Homeಮುಖಪುಟರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

ರಂಗಕಲೆಯನ್ನು ಕಲಿಯಲು ಆಸಕ್ತರಿರುವ ಪುಟಾಣಿಗಳಿಗೆ ಸಮ್ಮತ ರಂಗಸಂಸ್ಥೆಯಿಂದ ವಾರಾಂತ್ಯ ತರಗತಿಗಳು

- Advertisement -
- Advertisement -

ರಂಗಭೂಮಿ ಕಲಿಕೆ ವಿವಿಧ ಪಾತ್ರಗಳ ಮೂಲಕ ತಮ್ಮನ್ನು ತಾವು ಕಂಡುಕೊಳ್ಳಲು ಉತ್ತಮವಾದಂತಹ ಕಲೆಯಾಗಿದೆ. ಇದು ಬಾಲ್ಯದಿಂದಲೇ ಮಕ್ಕಳಿಗೆ ರಂಗಭೂಮಿಯನ್ನು ಕಲಿಸುವುದರಿಂದ ಅವರಿಗೆ ಮುಂದೆ ಜೀವನದಲ್ಲಿ ಸಮಾಜದಲ್ಲಿ ಧೈರ್ಯವಾಗಿ ಬದುಕುವುದನ್ನು ಕಲಿಸುತ್ತದೆ. ಹಾಗಾಗಿ ಮಕ್ಕಳ ರಂಗಭೂಮಿಯ ಅವಶ್ಯಕತೆ ಇಂದೆಂದಿಗಿಂತಲೂ ಹೆಚ್ಚಿದೆ. ಕಲುಷಿತ ಗೊಂಡ ಮನಸ್ಸುಗಳನ್ನು ಪ್ರೀತಿ, ವಿಶ್ವಾಸ, ನಂಬಿಕೆಯ ಮೂಲಕ ಸರಿಪಡಿಸುವ ಚಿಕಿತ್ಸಕ ಗುಣವನ್ನು ರಂಗಭೂಮಿ ಹೊಂದಿದೆ. ಸಾಕಷ್ಟು ಜನ ರಂಗಕರ್ಮಿಗಳು ಮಕ್ಕಳ ರಂಗಭೂಮಿಯನ್ನು ವಿಶೇಷವಾಗಿ ಕೆಲಸ ಮಾಡುತ್ತಿದ್ದಾರೆ ತುಮಕೂರಿನಲ್ಲೂ ಇಂತಹ ಪ್ರಯೋಗವೊಂದು ನಡೆಯುತ್ತಿದೆ.
ಈ ಸೆಲೆಬ್ರೆಟಿ ಯುಗದಲ್ಲಿ ತಮ್ಮ ಮಕ್ಕಳು ಕಲೆಯ ಮೂಲಕ ಸಮಾಜದಲ್ಲಿ ಹೆಚ್ಚು ಗುರ್ತಿಸಿಕೊಳ್ಳಬೇಕೆಂಬ ಆಸೆ ಪೋಷಕರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಪ್ರೇರಕವಾಗಿ ರಿಯಾಲಿಟಿ ಶೋಗಳು ಪೋಷಕರನ್ನು ಪ್ರೇರೇಪಿಸುತ್ತಿವೆ. ಅದಕ್ಕಾಗಿ ಸಾಕಷ್ಟು ಜನ ನಾಯಿಕೊಡೆಗಳಂತೆ ಹೆಚ್ಚುತ್ತಿರುವ ಹವ್ಯಾಸಿ ರಂಗಶಿಬಿರಗಳು, ಅಭಿನಯ ಶಿಬಿರಗಳಿಗೆ ಸಾಕಷ್ಟು ವ್ಯಯ ಮಾಡುತ್ತಿದ್ದಾರೆ. ಇದು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂಧರ್ಭದಲ್ಲಿ ವಿಶೇಷವಾಗಿ ಮಕ್ಕಳ ಜೊತೆ ಕೆಲಸಮಾಡುವ ಮತ್ತು ರಂಗಭೂಮಿಯನ್ನು ಒಂದು ಕೋರ್ಸ್ ಆಗಿ ಕಲಿತು ಅಧ್ಯಯನ ಮಾಡಿದ ಮತ್ತು ಸಾಕಷ್ಟು ಶಿಬಿರಗಳನ್ನು ಮಾಡಿ ನೈಜರಂಗಭೂಮಿಯ ಪಾಠಗಳನ್ನು ಕಲಿಸುವ ಶಿಬಿರಗಳು ಕಡಿಮೆಯಾಗಿವೆ. ಇದೇ ವೇಳೆ ಕೆಲವು ಕಡೆ ಮಾತ್ರ ನಿಜವಾಗಲೂ ರಂಗಭೂಮಿ ಮತ್ತು ನಟನೆಯನ್ನು ಕಲಿಸುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹದ್ದೆ ಪ್ರಯತ್ನವನ್ನು ತುಮಕೂರಿನ ಸಮ್ಮತ ರಂಗ ಸಂಸ್ಥೆ ಪ್ರಯತ್ನಪಡುತ್ತಿದೆ. ತುಮಕೂರಿನಲ್ಲಿ ಸಾಕಷ್ಟು ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಮಕ್ಕಳ ರಂಗಭೂಮಿಯ ಬಗ್ಗೆ ಬೇಸಿಗೆ ಶಿಬಿರವಲ್ಲದೇ ಈ ರೀತಿ ಅದಿಕ್ಕೆ ವಿಶೇಷ ಶಾಲೆಯ ರೀತಿಯ ಪ್ರಯತ್ನ ನಡೆದಿಲ್ಲ . ಸಮ್ಮತ ಸಂಸ್ಥೆ ಈಗ ಮಕ್ಕಳಿಗಾಗಿ ವಾರಾಂತ್ಯ ರಂಗ ಶಾಲೆಯನ್ನು ತೆರೆದಿದ್ದಾರೆ.
ಶಾಲಾ ರಜೆಯ ಸಂಧರ್ಭದಲ್ಲಿ ಶಿಬಿರಗಳನ್ನು ನಡೆಸುತ್ತಾ, ರಂಗ ಚಟುವಟಿಕೆಗಳನ್ನು ನಡೆಸುತ್ತಾ ಬಂದಿರುವ ರಂಗಭೂಮಿ ಹಿನ್ನಲೆಯ ಚೇತನ್ ಮತ್ತು ಸುನೀಲ ಯುವದಂಪತಿಗಳು ತಮ್ಮ ಕ್ರಿಯಾಶೀಲ ಯುವತಂಡದೊಂದಿಗೆ ವಾರಂತ್ಯದ ರಜೆಯ ಸಮಯದಲ್ಲಿ ರಂಗಭೂಮಿಯ ಬಗ್ಗೆ ಮಕ್ಕಳಿಗೆ ಕಲಿಸುವ ಒಂದು ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ನಟನೆ, ನಿರ್ಧೇಶನ, ಮೇಕಪ್ ಮುಂತಾದ ವಿಭಾಗಗಳನ್ನು ಮಕ್ಕಳಿಗೆ ಪರಿಚಯಿಸಲಿದೆ. ಮಗುವಿನ ಕಲ್ಪನಾಶಕ್ತಿ, ದೇಹಭಾಷೆ, ವಾಚಿಕದ ಮೇಲೆ ನಿರಂತರವಾಗಿ ಅಭ್ಯಾಸ ಮಾಡಿಸಲಿದ್ದಾರೆ. ಮಕ್ಕಳಿಗೆ ಆಸಕ್ತಿಯಿಂದ ಕಲಿಯಲು ರಂಗಾಟಗಳ ಮುಖೇನ ಕಲಿಸಲಿದ್ದಾರೆ. ಮಕ್ಕಳ ಸಿನೆಮಾ ತೋರಿಸುವುದು, ಜನಪದ ಕಲೆಗಳ ಕಲಿಕೆಯ ಮೂಲಕ ಸ್ಥಳೀಯ ಕಲೆಗಳ ಪರಿಚಯ ಈ ರೀತಿಯ ಯೋಜನೆಗಳನ್ನು ಸಂಸ್ಥೆಯ ನಿರ್ದೇಶಕರಾದ ಚೇತನ್ ಮತ್ತು ಸುನೀಲ ಅವರು ರೂಪಿಸಿದ್ದಾರೆ. ಈ ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ. ಕೇವಲ 25 ರಿಂದ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಬೆಳಿಗ್ಗೆ 9 ರಿಂದ 12ರವೆರೆಗೆ ತರಗತಿಗಳು ನಡೆಯಲಿವೆ.
ಈ ಸಮ್ಮತ ರಂಗಸಂಸ್ಥೆಯ ಆ ವಾರಂತ್ಯಾ ಶಾಲೆಯ ಹೊಸ ಪ್ರಯತ್ನಕ್ಕೆ ಹರಿಕಥಾ ವಿದ್ವಾನ್ ಹಾಗೂ ಕಲಾವಿದರಾದ ಲಕ್ಷ್ಮಣ್‍ದಾಸ್, ಕ.ಸಾ.ಪ ಜಿಲ್ಲಾಧ್ಯಕ್ಷರಾದ ಬಾ.ಹಾ.ರಮಾಕುಮಾರಿ, ರಂಗಸಂಘಟಕರಾದ ಉಗಮಶ್ರೀನಿವಾಸ್, ರಂಗಕರ್ಮಿಗಳಾದ ಎಚ್.ಎಂ.ರಂಗಯ್ಯ, ಸಿಧ್ದಾರ್ಥ ಕಾಲೇಜಿನ ಪ್ರಾಂಶುಪಾ¯ರಾದ ಕೆ.ಸಿ.ಕುಮಾರ್ ಬೆಂಬಲನೀಡಿ ಉದ್ಘಾಟಿಸಿದ್ದಾರೆ. ರಂಗಕರ್ಮಿಗಳಾದ ನಟರಾಜ್ ಹೊನ್ನವಳ್ಳಿ, ಮಂಜು ಬಡಿಗೇರ್, ನೀನಾಸಂ ಚಂದ್ರು, ರವಿಶಂಕರ್, ಶೋಧನ್ ಬಸ್ರೂರು, ಸಂಧ್ಯಾ ಅಲ್ಲದೇ ಹಲವು ಮಕ್ಕಳ ರಂಗಭೂಮಿಯ ಪರಿಣಿತರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನಮಾಹಿತಿಗಾಗಿ 9901848170, 8105515256 ಸಂಖ್ಯೆಗೆ ಕರೆಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...