Homeದಲಿತ್ ಫೈಲ್ಸ್‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ದಲಿತ ಮಹಿಳೆ ಸುನೀತಾ ಅವರು ದಾಖಲಿಸಿರುವ ಪ್ರಕರಣವನ್ನು ವಾಪಸ್‌ ಪಡೆಯುವಂತೆ ಒತ್ತಡ ಹೇರಲು ಸಂಬಳ ನೀಡದೆ ತೊಂದರೆ ನೀಡಲಾಗುತ್ತಿದೆ.

- Advertisement -
- Advertisement -

ದಲಿತ ಭೋಜನ್ಮಾತಾ (ಬಿಸಿಯೂಟದ ಸಿಬ್ಬಂದಿ) ಸುನಿತಾ ದೇವಿ ಅವರು ಬೇಯಿಸಿದ ಮಧ್ಯಾಹ್ನದ ಊಟವನ್ನು ಕೆಲವು ಮೇಲ್ಜಾತಿಯ ವಿದ್ಯಾರ್ಥಿಗಳು ನಿರಾಕರಿಸಿದ ಪ್ರಕರಣ ನಡೆದು ಆರು ತಿಂಗಳಾಯಿತು. ಆದರೆ ಇಷ್ಟು ದಿನದ ನಂತರವೂ ಚಂಪಾವತ್‌ನ ಸುಖಿದಂಗ್ ಸರ್ಕಾರಿ ಅಂತರ ಕಾಲೇಜಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸವರ್ಣೀಯ ಜಾತಿಯ ಮಕ್ಕಳು ಅಸ್ಪೃಶ್ಯತೆ ಆಚರಿಸುವುದನ್ನು ಮುಂದುರಿಸಿದ್ದಾರೆ.

“ವಿದ್ಯಾರ್ಥಿಗಳು ನಾನು ಬೇಯಿಸಿದ ಊಟವನ್ನು ತಿನ್ನಲು ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ನೀಡಲಾಗುವ ಹಾಲನ್ನೂ ಬೇಡ ಎನ್ನುತ್ತಿದ್ದಾರೆ” ಎಂದು ಸುನೀತಾ ಶನಿವಾರ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಂಪಾವತ್‌ನ ಡಿಎಂ ನರೇಂದರ್ ಸಿಂಗ್ ಭಂಡಾರಿ ಅವರು ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೂಚನೆಯನ್ನೂ ನೀಡಿ, “ಜಾತಿ ತಾರತಮ್ಯದಿಂದ ಹೊರಬರಬೇಕು” ಎಂದು ತಿಳಿಸಿದ್ದಾರೆ.

ಕೆಲವು ಮೇಲ್ವರ್ಗದ ವಿದ್ಯಾರ್ಥಿಗಳ ಪೋಷಕರು, “ದಲಿತ ಮಹಿಳೆ ಮಾಡಿದ ಊಟವನ್ನು ಬಲವಂತವಾಗಿ ನಮ್ಮ ಮಕ್ಕಳಿಗೆ ನೀಡಬಾರದು” ಎಂದು ಆಗ್ರಹಿಸಿದ್ದಾರೆ.

ಶಾಲೆಯಲ್ಲಿ 57 ವಿದ್ಯಾರ್ಥಿಗಳಿದ್ದಾರೆ. ಸಾಮಾನ್ಯ ವರ್ಗದ 37 ವಿದ್ಯಾರ್ಥಿಗಳು, ಎಸ್‌ಸಿ ಸಮುದಾಯದಿಂದ 20 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

“ನಾನು ಅಡುಗೆ ಕೆಲಸ ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಮಕ್ಕಳು ಬಯಸುತ್ತಾರೆ” ಎನ್ನುತ್ತಾರೆ ಸುನಿತಾ. ಇಲ್ಲಿ ಇಬ್ಬರು ಅಡುಗೆಯವರು ಇದ್ದು, ಸಾಮಾನ್ಯ ವರ್ಗದ ವಿಮಲಾ ಉಪ್ರೇತಿ 2016ರಲ್ಲಿ ನೇಮಕವಾಗಿದ್ದಾರೆ. ದಲಿತರಾದ ಸುನಿತಾ ದೇವಿ ಅವರು ಈ ವರ್ಷದ ಜನವರಿಯಲ್ಲಿ ಮರುಸೇರ್ಪಡೆಯಾಗಿದ್ದಾರೆ.

‘ಟೈಮ್ಸ್ ಆಫ್‌ ಇಂಡಿಯಾ’ ಜೊತೆ ಮಾತನಾಡಿರುವ ಸುನೀತಾ, “ನಾನು ತಯಾರಿಸಿದ ಊಟವನ್ನು ಡಿಎಂ ಕೋರಿಕೆಯ ನಂತರವೂ ಅವರು ತಿನ್ನಲು ಸಿದ್ಧರಿಲ್ಲ. ಆದರೆ, ಇತರ ಭೋಜನ್ಮಾತಾ ವಿಷಯದಲ್ಲಿ ಹೀಗಾಗಿಲ್ಲ. ನನ್ನ ಬಗೆಗೆ ಇರುವ ತಾರತಮ್ಯದ ಮನೋಭಾವವನ್ನು ಅಧಿಕಾರಿಗಳಿಂದ ಬದಲಾಯಿಸಲು ಸಾಧ್ಯವಾಗದಿದ್ದಾಗ, ಇನ್ಯಾರೂ ಸರಿಪಡಿಸಬಲ್ಲರು?” ಎಂದು ಪ್ರಶ್ನಿಸಿದ್ದಾರೆ.

“ಶಾಲೆಯ ಪೋಷಕರು-ಶಿಕ್ಷಕರ ಸಂಘದ ಅಧ್ಯಕ್ಷರು ನನ್ನ ವೇತನವನ್ನು (ಮೇ ತಿಂಗಳಿಗೆ) ಒಂದು ತಿಂಗಳಿನಿಂದ ತಡೆಹಿಡಿದಿದ್ದಾರೆ. ನಾನು ಶಾಲೆಯ ಕೆಲಸವನ್ನು ಬಿಟ್ಟು ಕೂಲಿ ಕೆಲಸ ಮಾಡಬೇಕೆಂದು ಗ್ರಾಮದ ಕೆಲವು ಸವರ್ಣೀಯರು ಬಯಸುತ್ತಿದ್ದಾರೆ” ಎಂದು ಸುನೀತಾ ಆರೋಪಿಸಿದ್ದಾರೆ.

“ಅಧ್ಯಕ್ಷರು ನನ್ನ ವೇತನದ ಚೆಕ್‌ಗೆ ಸಹಿ ಹಾಕಲು ನಿರಾಕರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ನಾನು ನೀಡಿದ ದೂರಿನ ಆಧಾರದಲ್ಲಿ ಅಧ್ಯಕ್ಷರು ಮತ್ತು ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಮೂಲಕ ಒತ್ತಡ ಹಾಕಲಾಗುತ್ತಿದೆ. ಆದರೆ ನಾನು ಪ್ರಕರಣವನ್ನು ಹಿಂಪಡೆಯುವುದಿಲ್ಲ, ಅದು ನನ್ನ ಘನತೆಯ ವಿಷಯ” ಎಂದಿದ್ದಾರೆ ಸುನೀತಾ.

ಹಲವು ಬಾರಿ ಪ್ರಯತ್ನಿಸಿದರೂ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಅಲ್ಲದೆ ಈಗ ಆಗುತ್ತಿರುವ ಬೆಳವಣಿಗೆಗಳು ನಿಜವೆಂದು ಶಾಲೆಯ ನಿರ್ವಹಣಾ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಉತ್ತರಾಖಾಂಡ್‌: ದಲಿತ ಮಹಿಳೆ ಬೇಯಿಸಿದ ಆಹಾರ ಸೇವಿಸಲು ಮತ್ತೆ ನಿರಾಕರಿಸಿದ ಸವರ್ಣೀಯ ವಿದ್ಯಾರ್ಥಿಗಳು

ಇದೇ ವೇಳೆ ಮಾತನಾಡಿರುವ ಜಿಲ್ಲಾ ಮುಖ್ಯ ಶಿಕ್ಷಣಾಧಿಕಾರಿ ಜಿತೇಂದ್ರ ಸಕ್ಸೇನಾ, “ಸಂಬಳದ ವಿಚಾರ ನನ್ನ ಅರಿವಿಗೆ ಬಂದಿರಲಿಲ್ಲ. ಸಂಬಳ ಸಿಗುವಂತೆ ಕ್ರಮಕೈಗೊಳ್ಳುತ್ತೇವೆ. ಸುನೀತಾ ಅವರು ತಯಾರಿಸಿದ ಊಟವನ್ನು ತಿನ್ನಲು ವಿದ್ಯಾರ್ಥಿಗಳು ನಿರಾಕರಿಸುತ್ತಲೇ ಇದ್ದಾರೆ. ಈ ತಾರತಮ್ಯವನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸುನೀತಾ ದೇವಿ ಅವರನ್ನು ಸರಿಯಾದ ಕಾರ್ಯವಿಧಾನದ ಪ್ರಕಾರ ನೇಮಕ ಮಾಡಿರುವುದರಿಂದ ಅವರನ್ನು ಕೆಲಸದಿಂದ ತೆಗೆಯಲು ಸಾಧ್ಯವಿಲ್ಲ” ಎಂದಿದ್ದಾರೆ.

ಕಳೆದ ವರ್ಷ ಈ ಘಟನೆಯ ಬಗ್ಗೆ ವರದಿ ಮಾಡಿದಾಗ ಸುನೀತಾ ಅವರಿಗೆ ಆಗಿರುವ ತಾರತಮ್ಯ ಬೆಳಕಿಗೆ ಬಂದಿತು. ದಲಿತ ಮಹಿಳೆಯ ನೇಮಕಾತಿಯನ್ನು ಜಿಲ್ಲೆಯ ಮುಖ್ಯ ಶಿಕ್ಷಣಾಧಿಕಾರಿ ರದ್ದು ಮಾಡಿದ್ದರು. ಕೆಲವು ದಿನಗಳ ನಂತರ, ಚಂಪಾವತ್ ಜಿಲ್ಲಾಡಳಿತವು ಸುನೀತಾ ಅವರನ್ನು ಮರು ನೇಮಕ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...