Homeಅಂಕಣಗಳುಪ್ರತಾಪ ಸಿಮ್ಮ ’ಆರೆಸೆಸ್ ಆಳ ಮತ್ತು ಅಗಲ’ ಓದಿದ್ರಾ?

ಪ್ರತಾಪ ಸಿಮ್ಮ ’ಆರೆಸೆಸ್ ಆಳ ಮತ್ತು ಅಗಲ’ ಓದಿದ್ರಾ?

- Advertisement -
- Advertisement -

ದೇವನೂರ ಮಹದೇವರು ಸದ್ಯದ ಸರಕಾರ ನಡೆಸಿದ ಪಠ್ಯ ಪರಿಷ್ಕರಣೆ ಹಗರಣದ ಹಿನ್ನೆಲೆಯಲ್ಲಿ ’ನನ್ನ ಕಥನದ ಭಾಗವನ್ನು ಪಠ್ಯದಲ್ಲಿ ಸೇರಿಸದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ, ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಸಜ್ಜನನಿಗೆ ಬಂದ ಸಿಟ್ಟನ್ನು ಗ್ರಹಿಸಿದ ಉಳಿದ ಲೇಖಕರು ತಮ್ಮ ಕಥೆ-ಲೇಖನ-ಪದ್ಯಗಳನ್ನು ಪಠ್ಯದಿಂದ ಕೈಬಿಡಿ ಎಂಬ ಹೇಳಿಕೆ ಕೊಟ್ಟರು. ಇದರಿಂದ ಬೆಚ್ಚಿದ ಆರೆಸ್ಸೆಸ್ಸಿಗರು ದೇವನೂರರ ಮೇಲೆಯೇ ದಾಳಿ ಮಾಡಿದರು. ಅದರಲ್ಲಿ ಮುಖ್ಯವಾಗಿ ಪ್ರತಾಪ ಸಿಮ್ಮ, ’ದೇವನೂರರು ಕತೆ ಲೇಖನ ಬರೆದು ಹದಿನೈದು ವರ್ಷಗಳಾಗಿವೆ’, ಅಂದರೆ ಅವರು ಒಂದು ರೀತಿ ನಿವೃತ್ತ ಲೇಖಕರು ಎಂಬಂತೆ ಮಾತನಾಡಿದರು. ಅಲ್ಲಿಗೆ ಪ್ರತಾಪ ಸಿಮ್ಮ ದೇವನೂರನ್ನ ಓದಿಕೊಂಡಿದ್ದಾರೆ ಎಂದಾಯ್ತು. ಹದಿನೈದು ವರ್ಷದಿಂದ ಏನನ್ನೂ ಬರೆದಿಲ್ಲ ಎಂದು ದೂರಿದ ಪ್ರತಾಪ ಸಿಮ್ಮಗೆ ದೇವನೂರರು “ಆರೆಸೆಸ್ಸ್ ಆಳ ಮತ್ತು ಅಗಲ” ಬರೆದು ಮುಖಕ್ಕೆ ಹಿಡಿದಿದ್ದಾರೆ. ಈಗ ಸಿಮ್ಮ ಅದನ್ನ ಓದಿ ತಮ್ಮ ಬೌದ್ಧಿಕ ದಾರಿದ್ರ್ಯವನ್ನ ನೀಗಿಕೊಳ್ಳಬಹುದು. ಸಾಮಾನ್ಯವಾಗಿ ಶ್ರೇಷ್ಠ ಪತ್ರಕರ್ತನ ಗುಣ ಯಾವುದೆಂದರೆ ಆತ ಪೂರ್ವಗ್ರಹವಿಲ್ಲದವನಾಗಿರುತ್ತಾನೆ. ಸತ್ಯ ಸಂಗತಿಯ ಪ್ರತಿಪಾದನೆಯೇ ಆತನ ಗುರಿಯಾಗಿರಬೇಕು. ಅದಕ್ಕಾಗಿ ಆತ ಯಾವ ತ್ಯಾಗಕ್ಕಾದರೂ ಸಿದ್ಧನಾಗಿರುತ್ತಾನೆ. ಹೊಟ್ಟೆಪಾಡಿಗೆ ಏನನ್ನಾದ್ರೂ ಮಾಡಲು ಅಥವಾ ಯಾರನ್ನಾದರೂ ದೂಶಿಸಿ ಬಲಿಕೊಡಲು ತಯಾರಿರುವುದಿಲ್ಲ. ಅಂತ ಸಂದರ್ಭ ಬಂದರೆ ವೃತ್ತಿಯ ಘನತೆಗಾಗಿ ಹಿಂದೆ ಸರಿಯುತ್ತಾನೆ ಬಂಢ ಬಾಳನ್ನು ಬದುಕುವುದಿಲ್ಲವಂತಲ್ಲಾ, ಥೂತ್ತೇರಿ.

*****

ಈ ಪ್ರತಾಪ ಸಿಮ್ಮನ್ನ ಸೃಷ್ಟಿ ಮಾಡಿದ್ದು ದೇವೇಗೌಡರಂತಲ್ಲಾ ನಿಜವೆ? ಆಗ ದೇವೇಗೌಡರು ಸಿದ್ದರಾಮಯ್ಯನನ್ನ ಟೀಕಿಸಿದರೆ ಅದಕ್ಕೆ ಉತ್ತರ ಕೊಡುತ್ತಿದ್ದವರು ವಿಶ್ವನಾಥ. ಗೌಡರು ಸಿದ್ದು ಟೀಕಿಸಿದರೆ ವಿಶ್ವನಾಥ ಕೊಡುವ ಉತ್ತರದಿಂದ ಕೆರಳುತ್ತಿದ್ದ ಗೌಡರು ವಿಶ್ವನಾಥರ ಹುಟ್ಟಡಗಿಸಲು ತೀರ್ಮಾನಿಸಿದರಂತಲ್ಲಾ. ಆಗ ಲೋಕಸಭೆ ಚುನಾವಣೆ ಬಂದೇಬಿಟ್ಟಿತು. ಆರೆಸೆಸ್ಸಿಗರೆಲ್ಲಾ ಸೇರಿ ಪ್ರತಾಪ ಸಿಮ್ಮನ್ನ ಲೋಕಸಭೆ ಕ್ಯಾಂಡೇಟ್ ಮಾಡಿದರು. ದೇವೇಗೌಡರು ಪ್ರಬಲ ಅಭ್ಯರ್ಥಿ ಹಾಕಿದರೆ ಸಿಮ್ಮ ಎಗರಿ ಹೋಗುತ್ತಿದ್ದರು. ಆದರೆ ವಿಶ್ವನಾಥ್ ತೆಗೆಯುವ ಸಂಕಲ್ಪ ಮಾಡಿದ್ದ ಗೌಡರು ಠೇವಣಿ ಉಳಿಸಿಕೊಳ್ಳಲು ಹೋರಾಡುವಂತಹ ವ್ಯಕ್ತಿಯನ್ನ ಕ್ಯಾಂಡಿಡೇಟ್ ಮಾಡಿದರು. ಸಹಜವಾಗಿ ದಳದ ಓಟು ಬಿಜೆಪಿ ಪಾಲಾಗಿ ಅರ್ಧರಾತ್ರಿಯಲ್ಲಿ ನರಸಿಮ್ಮ ಕಾಣಿಸಿಕೊಂಡಂತೆ ಪ್ರತಾಪ ಸಿಮ್ಮನ ಉದ್ಭವವಾಯ್ತಲ್ಲಾ. ದೇವೇಗೌಡರ ಪಾಪಪ್ರಜ್ಞೆ ಕೆಲಸ ಮಾಡಿದ್ದರಿಂದ ಮುಂದೆ ವಿಶ್ವನಾಥರನ್ನ
ಪಾರ್ಟಿಯ ಪ್ರೆಸಿಡೆಂಟ್ ಮಾಡಿದರು. ಅಲ್ಲೂ ನಿಲ್ಲದ ವಿಶ್ವನಾಥ ಬಿಜೆಪಿಯಲ್ಲಿದ್ದರೂ ಆತ್ಮಸಾಕ್ಷಿಯಂತೆ ಮಾತನಾಡುತ್ತಿದ್ದಾರೆ. ಪಾಪ ಸಿದ್ದರಾಮಯ್ಯರಲ್ಲಿ ಉಪಕಾರ ಸ್ಮರಣೆಯಿದ್ದರೆ ವಿಶ್ವನಾಥರನ್ನ ಕೈ ಹಿಡಿದಿದ್ದರೆ ಅವರಿಗೆ ಈ ಸ್ಥಿತಿ ಬರುತ್ತಿರಲಿಲ್ಲ. ಸದ್ಯ ವಿಶ್ವನಾಥ ಸಿಮ್ಮನಂತಾಗಿಲ್ಲ. ಈಗಲೂ ಗೌಡರು ಮೈಸೂರಿನ ವಿಷಯದಲ್ಲಿ ಮನಸು ಮಾಡಿದರೆ, ಈ ಪೇಪರ್ ಸಿಮ್ಮನನ್ನ ಆರೆಸ್ಸೆಸ್ ಬೈಠಕ್‌ಗೆ ಸೀಮಿತಗೊಳಿಸಬಹುದಂತಲ್ಲಾ, ಥೂತ್ತೇರಿ.

******

ದೇವೇಗೌಡರ ದಳದ ವಿಷಯದಲ್ಲಿ ಜ್ಞಾನೋದಯವಾಗಿರುವ ಕಾಂಗೈ ಪಡೆ ಗೌಡರನ್ನ ಟೀಕಿಸದಂತೆ ಪಿಸುಮಾತಿನ ಚರ್ಚೆ ಮಾಡಿದರಂತಲ್ಲಾ. ಹಾಗೆ ನೋಡಿದರೆ ದೇವೇಗೌಡರು ಕಮ್ಯುನಿಟಿ ನಾಯಕರು, ಅವರಾದ ಮೇಲೆ ಅವರ ಮಗ ಜನಾಂಗದ ಲೀಡರು. ಜನಾಂಗದ ಲೀಡರಾಗಲು ಡಿ.ಕೆ ಶಿವಕುಮಾರ್ ಇನ್ನ ಕಷ್ಟಪಡಬೇಕಿದೆ, ಹಾಗಾಗಿ ಗೌಡರನ್ನ ಟೀಕಿಸುವ ಸಿದ್ದು ಪಡೆಯ ನಡವಳಿಕೆ ಅವರಿಗೂ ಇಷ್ಟವಿಲ್ಲ. ಮುಂದಿನ ರಾಜಾಕಾರಣ ಹೇಗೋ ಏನೋ ಸಿದ್ದರಾಮಯ್ಯ ನನ್ನ ಬದಿಗೆ ಸರಿಸಿ ಬೇರೆಯವರನ್ನ ಮುಖ್ಯಮಂತ್ರಿ ಮಾಡಲು ಮುಂದಾದರೆ, ನಮ್ಮ ಸಹಕಾರ ಇರುತ್ತದೆ ಎಂದು ಗೌಡರೇನಾದರೂ ಹೇಳುವ ಪ್ರಮೇಯ ಬಂದರೆ, ಅವರ ಮನೆ ಬಾಗಿಲಿಗೆ ಹೋಗಿ ಬೆಲ್ಲು ಒತ್ತುವ ಸ್ಥಿತಿ ಡಿ.ಕೆ.ಶಿಗೆ ಒದಗಿಬರಬಹುದು. ಇದೆಲ್ಲವನ್ನ ಗ್ರಹಿಸಿರುವ ಕಾಂಗ್ರೆಸ್ ಗೌಡರ ಕುಟುಂಬದ ಟೀಕೆಗೆ ಕಡಿವಾಣ ಹಾಕಿದೆಯಂತಲ್ಲಾ. ಸಾಮಾನ್ಯ ಮನುಷ್ಯರ ಮನಸ್ಸನ್ನು ಗ್ರಹಿಸಿದ್ದಾರೆ ಅವರು ತಮ್ಮ ಜನಾಂಗದ ನಾಯಕನನ್ನ ಇಷ್ಟಪಡುತ್ತಾರೆ. ನಾಯಕನ ಬಗೆಗಿನ ಟೀಕೆಯನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ. ಆದ್ದರಿಂದ ಸಿದ್ದರಾಮಯ್ಯನವರ ಟೀಕೆ ಜನಾಂಗದ ಲೀಡರುಗಳಿಗೆ ತಲುಪುವುದರ ಬದಲು ಜನಾಂಗವನ್ನೇ ತಲುಪಿದರೆ ಅದು ಡಿ.ಕೆ.ಶಿಗೆ ಕೊಡುವ ಹೊಡೆತವಾಗುತ್ತದಂತಲ್ಲಾ. ಇಂತಹ ಸಾಮಾನ್ಯ ತಿಳಿವಳಿಕೆ ಕಾಂಗ್ರೆಸ್ಸಿಗರಲ್ಲಿ ಮೂಡದಿದ್ದರೆ ತಮ್ಮ ವಿರೋಧಿಗಳನ್ನು ಸೋಲಿಸಲು ಕುಮಾರಣ್ಣ ಹಿಂದಿನಂತೆ ಬಿಜೆಪಿಗಳ ಜೊತೆಯಲ್ಲೂ ಕೈ ಜೋಡಿಸುವ ಅಪಾಯವಿದೆಯಂತಲ್ಲಾ, ಥೂತ್ತೇರಿ.

******

ಇದುವರೆಗೂ ಕರ್ನಾಟಕದಲ್ಲಿ ಬಿಜೆಪಿಗಳಿಂದ ನಡೆದ ಯಾವುದೇ ಪ್ರಮಾದಗಳಿಗೂ ಬಿಜೆಪಿಗಳು ಕ್ಷಮೆಯಾಚಿಸಿಲ್ಲ. ತಮ್ಮ ಪಾರ್ಟಿ ಜನರ ಮೂರ್ಖ ಹೇಳಿಕೆಗಳನ್ನ ಖಂಡಿಸಿಲ್ಲವಂತಲ್ಲಾ. ಶಿವಮೊಗ್ಗ ಜಿಲ್ಲೆಯ ಆನವಟ್ಟಿಯಲ್ಲಿ ನಡೆದ ’ಜೊತೆಗಿರುವನು ಚಂದಿರ’ ನಾಟಕವನ್ನ ಮಧ್ಯದಲ್ಲೇ ತಡೆದು ಭರತ ಮಾತೆಯ ಘೋಷಣೆ ಕೂಗಿದ ಕೃತ್ಯವನ್ನ ನಾಡಿನ ನಾಟಕಪ್ರಿಯ ಜನಗಳು ಒಕ್ಕೊರಲಿಂದ ಖಂಡಿಸಿದರೂ ಬಿಜೆಪಿಗಳು ಬಾಯಿಬಿಟ್ಟಿಲ್ಲ. ಅಷ್ಟಕ್ಕೂ ಈ ನಾಟಕ ಇದಕ್ಕೂ ಮೊದಲೆ ಶಿವಮೊಗ್ಗದಲ್ಲಿ ಪ್ರದರ್ಶನಗೊಂಡಿತ್ತು. ಆದರೆ ಆನವಟ್ಟಿಯ ಕೆಲ ಅಜ್ಞಾನಿಗಳು ನಾಟಕದೊಳಗಿನ ತಿರುಳನ್ನು ಗ್ರಹಿಸದೆ ಹೋದರಂತಲ್ಲಾ. ಪ್ರೇಕ್ಷಕರು ಮತ್ತು ಪಾತ್ರಧಾರಿಗಳು ಭಾವನಾತ್ಮಕವಾಗಿ ಸ್ಪಂದಿಸಿ ಆರ್ದ್ರತೆಯಿಂದ ಕಂಬನಿ ಮಿಡಿಯುವ ಸಮಯಕ್ಕೆ ಮೂವರು ಬಂದು “ನಾಟಕ ನಿಂತಿದೆ ಮನೆಗೆ ಹೋಗಿ” ಎಂದಕೂಡಲೇ ನೂರಾರು ಜನ ಪ್ರೇಕ್ಷಕರು ಸುಮ್ಮನೆ ಎದ್ದು ಹೋಗಿದ್ದಾರೆಂದರೆ ಈ ಸಮಾಜಕ್ಕೆ ಯಾವುದೋ ಅರ್ಥೈಸಲಾಗದ ಗರಬಡಿದಿದೆ. ಕೇವಲ ಮೂರು ಜನ ನೂರಾರು ಜನ ಪ್ರೇಕ್ಷಕರನ್ನ ಓಡಿಸುತ್ತಾರೆಂದರೆ ಖಂಡುಗ ಹಾಲನ್ನು ಹಾಳುಮಾಡುವ ಶಕ್ತಿ ಒಂದು ತೊಟ್ಟು ವಿಷಕ್ಕಿದೆ ಎಂದಾಯ್ತು. ಯಾತಕ್ಕಾಗಿ ನಾಟಕ ನಿಲ್ಲಿಸಬೇಕು ಎಂದು ಯಾರು ಕೇಳಲಿಲ್ಲ. ನಾವ್ಯಾಕೆ ನಾಟಕ ನಿಲ್ಲಿಸಬೇಕು ಎಂದು ಯಾರು ಕೇಳಿಲ್ಲ. ನಾವ್ಯಾಕೆ ನಾಟಕ ಮುಂದುವರಿಸಬಾರದೆಂದು ಪಾತ್ರಧಾರಿಗಳೂ ಕೇಳಿಲ್ಲ ಎಂದಾರೆ ಈ ನಾಡಿಗೆ ಕೇಡುಗಾಲ ವಕ್ಕರಿಸಿದೆ. ಕೇಡುಗಾಲ ಅಂದರೆ ಪುಸ್ತಕವನ್ನ ಓದದೆ ನಿಷೇಧಿಸುವುದು, ನಾಟಕವನ್ನ ನೋಡದೆ ತಡೆಯುವುದು, ಇಂತಹ ಸರಣಿ ಘಟನೆಗಳು ನಡೆಯುವುದೇ ಕೇಡುಗಾಲವಂತಲ್ಲಾ, ಥೂತ್ತೇರಿ.

******

ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಬೃಹಸ್ಪತಿಗಳು ಪಠ್ಯಕ್ಕೆ ಹಿಂದೂ ಹತ್ಯಾಕಾಂಡ ಸೇರಲಿ ಎಂಬ ಶಿಫಾರಸ್ಸು ಮಾಡಿದ್ದಾರಂತಲ್ಲಾ. ನಿಜಕ್ಕೂ ಇದು ಒಳ್ಳೆಯ ಶಿಫಾರಸ್ಸು. ಹಾಗೆಯೇ ಈ ದೇಶದಲ್ಲಿ ನಡೆದ ದಲಿತ ಹತ್ಯಾಕಾಂಡಗಳು ಸೇರುವುದು ಒಳ್ಳೆಯದು. ಮುಖ್ಯವಾಗಿ ಬೆಲ್ಜಿ ಮತ್ತು ಪಿಪ್ರಾದಲ್ಲಿ ನಡೆದ ದಲಿತ ದಹನ ಸೇರಲೇಬೇಕು. ಏಕೆಂದರೆ ಬೆಲ್ಜಿಯಲ್ಲಿ ದಲಿತರ ಕೇರಿಗೆ ಬೆಂಕಿ ಹಚ್ಚಿದಾಗ ಒಂದು ಮಗು ಗುಡಿಸಲಿನಿಂದ ತಪ್ಪಿಸಿಕೊಂಡು ಓಡಿಬರುತ್ತದೆ. ಬೆಂಕಿ ಹಚ್ಚಿದವನೊಬ್ಬ ಆ ಮಗುವನ್ನು ಹಿಡಿದು ಮತ್ತೆ ಬೆಂಕಿಗೆ ಎಸೆಯುತ್ತಾನೆ. ನಮ್ಮ ನಾಡಿನಲ್ಲೇ ಜನತಾದಳ ಅಧಿಕಾರದಲ್ಲಿದ್ದಾಗ ಕಂಬಾಲಪಲ್ಲಿಯಲ್ಲಿ ದಲಿತರ ಗುಡಿಸಲಿಗೆ ಬೆಂಕಿಹಚ್ಚಿ ಅವರನ್ನ ಬೇಯಿಸಲಾಯ್ತು. ದಲಿತರನ್ನ ಸುಟ್ಟ ವಾಸನೆ ಮುಗಿಲಿಗೆಲ್ಲಾ ಹರಡಿತ್ತು. ಆದರೆ ಸಾಕ್ಷ್ಯಾಧಾರದ ಕೊರತೆಯಿಂದ ನ್ಯಾಯಾಲಯ ಅಪರಾಧಿಗಳನ್ನ ಖುಲಾಸೆ ಮಾಡಿತು. ಪಠ್ಯಪುಸ್ತಕಗಳಲ್ಲಿ ತಾರತಮ್ಯ ಇರಬಾರದು. ಅದರಲ್ಲಿ ಗೋಧ್ರಾ ರೈಲಿನ ಅಗ್ನಿಯೂ ಇರಬೇಕು. ಗುಜರಾತಿನ ನರಮೇಧವೂ ಇರಬೇಕು. ಪ್ರಧಾನವಾಗಿ ಅಸ್ಪೃಶ್ಯತೆ ಕಾರಣಕ್ಕೆ ಹಿಂದೂಗಳು ನಾವೆಲ್ಲಾ ಒಂದೇ ಎನ್ನುತ್ತ ಹಿಂದೂಗಳನ್ನೆ ಕೊಂದಿರುವ ಇತಿಹಾಸದ ಸೇರ್ಪಡೆ ಇರಲೇಬೇಕು. ಮುಖ್ಯವಾಗಿ ಜಲಿಯನ್‌ವಾಲಾಬಾಗ್ ಹತ್ಯಾಕಾಂಡ, ಕಿತ್ತೂರ ಚೆನ್ನಮ್ಮನನ್ನ ಸಾಯಿಸಿದ್ದು, ಸಂಗೊಳ್ಳಿರಾಯಣ್ಣನನ್ನ ನೇತುಹಾಕಿದ್ದೆಲ್ಲಾ ಅಲ್ಲದೆ ಇತ್ತೀಚಿನ ಮುಸ್ಲಿಂ ಮತ್ತು ದಲಿತರ ಹತ್ಯಾಕಾಂಡಗಳು ಇರಲೇಬೇಕಾಗುತ್ತದೆ ಎಂದು ಇತಿಹಾಸ ತಜ್ಞರು ತಮ್ಮ ಹತಾರ ತೆಗೆಯತೊಡಗಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...