Homeಕರ್ನಾಟಕಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

ಕ್ಯಾಮೆರಾ ನಿರ್ಬಂಧ ಆದೇಶ ಸಿಎಂ ಗಮನಕ್ಕೆ ಬಂದಿತ್ತು: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು?

“ನನ್ನ ಗಮನಕ್ಕೆ ಬಾರದೆ ಆದೇಶ ಮಾಡಲಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದರು. ಆದರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮಾಡಿರುವ ಭಾಷಣ ಬೇರೆಯೇ ಕಥೆ ಹೇಳುತ್ತಿದೆ!

- Advertisement -
- Advertisement -

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೊ ತೆಗೆಯುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿ ನಗೆಪಾಟಲಿಗೀಡಾಯಿತು. ಶುಕ್ರವಾರ ತಡರಾತ್ರಿ ಆದೇಶವನ್ನು ರದ್ದು ಮಾಡಿಯೂ ಆಯಿತು. ನಂತರದಲ್ಲಿ ಮಾಧ್ಯಮಗಳ ಮುಂದೆ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ನನ್ನ ಗಮನಕ್ಕೆ ಬಾರದೆ ನಿರ್ಬಂಧ ಆದೇಶ ಹೊರಬಿದ್ದಿದೆ” ಎಂದು ಹೇಳಿಕೆ ನೀಡಿದ್ದರು.

ನಂತರದ ಬೆಳವಣಿಗೆಯಲ್ಲಿ, “ಸಿಎಂ ಸೂಚನೆಯ ಮೇರೆಗೆಯೇ ಆದೇಶ ಹೊರಡಿಸಲಾಗಿದೆ” ಎಂಬ ಸಂಗತಿ ಹೊರಬಿದ್ದಿದೆ.

ಈ ಕುರಿತು ವರದಿ ಮಾಡಿರುವ ‘ದಿ ಫೈಲ್‌’ ತನಿಖಾ ಜಾಲತಾಣ, “ಆಡಳಿತ ಸುಧಾರಣಾ ಇಲಾಖೆಯು ಶುಕ್ರವಾರ ಹೊರಡಿಸಿದ್ದ ಆದೇಶವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನದಲ್ಲಿತ್ತು” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ಮನವಿ ಮೇರೆಗೆ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಷ್ಟಸಮಿತಿಯ ಕಾರ್ಯಕರ್ತರು ಜಿಲ್ಲಾ ತಾಲೂಕು ಕಚೇರಿ, ಪೊಲೀಸ್‌ ಠಾಣೆ, ಜಿಲ್ಲಾ ತಾಲೂಕು ಆಸ್ಪತ್ರೆಗಳಿಗೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಿಡಿಯೋ ಲೈವ್ ಮಾಡುತ್ತಿರುವುದನ್ನೂ ಆಲಮಟ್ಟಿಯ ಕಾರ್ಯಕ್ರಮವೊಂದರಲ್ಲಿ ಮಾಡಿರುವ ಭಾಷಣದಲ್ಲಿ ಪ್ರಸ್ತಾಪಿಸಿರುವ ಷಡಕ್ಷರಿ ಅವರು ಮುಖ್ಯಮಂತ್ರಿಯವರೊಂದಿಗೆ ಇದನ್ನು ಪ್ರಸ್ತಾಪಿಸಿದ್ದರು. ಹಾಗೆಯೇ ಅವರ ಗಮನಕ್ಕೆ ತಂದೇ ಆದೇಶ ಹೊರಡಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಲಮಟ್ಟಿಯಲ್ಲಿ ನಡೆದಿದ್ದ ಸ್ವಚ್ಛತಾ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಮುಖ್ಯಮಂತ್ರಿಯೊಂದಿಗೆ ಕಾರಿನಲ್ಲಿ ಹೋಗುವಾಗ ಈ ವಿಚಾರವನ್ನು ಅವರ ಗಮನಕ್ಕೆ ತಂದು ಆದೇಶ ಮಾಡಿಸಲಾಗಿದೆ ಎಂದು ನೌಕರರ ಕಾರ್ಯಕ್ರಮ ಭಾಷಣದಲ್ಲಿ ಬಹಿರಂಗಪಡಿಸಿದ್ದಾರೆ ಎಂದು ‘ದಿ ಫೈಲ್‌’ ಹಾಗೂ ‘ವಾರ್ತಾ ಭಾರತಿ’ಯಲ್ಲಿ ವರದಿಯಾಗಿದೆ.

ಆಡಿಯೋದಲ್ಲೇನಿದೆ?

“ಈಗೊಂದು ಆರ್ಡರ್ ಮಾಡಿಸ್ದೆ. ಈಗಸ್ಟೇ ವಾಟ್ಸ್‌ಅಪ್‌ನಲ್ಲಿ ಬಂತು. ಕಳೆದ ಒಂದು ತಿಂಗಳಿಂದಲೂ ನಿರಂತರ ಪ್ರಯತ್ನ ಮಾಡಿದ್ದೇನೆ. ಇನ್ಮುಂದೆ ನಮ್ಮ ರಾಜ್ಯದ ಯಾವುದೇ ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿ ಬಂದು ಫೋಟೋ ತೆಗಿಯಂಗಿಲ್ಲ. ವಿಡಿಯೋ ಶೂಟ್ ಮಾಡಂಗಿಲ್ಲ. ಮೇಲಾಧಿಕಾರಿಗಳ ಅನುಮತಿ ಇಲ್ಲದೆಯೇ ಯಾವುದೇ ಕಚೇರಿಗಳಿಗೆ ಹೋಗಿ ಆ ರೀತಿಯ ಪ್ರಕ್ರಿಯೆಗಳನ್ನು ಮಾಡಬಾರದು ಎಂದು ಸರ್ಕಾರ ನಿರ್ಬಂಧಿಸಿ ಆದೇಶ ಮಾಡಿದೆ” ಎನ್ನುತ್ತಾರೆ ಷಡಕ್ಷರಿ.

ಇದನ್ನೂ ಓದಿರಿ: ಇದು ‘ಮಧ್ಯರಾತ್ರಿ’ ಆದೇಶವಲ್ಲ, ‘ಮದ್ಯರಾತ್ರಿ’ ಆದೇಶ: ಸರ್ಕಾರದ ಎಡವಟ್ಟಿಗೆ ಜನರ ವ್ಯಂಗ್ಯ

“ಬಹುಶಃ ಯೋಚನೆ ಮಾಡಿ. ಬಹಳಷ್ಟು ಹೆಣ್ಮಕ್ಳು ಹೆಡ್‌ಪೀಸ್‌ಗಳಲ್ಲಿ, ತಾಲೂಕು ಆಫೀಸ್‌ಗಳಲ್ಲಿ ಜಿಲ್ಲಾ ಪಂಚಾಯ್ತಿಗಳಲ್ಲಿ, ರೆವಿನ್ಯೂ ಅಫೀಸ್‌ಗಳಲ್ಲಿ, ಜಿಲ್ಲಾ ಕಚೇರಿಗಳಲ್ಲಿ ಕೆಎಸ್‌ಆರ್ ಪಾರ್ಟಿ, ಸಂಘ ಸಂಸ್ಥೆಗಳು, ವ್ಯಕ್ತಿ ಆಧರಿತ ಸಂಘಟನೆಗಳು ಬರ್ತಾವೆ. ಫೋಟೋ ತೆಗಿತಾರೆ, ವಿಡಿಯೋ ಮಾಡ್ತಾರೆ. ಸ್ವಾಭಿಮಾನದ ಹಕ್ಕುಗಳನ್ನು ಕಿತ್‌ಕೊಳ್ಳುವಂತ ಕೆಲ್ಸಗಳು ಆ ಸಂದರ್ಭದಲ್ಲಿ ಆಗ್ತಾವೆ. ಲಾಸ್ಟ್ ವೀಕ್‌ನಲ್ಲಿ ನಾನು ಮುಖ್ಯಮಂತ್ರಿ ಜತೆ ಕಾರಿನಲ್ಲಿ ಹೋಗುವಾಗ ಮಾನ್ಯ ಮುಖ್ಯಮಂತ್ರಿಗಳಲ್ಲಿ ವಿನಂತಿ ಮಾಡ್ಡೆ. ಸಾರ್ ಈ ಆದೇಶ ಮಾಡೇಕು. ಮುಜುಗರ ಆಗ್ತಾ ಇದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗ್ತಾ ಇದೆ ಎಂದಾಗ ಮಾನ್ಯ ಮುಖ್ಯಮಂತ್ರಿಗಳು, ಆದೇಶ ಮಾಡಿದ್ರು” ಎಂದು ಭಾಷಣದಲ್ಲಿ ದಾಖಲಾಗಿದೆ. ಷಡಕ್ಷರಿಯವರ ಮಾತುಗಳಿಗೆ ಪ್ರೇಕ್ಷಕರು ಚಪ್ಪಾಳೆಯನ್ನೂ ಹೊಡೆದಿದ್ದಾರೆ.

“ಹಾಗಾದರೆ ಮುಖ್ಯಮಂತ್ರಿಯವರು ಮಾಧ್ಯಮಗಳ ಎದುರು ಸುಳ್ಳು ಹೇಳಿದರೆ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...