Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...