ನಮಾಜ್‌ ಮಾಡಿದವರ ವಿರುದ್ಧ ಎಫ್‌ಐಆರ್‌

“ರಾಜ್ಯದ ಅಭಿವೃದ್ಧಿಗೆ ಮಾರಕವಾಗುತ್ತಿರುವ ಹಿಂದುತ್ವವಾದಿಗಳಿಗೆ ತಡೆ ನೀಡುವರೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌?”

- Advertisement -
- Advertisement -

ಲಕ್ನೋದಲ್ಲಿ ಹೊಸದಾಗಿ ತೆರೆಯಲಾದ ಲುಲು ಮಾಲ್‌ನಲ್ಲಿ ಕೆಲವು ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್ ಆದ ಕುರಿತು ಹಿಂದುತ್ವ ಸಂಘಟನೆಯಾದ ಅಖಿಲ ಭಾರತೀಯ ಹಿಂದೂ ಮಹಾಸಭಾ ಪ್ರತಿಭಟನೆ ನಡೆಸಿದ ಬಳಿಕ, ಉತ್ತರ ಪ್ರದೇಶ ಪೊಲೀಸರು ನಮಾಜ್‌ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ‘ಧಾರ್ಮಿಕ ಗುಂಪುಗಳ ನಡುವಿನ ದ್ವೇಷ ಬೆಳೆಸುವ ಯತ್ನ’ ಆರೋಪವನ್ನು  ಹೊರಿಸಲಾಗಿದೆ.

ಮಾಲ್‌ನ ಅಂಗಳದಲ್ಲಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ ಎಂದು ಲುಲು ಗ್ರೂಪ್ ಮತ್ತು ಅದರ ಮಾಲೀಕ ಯೂಸುಫಲಿ ಎಂ.ಎ. ವಿರುದ್ಧ ಹಿಂದೂ ಮಹಾಸಭಾ ಲಕ್ನೋದಲ್ಲಿ ಪ್ರತಿಭಟನೆ ಆರಂಭಿಸಿದೆ. ಮಾಲ್‌ನ ಆಡಳಿತ ಮಂಡಳಿ ಹಾಗೂ ವಿಡಿಯೊದಲ್ಲಿ ಸೆರೆಯಾಗಿರುವ ಜನರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಕಾರ್ಯಕರ್ತರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಾಗ ಬಳಿಕ ಮಾಲ್‌ನ ಅಧಿಕಾರಿಗಳು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ವಿವಾದದಿಂದ ಅಂತರ ಕಾಯ್ದುಕೊಳ್ಳುವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾಲ್ ಆಡಳಿತವು ಸುಶಾಂತ್ ಗಾಲ್ಫ್ ಸಿಟಿ ಪೊಲೀಸರಿಗೆ ಪತ್ರವನ್ನೂ ಕಳುಹಿಸಿದೆ. “ನಮಾಜ್ ಮಾಡಿರುವವರು ಮಾಲ್‌ನ ಉದ್ಯೋಗಿಗಳಲ್ಲ. ಮಾಲ್‌ಗೆ ಭೇಟಿ ನೀಡಿದವರು ನಮಾಜ್‌ ಮಾಡಿದ್ದಾರೆ” ಎಂದು ಆಡಳಿತ ವಿಭಾಗ ಸ್ಪಷ್ಟಪಡಿಸಿದೆ. “ಅಂತಹ ಯಾವುದೇ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ. ಮಾಲ್‌ನಲ್ಲಿ ಯಾವುದೇ ಧಾರ್ಮಿಕ ಪ್ರಾರ್ಥನೆಗೆ ಅವಕಾಶ ನೀಡುವುದಿಲ್ಲ” ಎಂದು ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡಿದೆ.

ಈ ಕುರಿತು ವಿಸ್ತೃತವಾಗಿ ವರದಿ ಮಾಡಿರುವ ‘ದಿ ವೈರ್‌’ ಜಾಲತಾಣ, “ವೈರಲ್‌ ವೀಡಿಯೊದ ಸತ್ಯಾಸತ್ಯತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಿಲ್ಲ. ಮಾಲ್‌ನಲ್ಲಿ ನಮಾಜ್ ಮಾಡಿದವರನ್ನು ಗುರುತಿಸಲು ಸಾಧ್ಯವಾಗಿಲ್ಲ” ಎಂದಿದೆ.

ಇದನ್ನೂ ಓದಿರಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಮಾಲ್ ಮ್ಯಾನೇಜ್‌ಮೆಂಟ್‌ ಸ್ಪಷ್ಟೀಕರಣ ನೀಡಿದರೂ ಹಿಂದುತ್ವ ಗ್ರೂಪ್‌ಗಳು ಸಮಾಧಾನವಾಗಿಲ್ಲ. ಲುಲು ಗ್ರೂಪ್‌ ಮಾಲೀಕ ಯೂಸುಫಲಿ ಮುಸ್ಲಿಂ ಆಗಿರುವ ಕಾರಣ ನೇರವಾಗಿ ಮಾಲೀಕನನ್ನೇ ಈ ಹಿಂದುತ್ವ ಗ್ರೂಪ್‌ಗಳು ಟಾರ್ಗೆಟ್ ಮಾಡಿವೆ.

‘ಲುಲು ಮಾಲ್ ಮಾಲೀಕ ಕೇವಲ ಮುಸ್ಲಿಮರನ್ನು ನೇಮಿಸಿಕೊಂಡಿದ್ದಾರೆ. ಭಾರತದಲ್ಲಿ ಗಳಿಸಿದ ಲಾಭವನ್ನು ದುಬೈಗೆ ಕಳುಹಿಸುತ್ತಿದ್ದಾರೆ’ ಎಂದು ಹಿಂದೂ ಮಹಾಸಭಾ ಆರೋಪಿಸಿದೆ.

ಜುಲೈ 14 ರ ಗುರುವಾರ ತಡರಾತ್ರಿ ಪೊಲೀಸರು, ನಮಾಜ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹಿಂದುತ್ವ ಸಂಘಟನೆಯು ಹೊಸದಾಗಿ ತೆರೆಯಲಾದ ಮಾಲ್ ವಿರುದ್ಧ ಪ್ರತಿಭಟಿಸುವುದಾಗಿ ಬೆದರಿಕೆ ಹಾಕಿದೆ. ಆದರೆ ಪೊಲೀಸರು ಮಾಲ್‌ನ ಆಡಳಿತ ವರ್ಗ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ಮಹಾಸಭಾದ ಸದಸ್ಯರು ಕೂಡ ಲಕ್ನೋದ ಗಾಲ್ಫ್ ಸಿಟಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮಾಲ್‌ನಲ್ಲಿ ಸುಂದರ್ ಕಾಂಡವನ್ನು ಪಠಿಸಲು ಅನುಮತಿ ನೀಡಬೇಕು ಎಂದಿರುವ ಅವರು, ‘ಲವ್ ಜಿಹಾದ್’ಅನ್ನು ಪ್ರಚಾರ ಮಾಡಲು ಲುಲು ಮಾಲ್ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಹೊಸದಾಗಿ ಉದ್ಘಾಟನೆಗೊಂಡ ಮಾಲ್‌ನಲ್ಲಿ ಕೆಲಸ ಮಾಡುತ್ತಿರುವ ಶೇ. 70ರಷ್ಟು ಪುರುಷರು ಮುಸ್ಲಿಮರಾಗಿದ್ದಾರೆ. ಶೇ. 30ರಷ್ಟು ಹಿಂದೂ ಮಹಿಳಾ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ಮಹಾಸಭಾ ಸ್ಥಳೀಯ ಪೊಲೀಸರಿಗೆ ನೀಡಿದ ದೂರಿನಲ್ಲಿ ಒತ್ತಿ ಹೇಳಿದೆ.

ಹಿಂದೂ ಮೂಲಭೂತವಾದಿ ಸಂಘಟನೆಯು ಮಾಲ್‌ನ ಹೊರಗೆ ಪ್ರತಿಭಟನೆಯನ್ನು ನಡೆಸುವ ಘೋಷಣೆ ಮಾಡಿದೆ. ಮಾಲ್ ಅನ್ನು ಬಹಿಷ್ಕರಿಸುವಂತೆ ಹಿಂದೂ ಸಮುದಾಯಕ್ಕೆ ಮನವಿ ಮಾಡಿದೆ.

ಇದನ್ನೂ ಓದಿರಿ: ಮುಸ್ಲಿಂ ಪ್ರಧಾನ ಕಥೆ ಹೊಂದಿದೆ ಎಂದು ನಾಟಕಕ್ಕೆ ಅಡ್ಡಿಪಡಿಸಿದ RSS-ಬಜರಂಗದಳದ ದುಷ್ಕರ್ಮಿಗಳು

‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಹಾಸಭಾದ ವಕ್ತಾರ ಶಿಶಿರ್ ಚತುರ್ವೇದಿ, “ಲುಲು ಗ್ರೂಪ್ ಭಾರತದಿಂದ ಲಾಭದಾಯಕ ಲಾಭ ಗಳಿಸುತ್ತದೆ ಮತ್ತು ದುಬೈಗೆ ಹಣವನ್ನು ಕಳುಹಿಸುತ್ತದೆ. ಲಕ್ನೋ ಅಭಿವೃದ್ಧಿ ಪ್ರಾಧಿಕಾರದ ನಿಯಮಗಳ ಪ್ರಕಾರ ಮಾಲ್ ನಿರ್ಮಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಮುಖ್ಯಮಂತ್ರಿ ಪರಿಶೀಲಿಸಿದ್ದಾರೆಯೇ? ಮಾಲ್ ಅನ್ನು ನಿಯಮಗಳ ಪ್ರಕಾರ ನಿರ್ಮಿಸದಿದ್ದರೆ, ಬಾಬಾ (ಯೋಗಿ) ಬುಲ್ಡೋಜರ್‌ಗಳು ಎಲ್ಲಿವೆ?” ಎಂದು ಪ್ರಶ್ನಿಸಿದ್ದಾರೆ.

ಚತುರ್ವೇದಿ ಪ್ರಕಾರ, ಮಾಲ್ “ಲವ್ ಜಿಹಾದ್” ಅನ್ನು ಪ್ರಚಾರ ಮಾಡುತ್ತಿದೆ. ಏಕೆಂದರೆ ಪುರುಷ ಮುಸ್ಲಿಂ ಸಿಬ್ಬಂದಿಗಳ ಸಂಖ್ಯೆಯು ಮಹಿಳಾ ಹಿಂದೂ ಉದ್ಯೋಗಿಗಳಿಗಿಂತ ಹೆಚ್ಚಿದೆ. “ಲುಲು ಗ್ರೂಪ್‌ ತನ್ನ ಲಾಭವನ್ನು ಹಿಂದೂಗಳ ಶಿರಚ್ಛೇದ ಮಾಡುವ ಉಗ್ರಗಾಮಿ ಇಸ್ಲಾಮಿಕ್ ಗುಂಪುಗಳಿಗೆ ದಾನ ಮಾಡಿದೆ” ಎಂದು ಅವರು ಆರೋಪಿಸಿದ್ದಾರೆ.

“ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಅಥವಾ ಇತರ ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸಿದೆ. ಇದರ ಹೊರತಾಗಿಯೂ, ಜನರು ಮಾಲ್‌ನಲ್ಲಿ ನಮಾಜ್ ಮಾಡಿದ್ದಾರೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲು ಆಡಳಿತವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಲುಲು ಗ್ರೂಪ್ ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಮಾಲ್ ಅಂಗಳದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಇಂತಹ ಚಟುವಟಿಕೆಗಳ ಮೇಲೆ ನಿಗಾ ಇಡುವಂತೆ ನಿರ್ದೇಶನ ನೀಡಲಾಗಿದೆ” ಎಂದು ಲುಲು ಮಾಲ್ ಜನರಲ್‌ ಮ್ಯಾನೇಜರ್‌‌ ಸಮೀರ್ ವರ್ಮಾ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

“ಲಕ್ನೋದ ಲುಲು ಮಾಲ್ಅನ್ನು ಅಂತರಾಷ್ಟ್ರೀಯ ಶಾಪಿಂಗ್ ತಾಣವನ್ನಾಗಿ ಮಾಡುವುದು ನಮ್ಮ ಗುರಿ” ಎಂದಿದ್ದಾರೆ.

‘ದಿ ವೈರ್’ ಜೊತೆ ಮಾತನಾಡಿರುವ ಸ್ಥಳೀಯ ಪೊಲೀಸರು, “ಮಹಾಸಭಾದಿಂದ ದೂರು ಬಂದಿದೆ” ಎಂದಿದ್ದಾರೆ. ಗಾಲ್ಫ್ ಸಿಟಿಯ ಇನ್ಸ್‌ಪೆಕ್ಟರ್ ಅಜಯ್ ಪ್ರತಾಪ್ ಸಿಂಗ್ ಅವರ ಪ್ರಕಾರ, “ಪ್ರಕರಣದ ತನಿಖೆ ನಡೆಯುತ್ತಿದೆ. ಸತ್ಯವನ್ನು ಖಚಿತಪಡಿಸಿಕೊಳ್ಳಲು, ಪೊಲೀಸರು ಮಾಲ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಾರೆ” ಎಂದಿದ್ದಾರೆ.

“ತನಿಖೆಯ ಸಮಯದಲ್ಲಿ ನಾವು ಮಾಲ್‌ನ ಆಡಳಿತವನ್ನು ಸಹ ಸಂಪರ್ಕಿಸುತ್ತೇವೆ” ಎಂದಿದ್ದಾರೆ.

ಪೊಲೀಸರ ಪ್ರಕಾರ, ಅಪರಿಚಿತ ವ್ಯಕ್ತಿಗಳ ವಿರುದ್ಧ ಸೆಕ್ಷನ್ 153 ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ), 341 (ತಪ್ಪು ಸಂಯಮಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಹೂಡಿಕೆದಾರರ ಮೇಲೆ ನಕಾರಾತ್ಮಕ ಪರಿಣಾಮ

“ಈ ಘಟನೆಯು ಹೂಡಿಕೆದಾರರಿಗೆ ತಪ್ಪು ಸಂದೇಶವನ್ನು ರವಾನಿಸಿದೆ” ಎಂಬುದು ಹಲವರ ಅಭಿಪ್ರಾಯ.

“ರಾಜ್ಯದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿರುವ ಹಿಂದುತ್ವವಾದಿ ಸಂಘಟನೆಗಳ ವಿರುದ್ಧ ಯೋಗಿ-ಸರ್ಕಾರ ಕ್ರಮಕೈಗೊಳ್ಳಬೇಕು” ಎಂದು ಹಿರಿಯ ಪತ್ರಕರ್ತ ಅತುಲ್ ಚಂದ್ರ ಒತ್ತಾಯಿಸಿದ್ದಾರೆ.

“ಮತಾಂಧ ಗುಂಪುಗಳು ಜನರ ಪ್ರಗತಿ ಮತ್ತು ಅಭಿವೃದ್ಧಿಯನ್ನು ಉಸಿರುಗಟ್ಟಿಸುತ್ತವೆ. ಇಂತಹ ಘಟನೆಗಳಿಂದಾಗಿ ಹೂಡಿಕೆದಾರರು ರಾಜ್ಯದಲ್ಲಿ ಹೂಡಿಕೆ ಮಾಡುವ ಮೊದಲು ಅನೇಕ ಬಾರಿ ಯೋಚಿಸುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಕಾಲಕಾಲಕ್ಕೆ ಉದ್ಯಮಿಗಳನ್ನು ಹೂಡಿಕೆಗಾಗಿ ರಾಜ್ಯಕ್ಕೆ ಆಹ್ವಾನಿಸುವ ಸಿಎಂ ಯೋಗಿಯವರ ಯೋಜನೆಗಳನ್ನು ಈ ಹಿಂದುತ್ವ ಗುಂಪುಗಳು ನಾಶಪಡಿಸುತ್ತಿವೆ. ಇಲ್ಲಿನ ಲುಲು  ಮಾಲ್ 5,000 ನೇರ ಉದ್ಯೋಗಿಗಳನ್ನು 10,000 ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಅಂದಾಜಿಸಲಾಗಿದೆ” ಎಂಬುದು ಅವರ ಅಭಿಪ್ರಾಯ.

ಮತ್ತೊಬ್ಬ ರಾಜಕೀಯ ವೀಕ್ಷಕ ರಾಮ್ ದತ್ ತ್ರಿಪಾಠಿ, “ಇಂತಹ ದ್ವೇಷದ ವಾತಾವರಣವು ರಾಜ್ಯದಿಂದ ಹೂಡಿಕೆದಾರರ ಆಕರ್ಷಣೆಯನ್ನು ಕಳೆದುಕೊಳ್ಳುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಹೂಡಿಕೆಗಳನ್ನು ಹುಡುಕುವ ಬಗ್ಗೆ ಸರ್ಕಾರವು ನಿಜವಾಗಿಯೂ ಗಂಭೀರವಾಗಿದ್ದರೆ, ಅದು ಈ ಮತಾಂಧ ಗುಂಪುಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಹೂಡಿಕೆದಾರರು ಯಾವಾಗಲೂ ಲಾಭವನ್ನು ನೋಡುತ್ತಾರೆ. ಶಾಂತಿಯುತ ಸಮಾಜದಲ್ಲಿ ಮಾತ್ರ ಲಾಭದಾಯಕ ಚಟುವಟಿಕೆಗಳು ನಡೆಯುತ್ತವೆ” ಎಂದು ತ್ರಿಪಾಠಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಯುಪಿ: ವೃದ್ಧ ಮುಸ್ಲಿಂ ಬೀದಿಬದಿ ವ್ಯಾಪಾರಿಯನ್ನು ವ್ಯಾಪಾರ ಮಾಡದಂತೆ ತಡೆದ ದುಷ್ಕರ್ಮಿ

ಜುಲೈ 10ರಂದು ರಾಜ್ಯದ ರಾಜಧಾನಿ ಲಕ್ನೋದಲ್ಲಿ ಲುಲು ಗ್ರೂಪ್ ಅಧ್ಯಕ್ಷ ಯೂಸುಫಲಿ ಎಂಎ ಅವರು ಆಯೋಜಿಸಿದ್ದ ಬೃಹತ್‌ ಸಮಾರಂಭದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರೂ ಪಾಲ್ಗೊಂಡು, ಲುಲು ಮಾಲ್ ಉದ್ಘಾಟಿಸಿದರು. ಮುಖ್ಯಮಂತ್ರಿಯವರ ಚಿತ್ರಗಳನ್ನು ಹೊಂದಿರುವ ಪೂರ್ಣ ಪುಟದ ಜಾಹೀರಾತನ್ನು ಲುಲು ಗ್ರೂಪ್‌ ರಾಜ್ಯದ ಎಲ್ಲ ಪ್ರಮುಖ ಪತ್ರಿಕೆಗಳಿಗೆ ನೀಡಿತ್ತು. ಉದ್ಘಾಟನಾ ಸಮಾರಂಭದಲ್ಲಿ ಯುಪಿ ಅಸೆಂಬ್ಲಿಯ ಸ್ಪೀಕರ್ ಸತೀಶ್ ಮಹಾನಾ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ. ದಿನೇಶ್ ಶರ್ಮಾ ಹಾಜರಿದ್ದರು.

ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಪ್ರಯಾಗರಾಜ್, ವಾರಣಾಸಿ, ಗೋರಖ್‌ಪುರ ಮತ್ತು ಕಾನ್ಪುರ ಸೇರಿದಂತೆ ರಾಜ್ಯದ ಇತರ ಪಟ್ಟಣಗಳಲ್ಲಿ ಲುಲು ಗ್ರೂಪ್‌ ಹೂಡಿಕೆ ಮಾಡಲು ಮುಂದಾಗಿರುವುದು ಸಂತಸ ತಂದಿದೆ”  ಎಂದಿದ್ದರು.

ಹೂಡಿಕೆದಾರರನ್ನು ಪ್ರೋತ್ಸಾಹಿಸುವುದಾಗಿ ಹೇಳುತ್ತಿರುವ ಯೋಗಿ ಆದಿತ್ಯನಾಥ್ ಅವರು, ಹೂಡಿಕೆದಾರರಿಗೆ ಕಂಟಕವಾಗುತ್ತಿರುವ ಹಿಂದೂ ಮೂಲಭೂತವಾಗಿ ಗುಂಪುಗಳ ವಿರುದ್ಧ ಕ್ರಮ ಜರುಗಿಸುತ್ತಾರೆಯೇ? ಎಂಬುದು ಸದ್ಯದ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾವು ಉದ್ದಾರ ಆಗಲ್ಲ ಬೇರೆಯವರಿಗೆ ಉದ್ದಾರ ಆಗೋಕೂ ಬಿಡಲ್ಲ 😡😡

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...