Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...