Homeಅಂಕಣಗಳುಪ್ರತಾಪ ಸಿಮ್ಮ ’ಆರೆಸೆಸ್ ಆಳ ಮತ್ತು ಅಗಲ’ ಓದಿದ್ರಾ?

ಪ್ರತಾಪ ಸಿಮ್ಮ ’ಆರೆಸೆಸ್ ಆಳ ಮತ್ತು ಅಗಲ’ ಓದಿದ್ರಾ?

- Advertisement -
- Advertisement -

ದೇವನೂರ ಮಹದೇವರು ಸದ್ಯದ ಸರಕಾರ ನಡೆಸಿದ ಪಠ್ಯ ಪರಿಷ್ಕರಣೆ ಹಗರಣದ ಹಿನ್ನೆಲೆಯಲ್ಲಿ ’ನನ್ನ ಕಥನದ ಭಾಗವನ್ನು ಪಠ್ಯದಲ್ಲಿ ಸೇರಿಸದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ, ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಸಜ್ಜನನಿಗೆ ಬಂದ ಸಿಟ್ಟನ್ನು ಗ್ರಹಿಸಿದ ಉಳಿದ ಲೇಖಕರು ತಮ್ಮ ಕಥೆ-ಲೇಖನ-ಪದ್ಯಗಳನ್ನು ಪಠ್ಯದಿಂದ ಕೈಬಿಡಿ ಎಂಬ ಹೇಳಿಕೆ ಕೊಟ್ಟರು. ಇದರಿಂದ ಬೆಚ್ಚಿದ ಆರೆಸ್ಸೆಸ್ಸಿಗರು ದೇವನೂರರ ಮೇಲೆಯೇ ದಾಳಿ ಮಾಡಿದರು. ಅದರಲ್ಲಿ ಮುಖ್ಯವಾಗಿ ಪ್ರತಾಪ ಸಿಮ್ಮ, ’ದೇವನೂರರು ಕತೆ ಲೇಖನ ಬರೆದು ಹದಿನೈದು ವರ್ಷಗಳಾಗಿವೆ’, ಅಂದರೆ ಅವರು ಒಂದು ರೀತಿ ನಿವೃತ್ತ ಲೇಖಕರು ಎಂಬಂತೆ ಮಾತನಾಡಿದರು. ಅಲ್ಲಿಗೆ ಪ್ರತಾಪ ಸಿಮ್ಮ ದೇವನೂರನ್ನ ಓದಿಕೊಂಡಿದ್ದಾರೆ ಎಂದಾಯ್ತು. ಹದಿನೈದು ವರ್ಷದಿಂದ ಏನನ್ನೂ ಬರೆದಿಲ್ಲ ಎಂದು ದೂರಿದ ಪ್ರತಾಪ ಸಿಮ್ಮಗೆ ದೇವನೂರರು “ಆರೆಸೆಸ್ಸ್ ಆಳ ಮತ್ತು ಅಗಲ” ಬರೆದು ಮುಖಕ್ಕೆ ಹಿಡಿದಿದ್ದಾರೆ. ಈಗ ಸಿಮ್ಮ ಅದನ್ನ ಓದಿ ತಮ್ಮ ಬೌದ್ಧಿಕ ದಾರಿದ್ರ್ಯವನ್ನ ನೀಗಿಕೊಳ್ಳಬಹುದು. ಸಾಮಾನ್ಯವಾಗಿ ಶ್ರೇಷ್ಠ ಪತ್ರಕರ್ತನ ಗುಣ ಯಾವುದೆಂದರೆ ಆತ ಪೂರ್ವಗ್ರಹವಿಲ್ಲದವನಾಗಿರುತ್ತಾನೆ. ಸತ್ಯ ಸಂಗತಿಯ ಪ್ರತಿಪಾದನೆಯೇ ಆತನ ಗುರಿಯಾಗಿರಬೇಕು. ಅದಕ್ಕಾಗಿ ಆತ ಯಾವ ತ್ಯಾಗಕ್ಕಾದರೂ ಸಿದ್ಧನಾಗಿರುತ್ತಾನೆ. ಹೊಟ್ಟೆಪಾಡಿಗೆ ಏನನ್ನಾದ್ರೂ ಮಾಡಲು ಅಥವಾ ಯಾರನ್ನಾದರೂ ದೂಶಿಸಿ ಬಲಿಕೊಡಲು ತಯಾರಿರುವುದಿಲ್ಲ. ಅಂತ ಸಂದರ್ಭ ಬಂದರೆ ವೃತ್ತಿಯ ಘನತೆಗಾಗಿ ಹಿಂದೆ ಸರಿಯುತ್ತಾನೆ ಬಂಢ ಬಾಳನ್ನು ಬದುಕುವುದಿಲ್ಲವಂತಲ್ಲಾ, ಥೂತ್ತೇರಿ.

*****

ಈ ಪ್ರತಾಪ ಸಿಮ್ಮನ್ನ ಸೃಷ್ಟಿ ಮಾಡಿದ್ದು ದೇವೇಗೌಡರಂತಲ್ಲಾ ನಿಜವೆ? ಆಗ ದೇವೇಗೌಡರು ಸಿದ್ದರಾಮಯ್ಯನನ್ನ ಟೀಕಿಸಿದರೆ ಅದಕ್ಕೆ ಉತ್ತರ ಕೊಡುತ್ತಿದ್ದವರು ವಿಶ್ವನಾಥ. ಗೌಡರು ಸಿದ್ದು ಟೀಕಿಸಿದರೆ ವಿಶ್ವನಾಥ ಕೊಡುವ ಉತ್ತರದಿಂದ ಕೆರಳುತ್ತಿದ್ದ ಗೌಡರು ವಿಶ್ವನಾಥರ ಹುಟ್ಟಡಗಿಸಲು ತೀರ್ಮಾನಿಸಿದರಂತಲ್ಲಾ. ಆಗ ಲೋಕಸಭೆ ಚುನಾವಣೆ ಬಂದೇಬಿಟ್ಟಿತು. ಆರೆಸೆಸ್ಸಿಗರೆಲ್ಲಾ ಸೇರಿ ಪ್ರತಾಪ ಸಿಮ್ಮನ್ನ ಲೋಕಸಭೆ ಕ್ಯಾಂಡೇಟ್ ಮಾಡಿದರು. ದೇವೇಗೌಡರು ಪ್ರಬಲ ಅಭ್ಯರ್ಥಿ ಹಾಕಿದರೆ ಸಿಮ್ಮ ಎಗರಿ ಹೋಗುತ್ತಿದ್ದರು. ಆದರೆ ವಿಶ್ವನಾಥ್ ತೆಗೆಯುವ ಸಂಕಲ್ಪ ಮಾಡಿದ್ದ ಗೌಡರು ಠೇವಣಿ ಉಳಿಸಿಕೊಳ್ಳಲು ಹೋರಾಡುವಂತಹ ವ್ಯಕ್ತಿಯನ್ನ ಕ್ಯಾಂಡಿಡೇಟ್ ಮಾಡಿದರು. ಸಹಜವಾಗಿ ದಳದ ಓಟು ಬಿಜೆಪಿ ಪಾಲಾಗಿ ಅರ್ಧರಾತ್ರಿಯಲ್ಲಿ ನರಸಿಮ್ಮ ಕಾಣಿಸಿಕೊಂಡಂತೆ ಪ್ರತಾಪ ಸಿಮ್ಮನ ಉದ್ಭವವಾಯ್ತಲ್ಲಾ. ದೇವೇಗೌಡರ ಪಾಪಪ್ರಜ್ಞೆ ಕೆಲಸ ಮಾಡಿದ್ದರಿಂದ ಮುಂದೆ ವಿಶ್ವನಾಥರನ್ನ
ಪಾರ್ಟಿಯ ಪ್ರೆಸಿಡೆಂಟ್ ಮಾಡಿದರು. ಅಲ್ಲೂ ನಿಲ್ಲದ ವಿಶ್ವನಾಥ ಬಿಜೆಪಿಯಲ್ಲಿದ್ದರೂ ಆತ್ಮಸಾಕ್ಷಿಯಂತೆ ಮಾತನಾಡುತ್ತಿದ್ದಾರೆ. ಪಾಪ ಸಿದ್ದರಾಮಯ್ಯರಲ್ಲಿ ಉಪಕಾರ ಸ್ಮರಣೆಯಿದ್ದರೆ ವಿಶ್ವನಾಥರನ್ನ ಕೈ ಹಿಡಿದಿದ್ದರೆ ಅವರಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಸದ್ಯ ವಿಶ್ವನಾಥ ಸಿಮ್ಮನಂತಾಗಿಲ್ಲ. ಈಗಲೂ ಗೌಡರು ಮೈಸೂರಿನ ವಿಷಯದಲ್ಲಿ ಮನಸು ಮಾಡಿದರೆ, ಈ ಪೇಪರ್ ಸಿಮ್ಮನನ್ನ ಆರೆಸ್ಸೆಸ್ ಬೈಠಕ್‌ಗೆ ಸೀಮಿತಗೊಳಿಸಬಹುದಂತಲ್ಲಾ, ಥೂತ್ತೇರಿ.

******

ದೇವೇಗೌಡರ ದಳದ ವಿಷಯದಲ್ಲಿ ಜ್ಞಾನೋದಯವಾಗಿರುವ ಕಾಂಗೈ ಪಡೆ ಗೌಡರನ್ನ ಟೀಕಿಸದಂತೆ ಪಿಸುಮಾತಿನ ಚರ್ಚೆ ಮಾಡಿದರಂತಲ್ಲಾ. ಹಾಗೆ ನೋಡಿದರೆ ದೇವೇಗೌಡರು ಕಮ್ಯುನಿಟಿ ನಾಯಕರು, ಅವರಾದ ಮೇಲೆ ಅವರ ಮಗ ಜನಾಂಗದ ಲೀಡರು. ಜನಾಂಗದ ಲೀಡರಾಗಲು ಡಿ.ಕೆ ಶಿವಕುಮಾರ್ ಇನ್ನ ಕಷ್ಟಪಡಬೇಕಿದೆ, ಹಾಗಾಗಿ ಗೌಡರನ್ನ ಟೀಕಿಸುವ ಸಿದ್ದು ಪಡೆಯ ನಡವಳಿಕೆ ಅವರಿಗೂ ಇಷ್ಟವಿಲ್ಲ. ಮುಂದಿನ ರಾಜಾಕಾರಣ ಹೇಗೋ ಏನೋ ಸಿದ್ದರಾಮಯ್ಯ ನನ್ನ ಬದಿಗೆ ಸರಿಸಿ ಬೇರೆಯವರನ್ನ ಮುಖ್ಯಮಂತ್ರಿ ಮಾಡಲು ಮುಂದಾದರೆ, ನಮ್ಮ ಸಹಕಾರ ಇರುತ್ತದೆ ಎಂದು ಗೌಡರೇನಾದರೂ ಹೇಳುವ ಪ್ರಮೇಯ ಬಂದರೆ, ಅವರ ಮನೆ ಬಾಗಿಲಿಗೆ ಹೋಗಿ ಬೆಲ್ಲು ಒತ್ತುವ ಸ್ಥಿತಿ ಡಿ.ಕೆ.ಶಿಗೆ ಒದಗಿಬರಬಹುದು. ಇದೆಲ್ಲವನ್ನ ಗ್ರಹಿಸಿರುವ ಕಾಂಗ್ರೆಸ್ ಗೌಡರ ಕುಟುಂಬದ ಟೀಕೆಗೆ ಕಡಿವಾಣ ಹಾಕಿದೆಯಂತಲ್ಲಾ. ಸಾಮಾನ್ಯ ಮನುಷ್ಯರ ಮನಸ್ಸನ್ನು ಗ್ರಹಿಸಿದ್ದಾರೆ ಅವರು ತಮ್ಮ ಜನಾಂಗದ ನಾಯಕನನ್ನ ಇಷ್ಟಪಡುತ್ತಾರೆ. ನಾಯಕನ ಬಗೆಗಿನ ಟೀಕೆಯನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಸಿದ್ದರಾಮಯ್ಯನವರ ಟೀಕೆ ಜನಾಂಗದ ಲೀಡರುಗಳಿಗೆ ತಲುಪುವುದರ ಬದಲು ಜನಾಂಗವನ್ನೇ ತಲುಪಿದರೆ ಅದು ಡಿ.ಕೆ.ಶಿಗೆ ಕೊಡುವ ಹೊಡೆತವಾಗುತ್ತದಂತಲ್ಲಾ. ಇಂತಹ ಸಾಮಾನ್ಯ ತಿಳಿವಳಿಕೆ ಕಾಂಗ್ರೆಸ್ಸಿಗರಲ್ಲಿ ಮೂಡದಿದ್ದರೆ ತಮ್ಮ ವಿರೋಧಿಗಳನ್ನು ಸೋಲಿಸಲು ಕುಮಾರಣ್ಣ ಹಿಂದಿನಂತೆ ಬಿಜೆಪಿಗಳ ಜೊತೆಯಲ್ಲೂ ಕೈ ಜೋಡಿಸುವ ಅಪಾಯವಿದೆಯಂತಲ್ಲಾ, ಥೂತ್ತೇರಿ.

******

ಇದುವರೆಗೂ ಕರ್ನಾಟಕದಲ್ಲಿ ಬಿಜೆಪಿಗಳಿಂದ ನಡೆದ ಯಾವುದೇ ಪ್ರಮಾದಗಳಿಗೂ ಬಿಜೆಪಿಗಳು ಕ್ಷಮೆಯಾಚಿಸಿಲ್ಲ. ತಮ್ಮ ಪಾರ್ಟಿ ಜನರ ಮೂರ್ಖ ಹೇಳಿಕೆಗಳನ್ನ ಖಂಡಿಸಿಲ್ಲವಂತಲ್ಲಾ. ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ ನಡೆದ ’ಜೊತೆಗಿರುವನು ಚಂದಿರ’ ನಾಟಕವನ್ನ ಮಧ್ಯದಲ್ಲೇ ತಡೆದು ಭರತ ಮಾತೆಯ ಘೋಷಣೆ ಕೂಗಿದ ಕೃತ್ಯವನ್ನ ನಾಡಿನ ನಾಟಕಪ್ರಿಯ ಜನಗಳು ಒಕ್ಕೊರಲಿಂದ ಖಂಡಿಸಿದರೂ ಬಿಜೆಪಿಗಳು ಬಾಯಿಬಿಟ್ಟಿಲ್ಲ. ಅಷ್ಟಕ್ಕೂ ಈ ನಾಟಕ ಇದಕ್ಕೂ ಮೊದಲೆ ಶಿವಮೊಗ್ಗದಲ್ಲಿ ಪ್ರದರ್ಶನಗೊಂಡಿತ್ತು. ಆದರೆ ಆನವಟ್ಟಿಯ ಕೆಲ ಅಜ್ಞಾನಿಗಳು ನಾಟಕದೊಳಗಿನ ತಿರುಳನ್ನು ಗ್ರಹಿಸದೆ ಹೋದರಂತಲ್ಲಾ. ಪ್ರೇಕ್ಷಕರು ಮತ್ತು ಪಾತ್ರಧಾರಿಗಳು ಭಾವನಾತ್ಮಕವಾಗಿ ಸ್ಪಂದಿಸಿ ಆರ್ದ್ರತೆಯಿಂದ ಕಂಬನಿ ಮಿಡಿಯುವ ಸಮಯಕ್ಕೆ ಮೂವರು ಬಂದು “ನಾಟಕ ನಿಂತಿದೆ ಮನೆಗೆ ಹೋಗಿ” ಎಂದಕೂಡಲೇ ನೂರಾರು ಜನ ಪ್ರೇಕ್ಷಕರು ಸುಮ್ಮನೆ ಎದ್ದು ಹೋಗಿದ್ದಾರೆಂದರೆ ಈ ಸಮಾಜಕ್ಕೆ ಯಾವುದೋ ಅರ್ಥೈಸಲಾಗದ ಗರಬಡಿದಿದೆ. ಕೇವಲ ಮೂರು ಜನ ನೂರಾರು ಜನ ಪ್ರೇಕ್ಷಕರನ್ನ ಓಡಿಸುತ್ತಾರೆಂದರೆ ಖಂಡುಗ ಹಾಲನ್ನು ಹಾಳುಮಾಡುವ ಶಕ್ತಿ ಒಂದು ತೊಟ್ಟು ವಿಷಕ್ಕಿದೆ ಎಂದಾಯ್ತು. ಯಾತಕ್ಕಾಗಿ ನಾಟಕ ನಿಲ್ಲಿಸಬೇಕು ಎಂದು ಯಾರು ಕೇಳಲಿಲ್ಲ. ನಾವ್ಯಾಕೆ ನಾಟಕ ನಿಲ್ಲಿಸಬೇಕು ಎಂದು ಯಾರು ಕೇಳಿಲ್ಲ. ನಾವ್ಯಾಕೆ ನಾಟಕ ಮುಂದುವರಿಸಬಾರದೆಂದು ಪಾತ್ರಧಾರಿಗಳೂ ಕೇಳಿಲ್ಲ ಎಂದಾರೆ ಈ ನಾಡಿಗೆ ಕೇಡುಗಾಲ ವಕ್ಕರಿಸಿದೆ. ಕೇಡುಗಾಲ ಅಂದರೆ ಪುಸ್ತಕವನ್ನ ಓದದೆ ನಿಷೇಧಿಸುವುದು, ನಾಟಕವನ್ನ ನೋಡದೆ ತಡೆಯುವುದು, ಇಂತಹ ಸರಣಿ ಘಟನೆಗಳು ನಡೆಯುವುದೇ ಕೇಡುಗಾಲವಂತಲ್ಲಾ, ಥೂತ್ತೇರಿ.

******

ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಬೃಹಸ್ಪತಿಗಳು ಪಠ್ಯಕ್ಕೆ ಹಿಂದೂ ಹತ್ಯಾಕಾಂಡ ಸೇರಲಿ ಎಂಬ ಶಿಫಾರಸ್ಸು ಮಾಡಿದ್ದಾರಂತಲ್ಲಾ. ನಿಜಕ್ಕೂ ಇದು ಒಳ್ಳೆಯ ಶಿಫಾರಸ್ಸು. ಹಾಗೆಯೇ ಈ ದೇಶದಲ್ಲಿ ನಡೆದ ದಲಿತ ಹತ್ಯಾಕಾಂಡಗಳು ಸೇರುವುದು ಒಳ್ಳೆಯದು. ಮುಖ್ಯವಾಗಿ ಬೆಲ್ಜಿ ಮತ್ತು ಪಿಪ್ರಾದಲ್ಲಿ ನಡೆದ ದಲಿತ ದಹನ ಸೇರಲೇಬೇಕು. ಏಕೆಂದರೆ ಬೆಲ್ಜಿಯಲ್ಲಿ ದಲಿತರ ಕೇರಿಗೆ ಬೆಂಕಿ ಹಚ್ಚಿದಾಗ ಒಂದು ಮಗು ಗುಡಿಸಲಿನಿಂದ ತಪ್ಪಿಸಿಕೊಂಡು ಓಡಿಬರುತ್ತದೆ. ಬೆಂಕಿ ಹಚ್ಚಿದವನೊಬ್ಬ ಆ ಮಗುವನ್ನು ಹಿಡಿದು ಮತ್ತೆ ಬೆಂಕಿಗೆ ಎಸೆಯುತ್ತಾನೆ. ನಮ್ಮ ನಾಡಿನಲ್ಲೇ ಜನತಾದಳ ಅಧಿಕಾರದಲ್ಲಿದ್ದಾಗ ಕಂಬಾಲಪಲ್ಲಿಯಲ್ಲಿ ದಲಿತರ ಗುಡಿಸಲಿಗೆ ಬೆಂಕಿಹಚ್ಚಿ ಅವರನ್ನ ಬೇಯಿಸಲಾಯ್ತು. ದಲಿತರನ್ನ ಸುಟ್ಟ ವಾಸನೆ ಮುಗಿಲಿಗೆಲ್ಲಾ ಹರಡಿತ್ತು. ಆದರೆ ಸಾಕ್ಷ್ಯಾಧಾರದ ಕೊರತೆಯಿಂದ ನ್ಯಾಯಾಲಯ ಅಪರಾಧಿಗಳನ್ನ ಖುಲಾಸೆ ಮಾಡಿತು. ಪಠ್ಯಪುಸ್ತಕಗಳಲ್ಲಿ ತಾರತಮ್ಯ ಇರಬಾರದು. ಅದರಲ್ಲಿ ಗೋಧ್ರಾ ರೈಲಿನ ಅಗ್ನಿಯೂ ಇರಬೇಕು. ಗುಜರಾತಿನ ನರಮೇಧವೂ ಇರಬೇಕು. ಪ್ರಧಾನವಾಗಿ ಅಸ್ಪೃಶ್ಯತೆ ಕಾರಣಕ್ಕೆ ಹಿಂದೂಗಳು ನಾವೆಲ್ಲಾ ಒಂದೇ ಎನ್ನುತ್ತ ಹಿಂದೂಗಳನ್ನೆ ಕೊಂದಿರುವ ಇತಿಹಾಸದ ಸೇರ್ಪಡೆ ಇರಲೇಬೇಕು. ಮುಖ್ಯವಾಗಿ ಜಲಿಯನ್‌ವಾಲಾಬಾಗ್ ಹತ್ಯಾಕಾಂಡ, ಕಿತ್ತೂರ ಚೆನ್ನಮ್ಮನನ್ನ ಸಾಯಿಸಿದ್ದು, ಸಂಗೊಳ್ಳಿರಾಯಣ್ಣನನ್ನ ನೇತುಹಾಕಿದ್ದೆಲ್ಲಾ ಅಲ್ಲದೆ ಇತ್ತೀಚಿನ ಮುಸ್ಲಿಂ ಮತ್ತು ದಲಿತರ ಹತ್ಯಾಕಾಂಡಗಳು ಇರಲೇಬೇಕಾಗುತ್ತದೆ ಎಂದು ಇತಿಹಾಸ ತಜ್ಞರು ತಮ್ಮ ಹತಾರ ತೆಗೆಯತೊಡಗಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...