Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...