Homeರಾಷ್ಟ್ರೀಯಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌...

ಅರುಣಾಚಲ ಪ್ರದೇಶ: ಹೋಟೆಲ್‌ಗಳ ಬೋರ್ಡ್‌ಗಳಲ್ಲಿ ‘ಗೋಮಾಂಸ’ ಪದ ಬರೆಯದಂತೆ ಆದೇಶ; ಆಕ್ರೋಶದ ನಂತರ ಆದೇಶ ವಾಪಾಸ್‌ ಪಡೆದ ಜಿಲ್ಲಾಡಳಿತ

ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯ ಕೆಟ್ಟ ಚಿತ್ರವನ್ನು ಬಿಂಬಿಸುತ್ತದೆ ಎಂದು ಜಿಲ್ಲಾಧಿಕಾರಿ ಸಮರ್ಥಿಸಿದ್ದರು

- Advertisement -
- Advertisement -

ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರದಲ್ಲಿರುವ ಎಲ್ಲಾ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ‘ದನದ ಮಾಂಸ (ಗೋಮಾಂಸ)’ ಎಂದು ಬರೆದಿರುವ ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಜಿಲ್ಲಾಡಳಿತ ಆದೇಶ ಮಾಡಿತ್ತು. ಇದೀಗ ಈ ಆದೇಶವನ್ನು ಮುಂದಿನ ಸೂಚನೆವರೆಗೆ ತಡೆಹಿಡಿಯಲಾಗಿದೆ ಎಂದ ವರದಿಯಾಗಿದೆ.

ಜುಲೈ 13ರ ಬುಧವಾರದಂದು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಸೋಮವಾರದೊಳಗೆ “ದನದ ಮಾಂಸ (ಬೀಫ್‌)” ಎಂಬ ಪದವುಳ್ಳ ಬೋಡ್‌ಗಳನ್ನು ತೆಗೆದುಹಾಕುವಂತೆ ಸರ್ಕಾರ ಆದೇಶ ಮಾಡಿತ್ತು. ಆದೇಶವನ್ನು ಉಲ್ಲಂಘಿಸಿದವರಿಗೆ 2,000 ರೂಪಾಯಿ ದಂಡ ಹಾಗೂ ಹೋಟೆಲ್‌ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸುವುದಾಗಿ ಬೆದರಿಕೆಯನ್ನೂ ಹಾಕಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ಈ ಆದೇಶವನ್ನು ಅರುಣಾಚಲ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ACCI) ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ವಿರೋಧಿಸಿದ್ದು, ಪ್ರತಿಭಟನೆಗಳು ನಡೆಸಿದ್ದವು. ಪ್ರತಿಭಟನಾಕಾರರು ಇದನ್ನು ‘ಅನಾವಶ್ಯಕ’ ಎಂದು ಕರೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ಜುಲೈ 13 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜಧಾನಿ ಇಟಾನಗರದ ಜಿಲ್ಲಾಡಳಿತವು, “ಭಾರತೀಯ ಸಂವಿಧಾನದ ಜಾತ್ಯತೀತ ಮನೋಭಾವವನ್ನು ನಂಬುತ್ತೇವೆ. ಆದರೆ ‘ದನದ ಮಾಂಸ’ ಎಂಬ ಪದದ ಬಹಿರಂಗ ಪ್ರದರ್ಶನವು ಸಮುದಾಯದ ಕೆಲವು ವರ್ಗಗಳ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆಯಿದೆ. ಜೊತಗೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡಬಹುದು” ಎಂದು ಹೇಳಿತ್ತು.

ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಅರುಣಾಚಲ ಪ್ರದೇಶ ಘಟಕ, “ಈ ಆದೇಶವು ಅಶಾಂತಿಯನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿದೆ” ಎಂದು ಹೇಳಿತ್ತು.

ಈ ಆದೇಶವನ್ನು ವಾಪಾಸು ಪಡೆಯುವಂತೆ ಯುವ ಕಾಂಗ್ರೆಸ್‌ ಅಗ್ರಹಿಸಿತ್ತು. “ಅರುಣಾಚಲ ಪ್ರದೇಶದ ನಾಗರಿಕರು ಅನಾದಿ ಕಾಲದಿಂದಲೂ ಗೋಮಾಂಸ ಸೇವಿಸುತ್ತಿದ್ದಾರೆ. ಇದು ಯಾವುದೇ ಸಮುದಾಯದ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದಿಲ್ಲ” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ತಾರ್ ಜಾನ್ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದರು. ಜಿಲ್ಲಾಡಳಿತದ ಹಠಾತ್ ಮತ್ತು ಆಶ್ಚರ್ಯಕರ ಆದೇಶವು ರಾಜ್ಯದ ವಿವಿಧ ಗುಂಪುಗಳ ಜನರ ಮನಸ್ಸಿನಲ್ಲಿ, ವಿಶೇಷವಾಗಿ ರಾಜಧಾನಿಯಲ್ಲಿ ಕಳವಳವನ್ನು ಸೃಷ್ಟಿಸಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

ರಾಜಧಾನಿ ಇಟಾನಗರದ ನಹರ್ಲಗುನ್‌ನ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ಅವರು ಈ ಆದೇಶವನ್ನು ಹೊರಡಿಸಿದ್ದರು. “ಮಾಂಸಾಹಾರ ಸೇವನೆಗೆ ಯಾವುದೇ ನಿರ್ಬಂಧವಿಲ್ಲದಿದ್ದರೂ ಹೆದ್ದಾರಿಗಳ ಉದ್ದಕ್ಕೂ ತೆರೆದ ಪ್ರದರ್ಶನವು ರಾಜಧಾನಿಯನ್ನು ಕೆಟ್ಟದಾಗಿ ಬಿಂಬಿಸುತ್ತದೆ” ಎಂದು ಅವರು ಹೇಳಿದ್ದರು. ಆದೇಶಕ್ಕೆ ಕೋಮು ಬಣ್ಣ ಬಳಿಯದಂತೆ ಮನವಿ ಮಾಡಿದ್ದ ಜಿಲ್ಲಾಧಿಕಾರಿ, ಮುಂಜಾಗ್ರತಾ ಕ್ರಮವಾಗಿ ಸದುದ್ದೇಶದಿಂದ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...