Homeರಾಜಕೀಯಬಿಜೆಪಿಯ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಆಯ್ಕೆ

ಬಿಜೆಪಿಯ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಆಯ್ಕೆ

ಬಂಗಾಳದಲ್ಲಿ ಬಿಜೆಪಿ ಪರವಾಗಿ ಮುಖ್ಯಮಂತ್ರಿ ಮಮತಾರೊಂದಿಗೆ ಘರ್ಷಣೆ ನಡೆಸಿದ್ದಕ್ಕಾಗಿ ಪಕ್ಷವೂ ಅವರಿಗೆ ‘ಬಹುಮಾನ’ ನೀಡಿದೆ ಎಂದು ರಾಜಕೀಯ ವೀಕ್ಷಕರು ಸೂಚಿಸಿದ್ದಾರೆ

- Advertisement -
- Advertisement -

ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರು ಆಯ್ಕೆಯಾಗಿದ್ದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶನಿವಾರ ಘೋಷಿಸಿದ್ದಾರೆ.

“ಎಲ್ಲಾ ಪರಿಗಣನೆಗಳು ಮತ್ತು ಸಮಾಲೋಚನೆಗಳ ನಂತರ, ರೈತರ ಮಗ ಜಗದೀಪ್ ಧಂಖರ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿ ಘೋಷಿಸಲು ನಾವು ನಿರ್ಧರಿಸಿದ್ದೇವೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರು ಧಂಖರ್‌ ಅವರನ್ನು ‘ಜನರ ರಾಜ್ಯಪಾಲ’ ಎಂದು ಬಣ್ಣಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಟ್ ಸಮುದಾಯಕ್ಕೆ ಸೇರಿರುವ ಧಂಖರ್‌ ಅವರ ಆಯ್ಕೆಯೂ ಅವರ ಸಮುದಾಯಕ್ಕೆ ದೊಡ್ಡ ಸಂದೇಶವನ್ನು ನೀಡಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಕೃಷಿ ಕಾನೂನುಗಳ ವಿರುದ್ಧ ರೈತರು ಬೃಹತ್‌ ಪ್ರತಿಭಟನೆಗಳನ್ನು ನಡೆಸಿದ ನಂತರವೂ ಪಶ್ಚಿಮ ಉತ್ತರ ಪ್ರದೇಶದ ಜಾಟ್ ಸಮುದಾಯವು ಬಿಜೆಪಿಯನ್ನು ಬೆಂಬಲಿಸಿತ್ತು.

ಇದನ್ನೂ ಓದಿ: ರಾಜಕೀಯ ವಿರೋಧ ಹಗೆತನವಾಗಿ ಪರಿವರ್ತನೆ; ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ: ಮುಖ್ಯ ನ್ಯಾಯಮೂರ್ತಿ

ಮುಂದಿನ ವರ್ಷ ನಡೆಯಲಿರುವ ರಾಜಸ್ಥಾನ ಚುನಾವಣೆಯಲ್ಲಿ ಜಾಟ್ ಮತದಾರರು ದೊಡ್ಡ ಪಾತ್ರ ವಹಿಸಲಿದ್ದಾರೆ.

ಧಂಖರ್ ಕಳೆದ ಎರಡು ದಶಕಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪರವಾಗಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯೊಂದಿಗೆ ಘರ್ಷಣೆ ನಡೆಸಿದ್ದಕ್ಕಾಗಿ ಪಕ್ಷವೂ ಅವರಿಗೆ ‘ಬಹುಮಾನ’ ನೀಡಿದೆ ಎಂದು ಅನೇಕ ರಾಜಕೀಯ ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಪ್ರಧಾನ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಲವಾರು ಉನ್ನತ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 24 ಹೊಸ ಮಸೂದೆಗಳನ್ನು ಮಂಡಿಸಲಿರುವ ಮೋದಿ ಸರ್ಕಾರ

ಧಂಕರ್ ಅವರಿಗೆ ಸಂವಿಧಾನದ ಬಗ್ಗೆ ‘ಅತ್ಯುತ್ತಮ ಜ್ಞಾನ’ ಇದ್ದು, ಶಾಸಕಾಂಗ ವ್ಯವಹಾರಗಳ ಬಗ್ಗೆಯೂ ಅವರು ಚೆನ್ನಾಗಿ ತಿಳಿದಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

“ಜಗದೀಪ್ ಧಂಖರ್‌ ಅವರು ನಮ್ಮ ಸಂವಿಧಾನದ ಬಗ್ಗೆ ಅತ್ಯುತ್ತಮ ಜ್ಞಾನವನ್ನು ಹೊಂದಿದ್ದಾರೆ. ಅವರು ಶಾಸಕಾಂಗ ವ್ಯವಹಾರಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಅವರು ರಾಜ್ಯಸಭೆಯಲ್ಲಿ ಮಹೋನ್ನತ ಅಧ್ಯಕ್ಷರಾಗುತ್ತಾರೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸದನದ ನಡಾವಳಿಗಳಿಗೆ ಮಾರ್ಗದರ್ಶನ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದು ಮೋದಿ ಹೇಳಿದ್ದಾರೆ.

2017 ರಲ್ಲಿ ಬಿಜೆಪಿಯು ಪಕ್ಷದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಸಂಸದರಾಗಿದ್ದ ಅಂದಿನ ಕ್ಯಾಬಿನೆಟ್ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಿತ್ತು. ಅವರು ಆರಾಮವಾಗಿ ಚುನಾವಣೆಯಲ್ಲಿ ಗೆದ್ದು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ್ದರು. ಅವರ ಪ್ರಸ್ತುತ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ.

2019 ರ ಜುಲೈ ತಿಂಗಳಲ್ಲಿ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ನಂತರ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗಿನ ಅವರು ನಿರಂತರ ಸಂಘರ್ಷ ನಡೆಸುತ್ತಲೇ ಬಂದಿದ್ದಾರೆ. ಅವರು ‘‘ರಾಜ್ಯ ಸರ್ಕಾರವು, ಕೋಮುವಾದಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಮತ್ತು ಮಾಫಿಯಾ ಸಿಂಡಿಕೇಟ್ ಸುಲಿಗೆ ಮಾಡುತ್ತಿದೆ” ಎಂದು ಆರೋಪಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕರು ಧಂಖರ್ ಅವರನ್ನು ‘‘ಕೋಮುವಾದಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ನಾನಕ್ ಚಂದ್ ರತ್ತುರವರ ’ಬಾಬಾ ಸಾಹೇಬರ ಕೊನೆದಿನಗಳು’

ಬಿಜೆಪಿ ನೇತೃತ್ವದ ಎನ್‌ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಗವರ್ನರ್ ಧಂಖರ್ ಅವರನ್ನು ಘೋಷಿಸುತ್ತಿದ್ದಂತೆ, ಆಗಸ್ಟ್ 06 ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ತನ್ನ ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಮತ್ತು ಅಂತಿಮಗೊಳಿಸಲು ಮಮತಾ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಲೋಕಸಭೆ ಮತ್ತು ರಾಜ್ಯಸಭೆ ಸಂಸದರ ಸಭೆಯನ್ನು ಕರೆದಿದ್ದಾರೆ. ಜುಲೈ 21 ರಂದು ಸಂಜೆ 4 ಗಂಟೆಗೆ ಕೋಲ್ಕತ್ತಾದಲ್ಲಿರುವ ಮಮತಾ ಅವರ ನಿವಾಸದಲ್ಲಿ ಈ ಸಭೆ ನಡೆಯಲಿದೆ.

ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...