Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...