Homeಮುಖಪುಟ‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

‘ಗಾರ್ಗಿ’ ವಿಮರ್ಶೆ: ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ ಅನಾವರಣ

- Advertisement -
- Advertisement -

ಲೇಡಿ ಸೂಪರ್‌ ಸ್ಟಾರ್‌ ಎಂದೇ ಖ್ಯಾತರಾದ, ಬಹುಭಾಷಾ ನಟಿ ಸಾಯಿ ಪಲ್ಲವಿ ಇತ್ತೀಚಿನ ದಿನಗಳಲ್ಲಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ‘ಗಾರ್ಗಿ’ ಸಿನಿಮಾ ಅದರ ಮುಂದುವರಿದ ಭಾಗವಾಗಿ ದಾಖಲಾಗಿದೆ.

ತೆಲುಗು, ತಮಿಳು ಹಾಗೂ ಕನ್ನಡ ಭಾಷೆಯಲ್ಲಿ ತೆರೆಕಂಡಿರುವ ‘ಗಾರ್ಗಿ’, ಹೆಣ್ಣಿನ ಮೇಲಾಗುತ್ತಿರುವ ಅನಾದಿಕಾಲದ ಕಿರುಕುಳದ ಕುರಿತು ಮಾತನಾಡುತ್ತದೆ. ‘ಎಲ್ಲಿ ಮಹಿಳೆಯರನ್ನು ಪೂಜಿಸುತ್ತಾರೋ, ಅಲ್ಲಿ ದೇವತೆಗಳು ನಲೆಸಿರುತ್ತಾರೆ’ ಎಂಬುದೆಲ್ಲ ಬಾಯಿ ಮಾತಿನ ಗೌರವ. ಆದರೆ ಹೆಣ್ಣನ್ನು ಭೋಗದ ವಸ್ತು ಎಂದು ನೋಡುವ ಪುರುಷಪ್ರಧಾನ ಮನಸ್ಥಿತಿಯೇ ವಾಸ್ತವ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಬೇಟಿ ಪಡಾವೋ, ಬೇಟಿ ಬಜಾವೋ’ ಎಂದು ಸರ್ಕಾರವೂ ಹೇಳುತ್ತದೆ. ಹೆಣ್ಣಿನ ರಕ್ಷಣೆಯ ಮೇಲೆ ಮಾಡುವ ಉದ್ದುದ್ದದ ಭಾಷಣಗಳಿಗೆ ಕೊನೆಯೂ ಇಲ್ಲ. ಆದರೆ ಸಮಾಜ ತನ್ನ ಆಂತರ್ಯದಲ್ಲಿ ಇಟ್ಟುಕೊಂಡಿರುವ ಪುರುಷಾಧಿಪತ್ಯದ ತಣ್ಣನೆಯ ಕ್ರೌರ್ಯ, ಯಾವಾಗ, ಯಾವ ರೀತಿಯಲ್ಲಿ ಅನಾವರಣವಾಗುತ್ತದೆ ಎಂದು ಹೇಳಲಾಗದು. ನಿರ್ದೇಶಕ ಗೌತಮ್‌ ರಾಮಚಂದ್ರನ್‌ ಈ ಕಹಿ ಸತ್ಯವನ್ನು ಇಲ್ಲಿ ಚರ್ಚಿಸಿದ್ದಾರೆ.

“ಹೆಣ್ಣಿನ ಜಗತ್ತಿನಲ್ಲೇ ಹೆಣ್ಣೇ ಹೆಣ್ಣಿಗೆ ಅಂತಿಮ ಆಸರೆ. ವಿಕೃತ ಜಗತ್ತನ್ನು ಎದುರಿಸಬೇಕಾದರೆ ಹೆಣ್ಣೊಬ್ಬಳು ಇನ್ನೊಬ್ಬ ಹೆಣ್ಣಿನ ಕೈ ಹಿಡಿದು ಸಂಘಟಿತವಾಗಿ ನಡೆಯಬೇಕು. ತನ್ನ ಮೇಲಾಗುವ ದೌರ್ಜನ್ಯವನ್ನು ಯಾವುದೇ ಮರ್ಜಿಗೆ ಒಳಗಾಗದೆ ಮಣಿಸಬೇಕು” ಎಂಬ ಸಂದೇಶವನ್ನು ‘ಗಾರ್ಗಿ’ ಸಿನಿಮಾ ನೀಡುತ್ತದೆ.

ಬಾಲಕಿಯೊಬ್ಬಳ ಮೇಲೆ ನಡೆಯುವ ಗ್ಯಾಗ್ ರೇಪ್‌ವೊಂದರ ಸುತ್ತಲಿನ ಕಥಾ ಹಂದರವನ್ನು ಒಳಗೊಂಡಿರುವ ‘ಗಾರ್ಗಿ’- ಕೋರ್ಟ್ ರೂಮ್‌ ಡ್ರಾಮಾ ಕೂಡ ಹೌದು. ‘ಪೊಲೀಸರು ಬಂಧಿಸಿರುವವರೆಲ್ಲರೂ ತಪ್ಪಿತಸ್ಥರಾ?’ ಎಂಬ ಪ್ರಶ್ನೆಯ ಮೇಲೆ ಸಾಗುವ ಸಿನಿಮಾ ಅಂತಿಮವಾಗಿ ನೀಡುವ ಸಂದೇಶವೂ ಮೌಲಿಕವಾಗಿದೆ. ಹಿತಮಿತವಾದ ಸಿನಿಮ್ಯಾಟಿಕ್‌ ನಿರೂಪಣೆಯಲ್ಲಿ ಸಾಗುವ ಕೆಳ ಮಧ್ಯಮ ವರ್ಗವೊಂದರ ಕಥೆಯನ್ನೊಳಗೊಂಡ ‘ಗಾರ್ಗಿ’ ವಾಸ್ತವಗಳಿಗೆ ಹತ್ತಿರವಾಗಿ ಚಿತ್ರಿತವಾಗಿದೆ.

‘ಗಾರ್ಗಿ’ ಎಂಬ ಹೆಸರಿಗೆ ವಿಶೇಷ ಅರ್ಥವೂ ಇದೆ. ಆಕೆ, ವೇದ ಕಾಲದಲ್ಲಿ ದಾಖಲಾಗಿರುವ ಮಹಿಳಾ ವಿದ್ವಾಂಸೆಯೂ ಹೌದು. ಆರಂಭಿಕ ಮಹಿಳಾವಾದಿಗಳ ಸಾಲಿನಲ್ಲೂ ಆಕೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ‘ಗಾರ್ಗಿ’ ಎಂಬ ಹೆಸರಿಗೆ ವಿಶೇಷವಾದ ಅರ್ಥವಂತಿಕೆ ಪ್ರಾಪ್ತವಾಗಿದೆ.

“ಹೆಣ್ಣೆಂದರೆ ಅಬಲೆ, ಆಕೆಯ ಹಣೆಯ ಬರವೇ ಇಷ್ಟು, ಅವಳಿಂದ ಏನೂ ಆಗದು” ಎಂಬ ಸಿದ್ಧಮಾದರಿ ಚೌಕಟ್ಟುಗಳನ್ನು ಶಿಕ್ಷಕಿ ಗಾರ್ಗಿ ಪ್ರಶ್ನಿಸುತ್ತಾಳೆ. “ನೀನು ಹಣೆಬರ, ಕಾಲ, ವಿಧಿ ಎಲ್ಲವನ್ನೂ ನಂಬು. ನನ್ನನ್ನು ಮಾತ್ರ ನಂಬಬೇಡ. ಯಾಕಂದ್ರೆ ನಾನು ಗಂಡು ಹುಡುಗ ಅಲ್ಲ, ಹೆಣ್ಣು ತಾನೇ?” ಎಂದು ತನ್ನ ತಾಯಿಗೆ ಗಾರ್ಗಿ ಬೇಸರದಿಂದ ಕೇಳುತ್ತಾಳೆ. ಸತ್ಯಕ್ಕಾಗಿ ಹೋರಾಡುತ್ತಾಳೆ. ಸತ್ಯ ತಿಳಿದ ಮೇಲೆ ದಿಟ್ಟ ನಿಲುವನ್ನು ತಾಳುತ್ತಾಳೆ.

ಇಲ್ಲಿ ಟ್ರಾನ್ಸ್‌ಜೆಂಡರ್‌ ಮಹಿಳೆಯೊಬ್ಬರು ನ್ಯಾಯಾಧೀಶೆಯಾಗಿದ್ದಾರೆ. ಸಂತ್ರಸ್ತೆಯ ಪರವಾಗಿ ವಾದ ಮಂಡಿಸುತ್ತಿರುವ ವಕೀಲನ ಒರಟು ಮಾತುಗಳಿಗೆ ನ್ಯಾಯಾಧೀಶೆ ತೀಕ್ಷ್ಣವಾಗಿ ಉತ್ತರಿಸುತ್ತಾರೆ. ಅಂತಿಮವಾಗಿ ಸತ್ಯದ ಅನಾವರಣವಷ್ಟೇ ಮುಖ್ಯವಾಗಬೇಕು ಎಂಬುದನ್ನು ಟ್ರಾನ್ಸ್‌ಜೆಂಡರ್‌ ನ್ಯಾಯಾಧೀಶೆ ಮನವರಿಕೆ ಮಾಡಿಕೊಡುತ್ತಾರೆ.

ಒಂದು ಸಣ್ಣ ಎಳೆಯ ಕಥೆಯಾದರೂ ತೀರಾ ಮೈನವಿರೇಳಿಸುವ ರೋಚಕತೆಯನ್ನೇನೂ ಗಾರ್ಗಿ ಒಳಗೊಂಡಿಲ್ಲ. ಅಗತ್ಯಕ್ಕೂ ಮೀರಿ ರೋಚಕತೆಯನ್ನು ಸೇರಿಸಲು ನಿರ್ದೇಶಕರು ಪ್ರಯತ್ನಿಸಿಲ್ಲ. ಬಂಧನಕ್ಕೊಳಗಾದ ತಂದೆಯನ್ನು ಹೊರಗೆ ತರಲು ಒಬ್ಬೊಂಟಿಯಾಗಿ ಹೋರಾಡುವ, ಸತ್ಯದ ಹುಡುಕಾಟಕ್ಕಾಗಿ ಪರಿತಪಿಸುತ್ತಿರುವ ಹೆಣ್ಣು ಮಗಳೊಬ್ಬಳ ತೊಳಲಾಟಗಳನ್ನು ಗಾರ್ಗಿ ಕಟ್ಟಿಕೊಡುತ್ತದೆ. ಎಲ್ಲವನ್ನೂ ಸಮರ್ಥವಾಗಿ ಎದುರಿಸುವ ಆಕೆಯ ಮನೋಬಲ ಚಿತ್ರಕತೆಯಲ್ಲಿ ನಿರೂಪಣೆಗೊಂಡಿದೆ.

ಸೂಕ್ಷ್ಮ ಸಂಗತಿಯೊಂದರ ಸುತ್ತ ಮಾಧ್ಯಮಗಳು ತೋರುವ ಧಾವಂತವನ್ನು ಇಲ್ಲಿಯೂ ನಿಕಶಕ್ಕೊಡ್ಡಿದ್ದರೂ, ಅಂತಿಮ ಜಿಜ್ಞಾಸೆಯಾಗಿ ಅದು ಉಳಿದಿಲ್ಲ. ಮಾಧ್ಯಮಗಳು ತೋರುವುದೆಲ್ಲ ಸತ್ಯವಲ್ಲದಿದ್ದರೂ ಅವುಗಳು ತೋರಿಸುವ ಕೆಲವು ಸಂಗತಿಗಳು ಸತ್ಯವೂ ಆಗಿರಬಹುದು ಎನಿಸುತ್ತದೆ.

ಇದನ್ನೂ ಓದಿರಿ: ‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ…

ಸಾಯಿ ಪಲ್ಲವಿ ಮತ್ತೊಮ್ಮೆ ತಮ್ಮ ಅಭಿಮಾನಿಗಳಿಗೆ ಇಷ್ಟವಾಗುವುದು ಖಚಿತ. ಕನ್ನಡ ವರ್ಷನ್‌ನಲ್ಲಿ ಸಾಯಿ ಪಲ್ಲವಿಯವರೇ ಡಬ್‌ ಮಾಡಿರುವುದು ಇಲ್ಲಿನ ಅಭಿಮಾನಿಗಳಿಗೆ ಮುದ ನೀಡುತ್ತದೆ. ಅತ್ಯಾಚಾರಿ ಆರೋಪಿಯಾಗಿ ಅಭಿನಯಿಸಿರುವ ಆರ್‌.ಎಸ್‌.ಶಿವಾಜಿ, ತಣ್ಣನೆಯ ಕ್ರೌರ್ಯವನ್ನು ಪರಿಚಯಿಸುತ್ತಾರೆ. ವಕೀಲನಾಗಿ ಕಾಳಿ ವೆಂಕಟ್‌, ಪತ್ರಕರ್ತೆಯಾಗಿ ಐಶ್ವರ್ಯ ಲಕ್ಷ್ಮಿ, ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಂದೆಯ ಪಾತ್ರದಲ್ಲಿ ಸರವಣ್‌ ಅಭಿನಯಿಸಿದ್ದಾರೆ.

ಹಿನ್ನೆಲೆ ಸಂಗೀತ ಮತ್ತಷ್ಟು ತೀವ್ರವಾಗಿಸಬಹುದಿತ್ತು ಎನಿಸುತ್ತದೆ. ಸಿನಿಮಾದಲ್ಲಿ ಬಳಸಿರುವ ಬಿಟ್ ಸಾಂಗ್‌ಗಳು ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ. ‘ಗಾರ್ಗಿ’ಯ ಪ್ರಿಯಕರನ ಪಾತ್ರ- ಹಾಗೆ ಬಂದು ಹೀಗೆ ಹೋದಂತೆ ಭಾಸವಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರದಂತಹ ವ್ಯವಸ್ಥೆಯನ್ನು ಅತ್ಯಂತ ಬಾಲಿಷವಾಗಿ ತೋರಿಸಿದ್ದಾರೆನಿಸುತ್ತದೆ. ಇಂತಹ ದೃಶ್ಯಗಳಿಂದಾಗಿ ನ್ಯಾಯಾಂಗದ ನೆರವಿನ ಕುರಿತು ಜನರಲ್ಲಿ ಕೆಟ್ಟ ಅಭಿಪ್ರಾಯವೂ ಮೂಡಿಬಿಡಬಹುದು. ಇಂತಹ ಕೆಲವು ಕೊರತೆ ಬಿಟ್ಟರೆ ‘ಗಾರ್ಗಿ’, ಚರ್ಚೆಗೊಳಪಡಬೇಕಾದ ಸಿನಿಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...