Homeಕರ್ನಾಟಕಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

ಸರ್ಕಾರಿ ಕಚೇರಿಗಳಲ್ಲಿ ಕ್ಯಾಮೆರಾ ಬಳಕೆ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -
- Advertisement -

ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂದು ಆದೇಶ ಹೊರಡಿಸಿದ್ದ ಸರ್ಕಾರ ರಾತ್ರೋರಾತ್ರಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಜುಲೈ 15- 16ರ ತಡರಾತ್ರಿ 2 ಗಂಟೆ ವೇಳೆಗೆ ಮುಖ್ಯಮಂತ್ರಿಯವರ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ನೂತನ ಆದೇಶ ಪ್ರತಿ ರವಾನೆಯಾಗಿದ್ದು, ಅದರಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ.

ನಿರ್ಬಂಧ ಆದೇಶವನ್ನು ತೆರವುಗೊಳಿಸಿ ಬಿಡುಗಡೆ ಮಾಡಲಾಗಿರುವ ನೂತನ ಆದೇಶದಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬಳಸಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೇಜವಾಬ್ದಾರಿಯಿಂದ ಆದೇಶ ಹೊರಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ನಡಾವಳಿಗಳು’ ಎಂಬುದನ್ನು ‘ನಡವಳಿಗಳು’ ಎಂದೂ, ‘ಪ್ರಸ್ತಾವನೆ’ ಎಂಬುದನ್ನು ‘ಪ್ರಸತ್ತಾವನೆ’ ಎಂದೂ, ‘ಮೇಲೆ’ ಎಂಬುದನ್ನು ‘ಮೇಲೇ’ ಎಂದೂ ‘ಭಾಗ-1′ ಎಂಬುದನ್ನು ‘ಬಾಗ-1’ ಎಂದೂ ‘ಕರ್ನಾಟಕ’ ಎಂಬುದನ್ನು ‘ಕರ್ನಾಟ’ ಎಂದೂ ಎರಡು ಕಡೆ, ‘ಆಡಳಿತ’ ಎಂಬುದನ್ನು ‘ಆಡಳಿದ’ ಎಂದು ಬರೆಯಲಾಗಿದೆ. ಸರ್ಕಾರಿ ಆದೇಶದಲ್ಲಿನ ತಪ್ಪುಗಳನ್ನು ನೋಡಿ ಜನರು ಟ್ರೋಲ್ ಮಾಡಿದ್ದಾರೆ.

“ಆದೇಶ ಹಿಂಪಡೆದದ್ದು ಸ್ವಾಗತಾರ್ಹ, ಆದರೆ ಈ ರೀತಿಯಲ್ಲಿ ಟೈಪ್ ಮಾಡಿದ್ದು ನೋಡುದ್ರೆ, ಇದು ಮಧ್ಯರಾತ್ರಿಯ ಆದೇಶವಲ್ಲ, ಮದ್ಯರಾತ್ರಿಯ ಆದೇಶ ಅನಿಸುತ್ತಿದೆ” ಎಂದು ರಹಿಮಾನ್ ಜವೂರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಹಿಂದಿ ಹೊಡೆತ, ಕನ್ನಡ ಕಡಿತ” ಎಂದು ಚಿಂತಕ ಹ.ರಾ.ಮಹೇಶ್‌‌ ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡದ ಕಗ್ಗೊಲೆ. ಮುಖ್ಯಮಂತ್ರಿ ಬಸವರಾಜ್ ಬಾಮ್ಮಾಯಿರವರೇ ಇದು ಅರ್ಧ ರಾತ್ರಿ ಆದೇಶದ ಎಡವಟ್ಟೇ ಅಥವಾ ನಿಮ್ಮ ಸರ್ಕಾರದಲ್ಲಿ ನಡೆಯೋ ಕರ್ಮಕಾಂಡಗಳನ್ನು ಕಣ್ತಪ್ಪಿಸುವ ಸಲುವಾಗಿ ನಡೆದ ಅಚಾತುರ್ಯವೇ?” ಎಂದು ರಾಮಚಂದ್ರ ಎಂಬವರು ಪ್ರಶ್ನಿಸಿದ್ದಾರೆ.

ಹೀಗೆ ಅನೇಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಷೇಧಿಸಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ: ಬೊಮ್ಮಾಯಿ

‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ. ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳ ಫೋಟೊ ತೆಗೆದು ತೊಂದರೆ ಆಗಿತ್ತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕರ್ನಾಟಕ ಸರ್ಕಾರ ಹಿಂಪಡೆದ ಮೊದಲ ಆದೇಶ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ ಮಾನ್ಯ ಮುಖ್ಯಮಂತ್ರಿಗಳು. ಆದರೆ, ಆ ಆದೇಶ ಹೊರಡಿಸಿದವರು ಯಾರು? ಅವರ ಮೇಲೆ ಏನು ಕ್ರಮ ಆಗಿದೆ? ಈ ಸುತ್ತೋಲೆಯಲ್ಲಿ ಆಗಿರುವ ದೋಷಗಳಿಗೆ ಯಾರು ಹೊಣೆ?
    ತುಂಬಾ ಬೇಸರದ ವಿಷಯ!

  2. ಇಂಥ ಜನ ವಿರೋಧಿ ಸರ್ಕಾರಿ ಆದೇಶವನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಾರದೇ ಹೊರಡಿಸಲು ಸಾಧ್ಯವೇ, ಹಾಗೇನಾದ್ರೂ ಇದ್ದಲ್ಲಿ ಆ defacto chief ಮಿನಿಸ್ಟರ್ ಯಾರು ಸ್ವಾಮಿ, ಏನೇ ಆದರೂ ಪಠ್ಯಪರಿಷ್ಕರಣೆಗೆ ಸಂಬಂಧ ಪಟ್ಟಂತೆ ಘಟನೋತ್ತರ ಮಂಜುರಾತಿ ನೀಡಿದಂತೆ ಇದೂ ಕೂಡ ಮತ್ತೊಂದು ಸಂಗತಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...