Homeರಾಷ್ಟ್ರೀಯಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌...

ಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌ ಪಡೆದ ಜಿಲ್ಲಾಡಳಿತ

ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯ ಕೆಟ್ಟ ಚಿತ್ರವನ್ನು ಬಿಂಬಿಸುತ್ತದೆ ಎಂದು ಜಿಲ್ಲಾಧಿಕಾರಿ ಸಮರ್ಥಿಸಿದ್ದರು

- Advertisement -
- Advertisement -

ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿರುವ ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ‘ದನದ ಮಾಂಸ (ಗೋಮಾಂಸ)’ ಎಂದು ಬರೆದಿರುವ ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಜಿಲ್ಲಾಡಳಿತ ಆದೇಶ ಮಾಡಿತ್ತು. ಇದೀಗ ಈ ಆದೇಶವನ್ನು ಮುಂದಿನ ಸೂಚನೆವರೆಗೆ ತಡೆಹಿಡಿಯಲಾಗಿದೆ ಎಂದ ವರದಿಯಾಗಿದೆ.

ಜುಲೈ 13ರ ಬುಧವಾರದಂದು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಸೋಮವಾರದೊಳಗೆ “ದನದ ಮಾಂಸ (ಬೀಫ್‌)” ಎಂಬ ಪದವುಳ್ಳ ಬೋಡ್‌ಗಳನ್ನು ತೆಗೆದುಹಾಕುವಂತೆ ಸರ್ಕಾರ ಆದೇಶ ಮಾಡಿತ್ತು. ಆದೇಶವನ್ನು ಉಲ್ಲಂಘಿಸಿದವರಿಗೆ 2,000 ರೂಪಾಯಿ ದಂಡ ಹಾಗೂ ಹೋಟೆಲ್‌ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸುವುದಾಗಿ ಬೆದರಿಕೆಯನ್ನೂ ಹಾಕಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ಈ ಆದೇಶವನ್ನು ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ACCI) ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ವಿರೋಧಿಸಿದ್ದು, ಪ್ರತಿಭಟನೆಗಳು ನಡೆಸಿದ್ದವು. ಪ್ರತಿಭಟನಾಕಾರರು ಇದನ್ನು ‘ಅನಾವಶ್ಯಕ’ ಎಂದು ಕರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ಜುಲೈ 13 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜಧಾನಿ ಇಟಾನಗರದ ಜಿಲ್ಲಾಡಳಿತವು, “ಭಾರತೀಯ ಸಂವಿಧಾನದ ಜಾತ್ಯತೀತ ಮನೋಭಾವವನ್ನು ನಂಬುತ್ತೇವೆ. ಆದರೆ ‘ದನದ ಮಾಂಸ’ ಎಂಬ ಪದದ ಬಹಿರಂಗ ಪ್ರದರ್ಶನವು ಸಮುದಾಯದ ಕೆಲವು ವರ್ಗಗಳ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದೆ. ಜೊತಗೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡಬಹುದು” ಎಂದು ಹೇಳಿತ್ತು.

ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಅರುಣಾಚಲ ಪ್ರದೇಶ ಘಟಕ, “ಈ ಆದೇಶವು ಅಶಾಂತಿಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ” ಎಂದು ಹೇಳಿತ್ತು.

ಈ ಆದೇಶವನ್ನು ವಾಪಾಸು ಪಡೆಯುವಂತೆ ಯುವ ಕಾಂಗ್ರೆಸ್‌ ಅಗ್ರಹಿಸಿತ್ತು. “ಅರುಣಾಚಲ ಪ್ರದೇಶದ ನಾಗರಿಕರು ಅನಾದಿ ಕಾಲದಿಂದಲೂ ಗೋಮಾಂಸ ಸೇವಿಸುತ್ತಿದ್ದಾರೆ. ಇದು ಯಾವುದೇ ಸಮುದಾಯದ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದಿಲ್ಲ” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ತಾರ್ ಜಾನ್ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು. ಜಿಲ್ಲಾಡಳಿತದ ಹಠಾತ್ ಮತ್ತು ಆಶ್ಚರ್ಯಕರ ಆದೇಶವು ರಾಜ್ಯದ ವಿವಿಧ ಗುಂಪುಗಳ ಜನರ ಮನಸ್ಸಿನಲ್ಲಿ, ವಿಶೇಷವಾಗಿ ರಾಜಧಾನಿಯಲ್ಲಿ ಕಳವಳವನ್ನು ಸೃಷ್ಟಿಸಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ರಾಜಧಾನಿ ಇಟಾನಗರದ ನಹರ್ಲಗುನ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಅವರು ಈ ಆದೇಶವನ್ನು ಹೊರಡಿಸಿದ್ದರು. “ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯನ್ನು ಕೆಟ್ಟದಾಗಿ ಬಿಂಬಿಸುತ್ತದೆ” ಎಂದು ಅವರು ಹೇಳಿದ್ದರು. ಆದೇಶಕ್ಕೆ ಕೋಮು ಬಣ್ಣ ಬಳಿಯದಂತೆ ಮನವಿ ಮಾಡಿದ್ದ ಜಿಲ್ಲಾಧಿಕಾರಿ, ಮುಂಜಾಗ್ರತಾ ಕ್ರಮವಾಗಿ ಸದುದ್ದೇಶದಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...