Homeಅಂತರಾಷ್ಟ್ರೀಯಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

ಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

- Advertisement -
- Advertisement -

ವಾಷಿಂಗ್ಟನ್‌‌ ಪೋಸ್ಟ್‌‌ ಪತ್ರಕರ್ತ ಜಮಾಲ್ ಖಶೋಗಿ ಅವರ ಹತ್ಯೆಗೆ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೇ ಹೊಣೆಗಾರರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶುಕ್ರವಾರ ಹೇಳಿದ್ದಾರೆ. ಅವರು ಸೌದಿ ಅರೇಬಿಯಾದ ಉಪಪ್ರಧಾನಿಯೂ ಆಗಿರುವ ರಾಜಕುಮಾರನೊಂದಿಗೆ ಮಾತುಕತೆ ನಡೆಸಿದ ಸ್ವಲ್ಪ ಸಮಯದ ನಂತರವೇ ಈ ಹೇಳಿಕೆ ನೀಡಿದ್ದಾರೆ.

ಜೋ ಬಿಡೆನ್ ಅವರು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಕೊಲೆಯಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸಿದ್ದು, ಆದರೆ ಕೊಲೆಯ ಹೊಣೆಗಾರಿಕೆಯನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಖಶೋಗಿ ಹತ್ಯೆಗೆ ಸಂಬಂಧಿಸಿದ ವಿಚಾರವನ್ನು ನಾನು ಸಭೆಯ ಮುಂದೆ ಎತ್ತಿದ್ದೇನೆ. ಆ ಸಮಯದಲ್ಲಿ ನಾನು ಅದರ ಬಗ್ಗೆ ಏನು ಯೋಚಿಸಿದೆ ಮತ್ತು ಈಗ ಅದರ ಬಗ್ಗೆ ನಾನು ಏನು ಯೋಚಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ” ಎಂದು ಬಿಡೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾನು ನೇರವಾಗಿ ಚರ್ಚಿಸುತ್ತಾ ನನ್ನ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದ್ದೇನೆ. ನಾನು ನೇರವಾಗಿ ಹೇಳಿದ್ದೇನೆ, ಅಮೆರಿಕಾದ ಅಧ್ಯಕ್ಷರಾಗಿ ಮಾನವ ಹಕ್ಕುಗಳ ವಿಷಯದ ಬಗ್ಗೆ ಮೌನವಾಗಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇಸ್ತಾನ್‌ಬುಲ್‌ನಲ್ಲಿರುವ ಸೌದಿ ಅರೇಬಿಯಾದ ದೂತಾವಾಸದಲ್ಲಿ ಸೌದಿ ಏಜೆಂಟರಿಂದ ಹತ್ಯೆಗೀಡಾದ, ಸೌದಿ ಮೂಲದ ಪತ್ರಕರ್ತ ಖಶೋಗಿಯನ್ನು ಸೆರೆಹಿಡಿಯಲು ಅಥವಾ ಕೊಲ್ಲುವ ಕಾರ್ಯಾಚರಣೆಯನ್ನು ರಾಜಕುಮಾರ ಸಲ್ಮಾನ್‌‌ ಅನುಮೋದಿಸಿದ್ದಾರೆ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಖಶೋಗಿ ಕೊಲೆಯು ಅಘಾತಕಾರಿ ಎಂದು ಎಂದು ಬಿಡೆನ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

“ಸೌದಿ ರಾಜಕುಮಾರ ಕೊಲೆಗೆ ತಾನು ವೈಯಕ್ತಿಕವಾಗಿ ಜವಾಬ್ದಾರನಲ್ಲ ಎಂದು ಹೇಳಿದ್ದಾರೆ. ಆದರೆ ನಾನು ಕೊಲೆಗೆ ನೀವೇ ಕಾರಣ ಎಂದು ಭಾವಿಸಿದ್ದೇನೆ ಎಂದು ಸೂಚಿಸಿದೆ” ಎಂದು ಎಂದು ಬಿಡೆನ್ ತಮ್ಮ ಸಭೆಯ ಸಮಯದಲ್ಲಿ ರಾಜಕುಮಾರನ ಪ್ರತಿಕ್ರಿಯೆಯ ಬಗ್ಗೆ ಹೇಳಿದ್ದಾರೆ.

ಜೊ ಬಿಡೆನ್‌ ಅವರು ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ, ಖಶೋಗಿಯ ಹತ್ಯೆಯ ಕಾರಣಕ್ಕೆ ಸೌದಿ ಅರೇಬಿಯಾವನ್ನು ವಿಶ್ವ ವೇದಿಕೆಯಲ್ಲಿ ಏಕಾಂಗಿ(ಪರಿಯಾ) ಮಾಡಬೇಕೆಂದು ಹೇಳಿದ್ದರು. ಈ ಹೇಳಿಕೆಗೆ ತಾನು ವಿಷಾದಿಸುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಈ ನಡವೆ ಸೌದಿ ರಾಜಕುಮಾರನೊಂದಿಗಿನ ಬಿಡೆನ್ ಅವರ ಸಂವಾದವು ವಾಷಿಂಗ್ಟನ್ ಪೋಸ್ಟ್ ಮತ್ತು ಪತ್ರಕರ್ತರ ಸಮಿತಿ ಸೇರಿದಂತೆ ಅಮೆರಿಕದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಖಶೋಗಿ ಅವರ ಪ್ರೇಯಸಿ ಹ್ಯಾಟಿಸ್ ಸೆಂಗಿಜ್ ಅವರು ಟ್ವಿಟ್ಟರ್‌ನಲ್ಲಿ ಬಿಡೆನ್ ಅವರು ಸೌದಿ ರಾಜಕುಮಾರನೊಂದಿಗಿನ ಭೇಟಿಯ ಚಿತ್ರವನ್ನು ಟ್ವೀಟ್ ಮಾಡಿ, “ಖಶೋಗಿ ಹೀಗೆ ಬರೆಯುತ್ತಾರೆ; ನನ್ನ ಕೊಲೆಗೆ ನೀವು ಭರವಸೆ ನೀಡಿದ ಹೊಣೆಗಾರಿಕೆ ಇದುವೇ? ರಾಜಕುಮಾರ ಸಲ್ಮಾನ್‌ನ ಮುಂದಿನ ಬಲಿಪಶುಗಳ ರಕ್ತವು ನಿಮ್ಮ ಕೈಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...