Homeಕರ್ನಾಟಕಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಸರ್ಕಾರಿ ಕಚೇರಿಗಳಲ್ಲಿ ಕ್ಯಾಮೆರಾ ಬಳಕೆ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -
- Advertisement -

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸರ್ಕಾರ ರಾತ್ರೋರಾತ್ರಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಜುಲೈ 15- 16ರ ತಡರಾತ್ರಿ 2 ಗಂಟೆ ವೇಳೆಗೆ ಮುಖ್ಯಮಂತ್ರಿಯವರ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ನೂತನ ಆದೇಶ ಪ್ರತಿ ರವಾನೆಯಾಗಿದ್ದು, ಅದರಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ.

ನಿರ್ಬಂಧ ಆದೇಶವನ್ನು ತೆರವುಗೊಳಿಸಿ ಬಿಡುಗಡೆ ಮಾಡಲಾಗಿರುವ ನೂತನ ಆದೇಶದಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬಳಸಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೇಜವಾಬ್ದಾರಿಯಿಂದ ಆದೇಶ ಹೊರಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಡಾವಳಿಗಳು’ ಎಂಬುದನ್ನು ‘ನಡವಳಿಗಳು’ ಎಂದೂ, ‘ಪ್ರಸ್ತಾವನೆ’ ಎಂಬುದನ್ನು ‘ಪ್ರಸತ್ತಾವನೆ’ ಎಂದೂ, ‘ಮೇಲೆ’ ಎಂಬುದನ್ನು ‘ಮೇಲೇ’ ಎಂದೂ ‘ಭಾಗ-1′ ಎಂಬುದನ್ನು ‘ಬಾಗ-1’ ಎಂದೂ ‘ಕರ್ನಾಟಕ’ ಎಂಬುದನ್ನು ‘ಕರ್ನಾಟ’ ಎಂದೂ ಎರಡು ಕಡೆ, ‘ಆಡಳಿತ’ ಎಂಬುದನ್ನು ‘ಆಡಳಿದ’ ಎಂದು ಬರೆಯಲಾಗಿದೆ. ಸರ್ಕಾರಿ ಆದೇಶದಲ್ಲಿನ ತಪ್ಪುಗಳನ್ನು ನೋಡಿ ಜನರು ಟ್ರೋಲ್ ಮಾಡಿದ್ದಾರೆ.

“ಆದೇಶ ಹಿಂಪಡೆದದ್ದು ಸ್ವಾಗತಾರ್ಹ, ಆದರೆ ಈ ರೀತಿಯಲ್ಲಿ ಟೈಪ್ ಮಾಡಿದ್ದು ನೋಡುದ್ರೆ, ಇದು ಮಧ್ಯರಾತ್ರಿಯ ಆದೇಶವಲ್ಲ, ಮದ್ಯರಾತ್ರಿಯ ಆದೇಶ ಅನಿಸುತ್ತಿದೆ” ಎಂದು ರಹಿಮಾನ್ ಜವೂರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಹಿಂದಿ ಹೊಡೆತ, ಕನ್ನಡ ಕಡಿತ” ಎಂದು ಚಿಂತಕ ಹ.ರಾ.ಮಹೇಶ್‌‌ ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡದ ಕಗ್ಗೊಲೆ. ಮುಖ್ಯಮಂತ್ರಿ ಬಸವರಾಜ್ ಬಾಮ್ಮಾಯಿರವರೇ ಇದು ಅರ್ಧ ರಾತ್ರಿ ಆದೇಶದ ಎಡವಟ್ಟೇ ಅಥವಾ ನಿಮ್ಮ ಸರ್ಕಾರದಲ್ಲಿ ನಡೆಯೋ ಕರ್ಮಕಾಂಡಗಳನ್ನು ಕಣ್ತಪ್ಪಿಸುವ ಸಲುವಾಗಿ ನಡೆದ ಅಚಾತುರ್ಯವೇ?” ಎಂದು ರಾಮಚಂದ್ರ ಎಂಬವರು ಪ್ರಶ್ನಿಸಿದ್ದಾರೆ.

ಹೀಗೆ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಷೇಧಿಸಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ: ಬೊಮ್ಮಾಯಿ

‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ. ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ಸರ್ಕಾರ ಹಿಂಪಡೆದ ಮೊದಲ ಆದೇಶ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ ಮಾನ್ಯ ಮುಖ್ಯಮಂತ್ರಿಗಳು. ಆದರೆ, ಆ ಆದೇಶ ಹೊರಡಿಸಿದವರು ಯಾರು? ಅವರ ಮೇಲೆ ಏನು ಕ್ರಮ ಆಗಿದೆ? ಈ ಸುತ್ತೋಲೆಯಲ್ಲಿ ಆಗಿರುವ ದೋಷಗಳಿಗೆ ಯಾರು ಹೊಣೆ?
    ತುಂಬಾ ಬೇಸರದ ವಿಷಯ!

  2. ಇಂಥ ಜನ ವಿರೋಧಿ ಸರ್ಕಾರಿ ಆದೇಶವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಾರದೇ ಹೊರಡಿಸಲು ಸಾಧ್ಯವೇ, ಹಾಗೇನಾದ್ರೂ ಇದ್ದಲ್ಲಿ ಆ defacto chief ಮಿನಿಸ್ಟರ್ ಯಾರು ಸ್ವಾಮಿ, ಏನೇ ಆದರೂ ಪಠ್ಯಪರಿಷ್ಕರಣೆಗೆ ಸಂಬಂಧ ಪಟ್ಟಂತೆ ಘಟನೋತ್ತರ ಮಂಜುರಾತಿ ನೀಡಿದಂತೆ ಇದೂ ಕೂಡ ಮತ್ತೊಂದು ಸಂಗತಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...