Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...