Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...