Homeಮುಖಪುಟಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

ಪೆಗಾಸಸ್ ಪಟ್ಟಿಯಲ್ಲಿದ್ದ ಜಾರ್ಖಂಡ್ ಪತ್ರಕರ್ತನ ಬಂಧನ; ದಿಟ್ಟ ವರದಿಗಾರಿಕೆಯೇ ಮುಳುವಾಯಿತೆ?

- Advertisement -
- Advertisement -

ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿ ತನ್ನ ಹೆಸರು ಕಾಣಿಸಿಕೊಂಡಿದ್ದರಿಂದ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಸ್ವತಂತ್ರ ಪತ್ರಕರ್ತ ರೂಪೇಶ್ ಕುಮಾರ್ ಸಿಂಗ್ ಅವರನ್ನು ಜಾರ್ಖಾಂಡ್‌ ಪೊಲೀಸರು ಬಂಧಿಸಲಾಗಿದೆ. ಕಳೆದ ವರ್ಷ ಮಾವೋವಾದಿ ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ರೂಪೇಶ್ ಹೆಸರನ್ನು ಸೇರಿಸಲಾಗಿದೆ.

ಪತ್ರಕರ್ತ ರೂಪೇಶ್‌ ಮಾವೋವಾದಿಗಳಿಗಾಗಿ ನಿಧಿ ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ರೂಪೇಶ್ ಕುಟುಂಬ ಹಾಗೂ ಹಲವಾರು ಪತ್ರಕರ್ತರು ಆರೋಪಗಳನ್ನು ಅಲ್ಲಗಳೆದಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಕಟ್ಟಕಡೆಯ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರಂತರ ವರದಿ ಮಾಡುತ್ತಿದ್ದರಿಂದ ರೂಪೇಶ್ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಶಾಂತ್ ಬೋಸ್ ಅಲಿಯಾಸ್ ಕಿಶಾಂದಾ ಸೇರಿದಂತೆ ಜಾರ್ಖಂಡ್‌ನ ಸರೈಕೆಲಾ ಜಿಲ್ಲೆಯ ಮಾವೋವಾದಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್ ಬಂಧನವಾಗಿದೆ.

ಮಾವೋವಾದಿ ಸಂಪರ್ಕಗಳ ಆರೋಪದ ಮೇಲೆ ರೂಪೇಶ್‌ ಅವರನ್ನು 2019ರಲ್ಲಿ ಗಯಾ ಪೊಲೀಸರು ಬಂಧಿಸಿದ್ದರು. ಆದರೆ ಪೊಲೀಸರು ಆರೋಪಪಟ್ಟಿ ಸಲ್ಲಿಸಲು ಸಾಧ್ಯವಾಗದ ಕಾರಣ ಜಾಮೀನು ಪಡೆದಿದ್ದರು ಎಂದು ‘ದಿ ವೈರ್’ ವರದಿ ಮಾಡಿತ್ತು. ‘ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ’ ಎಂದು ರೂಪೇಶ್ ಹೇಳಿದ್ದರು.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ರೂಪೇಶ್‌ ಅವರ ಪತ್ನಿ ಇಪ್ಸಾ ಶತಾಕ್ಷಿ ಅವರೂ ದಿಟ್ಟ ಹೋರಾಟಗಾರ್ತಿ. ಬುಡಕಟ್ಟು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಶತಾಕ್ಷಿ ಅವರ ಹೆಸರು ಕೂಡ ಪೆಗಾಸಸ್ ಸ್ನೂಪಿಂಗ್ ಪಟ್ಟಿಯಲ್ಲಿತ್ತು. ದಿ ವೈರ್‌ಗೆ ಪ್ರತಿಕ್ರಿಯೆ ನೀಡಿರುವ ಅವರು, “ಖಾರ್ಸಾವಾನ್ ಜಿಲ್ಲೆಯ ಪೊಲೀಸರು ರಾಮಗಢ್‌ನಲ್ಲಿರುವ ನಮ್ಮ ಮನೆಯನ್ನು ಒಂಬತ್ತು ಗಂಟೆಗಳ ಕಾಲ ಸರ್ಚ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಬೆಡ್ ಶೀಟ್, ಒಂಬತ್ತು ಪುಟಗಳ ನೋಟ್‌ಬುಕ್, ಮೋಟರ್‌ ಸೈಕಲ್ ದಾಖಲೆ, ಎರಡು ಮೊಬೈಲ್ ಫೋನ್‌ಗಳು, ಒಂದು ಹಾರ್ಡ್ ಡಿಸ್ಕ್, ಕಾರಿನ ದಾಖಲೆ, ಎರಡು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸರ್ಚ್ ವೇಳೆ ಸುಮಾರು ಅರ್ಧಗಂಟೆ ಕಾಲ ಪೊಲೀಸರು ನಮ್ಮನ್ನು ಮನೆಯಿಂದ ಹೊರಗೆ ಕಳುಹಿಸಿದರು. ಒಳಗಿನಿಂದ ಬಾಗಿಲು ಲಾಕ್‌ ಮಾಡಿದ್ದರು” ಎಂದು ತಿಳಿಸಿದ್ದಾರೆ.

“ನಿರ್ಭೀತವಾಗಿ ಪತ್ರಿಕೋದ್ಯಮ ವೃತ್ತಿ ಮಾಡುತ್ತಿದ್ದ ಕಾರಣ ನನ್ನ ಗಂಡನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಇಪ್ಸಾ ತಿಳಿಸಿದ್ದಾರೆ.

ರೂಪೇಶ್‌ ಇತ್ತೀಚೆಗೆ ಗಿರಿದಿಹ್‌ಗೆ ಭೇಟಿ ನೀಡಿದ್ದರು. ಕೈಗಾರಿಕಾ ಮಾಲಿನ್ಯದಿಂದಾಗಿ ಸ್ಥಳೀಯ ಜನರ ಜೀವನ ಎಷ್ಟು ಹದಗೆಟ್ಟಿದೆ ಎಂಬುದರ ಕುರಿತು ವರದಿ ಮಾಡಿದ್ದರು. ಮುಖದ ಮೇಲೆ ವಿಕಾರವಾದ ಗಡ್ಡೆ ಬೆಳೆದಿರುವ, ನಡೆಯಲೂ ಕೂಡ ಸಾಧ್ಯವಾಗದೆ ಇರುವ ಸ್ಥಳೀಯ ಹೆಣ್ಣುಮಗಳೊಬ್ಬಳ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ. ವೀಡಿಯೊ ವೈರಲ್ ಕೂಡ ಆಗಿತ್ತು. ಕೆಲವು ವೈದ್ಯರು, ನಟ ಸೋನು ಸೂದ್ ಅವರ ತಂಡವು ಟ್ವೀಟ್‌ಗೆ ಪ್ರತಿಕ್ರಿಯಿಸಿ, ಆ ಹೆಣ್ಣುಮಗುವಿಗೆ ಸಹಾಯಹಸ್ತ ನೀಡಿದ್ದರು.

ಹಲವಾರು ಪತ್ರಕರ್ತರು ಸಾಮಾಜಿಕ ಮಾಧ್ಯಮದಲ್ಲಿ ರೂಪೇಶ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ಹಿಂಸಾಚಾರ

“ಕೈಗಾರಿಕೆಗಳು ಉಂಟು ಮಾಡುತ್ತಿರುವ ಮಾಲಿನ್ಯದಿಂದಾಗಿ ಹಳ್ಳಿಗಳ ಮೇಲಾಗುತ್ತಿರುವ ದುಷ್ಪರಿಣಾಮದ ಕುರಿತು, ಸುದ್ದಿಮನೆಗಳು ಸಾಮಾನ್ಯವಾಗಿ ನಿರ್ಲಕ್ಷಿಸಲ್ಪಡುವ ಗ್ರೌಂಡ್‌ ರಿಪೋರ್ಟ್‌ ಅನ್ನು ರೂಪೇಶ್ ಕುಮಾರ್ ಸಿಂಗ್ ಮಾಡಿದ್ದಾರೆ. ಅದು ಅವರ ಕೊನೆಯ ವರದಿಯೂ ಆಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು ವರದಿ ಮಾಡುವ ಪತ್ರಕರ್ತರು ಸರ್ಕಾರದ ಕಣ್ಗಾವಲನ್ನು, ಸೆರೆಮನೆ ವಾಸವನ್ನು ಇನ್ನು ಮುಂದೆ ನಿರ್ಲಕ್ಷಿಸಲು ಸಾಧ್ಯವಾಗದು” ಎಂದು ಸ್ವತಂತ್ರ ಪತ್ರಕರ್ತೆ ಶಾಲಿನಿ ನಾಯರ್ ಟ್ವೀಟ್ ಮಾಡಿದ್ದಾರೆ.

“ನಿಮಗೆ ವಾಕ್ ಸ್ವಾತಂತ್ರ್ಯದ ಬಗ್ಗೆ ಕಾಳಜಿ ಇದ್ದರೆ, ಪ್ರಚಾರವನ್ನು ಪಡೆಯದೆ ಗ್ರೌಂಡ್ ರಿಪೋರ್ಟ್ ಮಾಡುವ ಪತ್ರಕರ್ತರನ್ನು ಬೆಂಬಲಿಸಿ” ಎಂದು ಸ್ವತಂತ್ರ ಪತ್ರಕರ್ತೆ ನೇಹಾ ದೀಕ್ಷಿತ್ ಟ್ವೀಟ್ ಮಾಡಿದ್ದಾರೆ. ದಿಟ್ಟ ಪತ್ರಕರ್ತರಾದ ರೂಪೇಶ್‌ ಸಿಂಗ್‌, ಮೊಹಮ್ಮದ್‌ ಜುಬೇರ್‌, ಸಿದ್ದಿಕ್‌ ಕಪ್ಪನ್‌, ಆಸಿಫ್‌ ಸುಲ್ತಾನ್‌ ಅವರ ಹೆಸರುಗಳನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...