Homeಚಳವಳಿಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತನನ್ನು ಅರೆಸ್ಟ್‌ ಮಾಡಿದ ಜಾರ್ಖಂಡ್ ಪೊಲೀಸರು!

ಆದಿವಾಸಿಗಳ ಪರವಾಗಿ ಬರೆಯುತ್ತಿದ್ದ ಅವರನ್ನು ಯಾಕೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ಇನ್ನೂ ಕಾರಣ ತಿಳಿಸಿಲ್ಲ

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಪೊಲೀಸರು ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಭಾನುವಾರ ಮಧ್ಯಾಹ್ನ ಬಂಧಿಸಿದ್ದಾರೆ. ಪೊಲೀಸ್ ಪಡೆಗಳು ಮುಂಜಾನೆ ರೂಪೇಶ್ ಕುಮಾರ್ ಸಿಂಗ್ ಅವರ ಮನೆಗೆ ತೆರಳಿ ಮಧ್ಯಾಹ್ನ 1 ಗಂಟೆಯವರೆಗೆ ಮನೆಯನ್ನು ಶೋಧಿಸಿದ್ದರು.

ಪೊಲೀಸರೊಂದಿಗೆ ಬಂಧನ ವಾರಂಟ್ ಇದ್ದರೂ ಮಧ್ಯಾಹ್ನ 1 ಗಂಟೆಯವರೆಗೆ ಅದನ್ನು ತೋರಿಸಲಿಲ್ಲ ಎಂದು ‘ಗೌರಿಲಂಕೇಶ್‌‌ನ್ಯೂಸ್‌’ ವರದಿ ಮಾಡಿದೆ. ಬೆಳಿಗ್ಗೆ 5.30 ಕ್ಕೆ ರೂಪೇಶ್ ಕುಟುಂಬ ಇನ್ನೂ ನಿದ್ದೆಯಲ್ಲಿದ್ದಾಗ ಪೊಲೀಸರು ಮನೆಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಮನೆಯನ್ನು ಮಧ್ಯಾಹ್ನ 1 ಗಂಟೆಯವರೆಗೂ ಪೊಲೀಸರು ಶೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಚ್ ವಾರೆಂಟ್ ಪ್ರಕಾರ, ಸೆರೈಕೆಲಾ-ಖರ್ಸಾನ್ವಾದ ಕಂದ್ರಾ ಪೊಲೀಸ್ ಠಾಣೆಯಿಂದ ಎಂಟು ತಿಂಗಳ ಹಿಂದಿನ ಪ್ರಕರಣ ವಿಚಾರವಾಗಿ ಹುಡುಕಾಟ ನಡೆಸಬೇಕಿತ್ತು. ಮಧ್ಯಾಹ್ನ 1 ಗಂಟೆಗೆ ವಸ್ತುಗಳನ್ನು ವಶಪಡಿಸಿಕೊಳ್ಳುವವರೆಗೆ ಪೊಲೀಸರು ಬಂಧನ ವಾರಂಟ್ ಬಗ್ಗೆ ಮಾಹಿತಿ ನೀಡಿರಲಿಲ್ಲ.

ಪೆಗಾಸಸ್‌ ಪಟ್ಟಿಯಲ್ಲಿದ್ದ ಪತ್ರಕರ್ತ ಜಾರ್ಖಂಡ್ ಪೊಲೀಸರಿಂದ ಅರೆಸ್ಟ್‌‌‌! | ನಾನುಗೌರಿ.ಕಾಂ
ಬಂಧನ

ವಶಪಡಿಸಿಕೊಳ್ಳುವ ಎಲ್ಲಾ ವಸ್ತುಗಳನ್ನು ಸಿದ್ಧಪಡಿಸಿ, ರೂಪೇಶ್ ಕುಮಾರ್ ಸಿಂಗ್ ಅವರನ್ನು ಬಂಧಿಸಿ ಬಂಧನ ವಾರಂಟ್ ತೋರಿಸಿ ನಂತರ ಕರೆದೊಯ್ಯಲಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಬೆಡ್‌ಶೀಟ್‌ಗಳು, ಮೊಬೈಲ್, ಎರಡು ಲ್ಯಾಪ್‌ಟಾಪ್‌ಗಳು ಮತ್ತು ಸೀಲ್ ಮಾಡಿದ ವಾಹನದ ದಾಖಲೆಗಳಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ರೂಪೇಶ್ ಕುಮಾರ್ ಸಿಂಗ್ ಈಗಾಗಲೇ ಸರ್ಕಾರಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಕೇಂದ್ರ ಸರ್ಕಾರ ಅವರನ್ನು ಪೆಗಾಸಸ್ ಪಟ್ಟಿಯಲ್ಲಿ ಇರಿಸಿ, ಅವರ ಫೋನ್ ಅನ್ನು ಅಕ್ರಮವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಆದರೆ ರಾಜ್ಯ ಪೊಲೀಸರು ಅವರನ್ನು ಬಂಧಿಸಿರುವ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಮನೆಯಲ್ಲಿ ಹುಡುಕಾಟ ನಡೆಸುತ್ತಿರುವ ಪೊಲೀಸರು

ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ರೂಪೇಶ್ ಸದಾ ದನಿಯೆತ್ತಿದ್ದಾರೆ. ಅವರು ‘ಭೂಮಿ, ನೀರು ಮತ್ತು ಅರಣ್ಯ ಹಕ್ಕುಗಳು(ಜಲ್, ಜಂಗಲ್ ಮತ್ತು ಜಮೀನ್) ಮತ್ತು ಆದಿವಾಸಿಗಳ ವಿರುದ್ಧದ ಸರ್ಕಾರದ ದೌರ್ಜನ್ಯಗಳ ಬಗ್ಗೆ ನಿರಂತವಾಗಿ ಬರೆಯುತ್ತಿದ್ದರು. ಅವರ ವರದಿಗಳು ವಿವರವಾದ ಪುರಾವೆಗಳನ್ನು ಆಧರಿಸಿ ವರದಿಯಾಗುತ್ತಿದ್ದವು. ಆದಿವಾಸಿ ಹಕ್ಕುಗಳ ಸಂಬಂಧಿತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಲ್ಲಿ ಅನೇಕ ಸಂಸ್ಥೆಗಳಿಗೆ ಈ ವರದಿಗಳು ಸಹಾಯ ಮಾಡಿದ್ದವು.

ಅರೆಸ್ಟ್‌ ವಾರೆಂಟ್

ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಗಿರ್ಡಿಹ್ ಜಿಲ್ಲೆಯಲ್ಲಿ ಸ್ಥಾಪಿಸಲಾದ ಕಾರ್ಖಾನೆಗಳ ಹೊಗೆ ಮತ್ತು ಬೂದಿಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಅವರು ಇತ್ತೀಚೆಗೆ ವರದಿ ಮಾಡಿದ್ದರು. ಈ ವರದಿಯಲ್ಲಿ ಆ ಪ್ರದೇಶದಲ್ಲಿನ ಕಾರ್ಖಾನೆಗಳು ಅಲ್ಲಿನ ಜನರ ಅನಾರೋಗ್ಯಕ್ಕೆ ವಿಪತ್ತುಗಳಿಗೆ ಹೇಗೆ ಕಾರಣವಾಗಿವೆ ಎಂಬುದನ್ನು ನಿರೂಪಿಸಿದ್ದವು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಛತ್ತೀಸ್‌ಘಡ ಪೊಲೀಸರಿಂದ ಪತ್ರಕರ್ತನ ಬಂಧನ ತಪ್ಪಿಸಲು ತಮ್ಮ ವಶಕ್ಕೆ ಪಡೆದ ಯುಪಿ ಪೊಲೀಸರು

ರೂಪೇಶ್ ಬಂಧನವು ಸುಪ್ರೀಂ ಕೋರ್ಟ್ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿ, ಪೊಲೀಸರು ವಿಚಾರಣೆ ನಡೆಸಿ ಬಂಧಿಸುವ ಮೊದಲು ಸಂಬಂಧಪಟ್ಟ ವ್ಯಕ್ತಿಗೆ ತಿಳಿಸಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಈ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಗೌರಿ ಲಂಕೇಶ್ ನ್ಯೂಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...