Homeಕರ್ನಾಟಕವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ವಿಜಯನಗರ: ‘ಆರ್‌ಎಸ್‌ಎಸ್‌ ಆಳ ಅಗಲ’ ಕೃತಿ ಉಚಿತವಾಗಿ ಹಂಚಿಕೆ

ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ: ಪೀರ್‌ ಬಾಷಾ

- Advertisement -
- Advertisement -

ನಾಡಿನ ಸಾಕ್ಷಿ ಪ್ರಜ್ಞೆ, ನೆಲ ಸಂಸ್ಕೃತಿಯ ಪ್ರತಿಪಾದಕರಾದ ದೇವನೂರ ಮಹಾದೇವ ಅವರು ಬರೆದಿರುವ ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯನ್ನು ವಿಜಯನಗರದಲ್ಲಿ ಉಚಿತವಾಗಿ ಹಂಚುವ ಕಾರ್ಯಕ್ರಮ ನಡೆಯಿತು.

ಪ್ರಗತಿಪರ ಸ್ನೇಹಿತರು, ವಿಜಯನಗರ ಜಿಲ್ಲಾ ಡಾ.ಬಿ.ಆರ್‌.ಅಂಬೇಡ್ಕರ್ ಸಂಘದ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕ್ರಮ ನಡೆಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಂತಕ ಪೀರ್‌ ಬಾಷಾ ಮಾತನಾಡಿ, “ಬಲಿಷ್ಠ ಸಂಘಟನೆ ಎಂದು ಬಿಂಬಿಸಿಕೊಳ್ಳುವ ಆರ್‌ಎಸ್‌ಎಸ್‌, ಮಾನವತಾವಾದಿ ದೇವನೂರರು ಬರೆದಿರುವ ಈ ಚಿಕ್ಕ ಕೃತಿಯಿಂದಾಗಿ  ನಡುಗಿ ಹೋಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್‌ ಭಾಗವತ್‌ ಅವರು ಕರ್ನಾಟಕಕ್ಕೆ ಬಂದು ಸಭೆ ಮಾಡುವಷ್ಟು ಆತಂಕ ಆರ್‌ಎಸ್‌ಎಸ್‌ಗೆ ಉಂಟಾಗಿದೆ. ಇದು ದೇವನೂರರಿಗಿರುವ ಶಕ್ತಿ. ಅವರ ವಿಚಾರಗಳಿಗಿರುವ ಶಕ್ತಿ” ಎಂದು ಬಣ್ಣಿಸಿದರು.

“ಆರ್‌ಎಸ್‌ಎಸ್‌ ಹುಟ್ಟಿ ನೂರು ವರ್ಷಗಳಾಗುತ್ತಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವನ್ನು ಆರ್‌ಎಸ್‌ಎಸ್‌ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಸರಿ, ಅಂಬೇಡ್ಕರ್‌ ಬರೆದಿರುವ ಸಂವಿಧಾನವನ್ನು ಅಪ್ರಸ್ತುತಗೊಳಿಸಬೇಕು ಎಂದು ಎಲ್ಲ ರೀತಿಯ ಹುನ್ನಾರ ಮಾಡುತ್ತಿರುವುದನ್ನು ದೇವನೂರರು ತಮ್ಮ ಕೃತಿಯಲ್ಲಿ ಬಯಲಿಗೆಳೆದಿದ್ದಾರೆ” ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಚಾತುರ್‌ವರ್ಣ ಪದ್ಧತಿಯಲ್ಲಿ ನಂಬಿಕೆ ಇಟ್ಟಿದೆ. ಭಾರತದ ಸಂವಿಧಾನ ಜಾತಿ ವ್ಯವಸ್ಥೆ ಬೇಡ ಎನ್ನುತ್ತದೆ. ಆರ್‌ಎಸ್‌ಎಸ್ ಭಗವಾಧ್ವಜ ಬೇಕು ಎಂದರೆ ಅಂಬೇಡ್ಕರರ ಸಂವಿಧಾನ ತ್ರಿವರ್ಣ ಧ್ವಜದಲ್ಲಿ ನಂಬಿಕೆ ಇಟ್ಟಿದೆ. ನಮ್ಮ ಸಂವಿಧಾನ ಜಾತ್ಯತೀತತೆಯಲ್ಲಿ ನಂಬಿಕೆ ಇಟ್ಟಿದ್ದರೆ, ಆರ್‌ಎಸ್‌ಎಸ್‌ನವರು ಮನುವಾದದಲ್ಲಿ ನಂಬಿಕೆ ಇಟ್ಟಿದ್ದಾರೆ. ಈ ವಿಚಾರಗಳನ್ನು ದೇವನೂರರು ಸರಳವಾಗಿ ವಿವರಿಸಿದ್ದಾರೆ. ಇಲ್ಲಿಯವರೆಗೆ ಈ ಕೃತಿಯ ಒಂದು ಲಕ್ಷ ಪ್ರತಿ ಮಾರಾಟವಾಗಿವೆ. ವಿದ್ಯಾರ್ಥಿಗಳು ಖರೀದಿಸಿ ಓದುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಚಿಂತಕ ಕೆ.ರಮೇಶ್ ಮಾತನಾಡಿ, “ಆರ್‌ಎಸ್‌ಎಸ್‌ನ ನಿಜ ಬಣ್ಣವನ್ನು ದೇವನೂರರು ಬಯಲು ಮಾಡಿದ್ದಾರೆ. ಆರ್‌ಎಸ್‌ಎಸ್‌ ದೇಶದಲ್ಲಿ ಹೇಗೆ ವಿಷಬೀಜವನ್ನು ಬಿತ್ತುತ್ತಿದೆ ಎಂಬ ವಿಚಾರಗಳನ್ನು ಅತ್ಯಂತ ಸ್ಪಷ್ಟವಾಗಿ ಈ ಕೃತಿಯಲ್ಲಿ ವಿವರಿಸಲಾಗಿದೆ. ಈ ಕೃತಿಯನ್ನು ಓದುವ ದೊಡ್ಡ ಆಂದೋಲನ ಆಗಬೇಕಿದೆ” ಎಂದು ಆಶಿಸಿದರು.

ಜಿಲ್ಲಾ ದಲಿತ ಹಕ್ಕುಗಳ ಸಮಿತಿಯ ಮರಡಿ ಜಂಬಯ್ಯ ನಾಯಕ ಮಾತನಾಡಿ, “ಆರ್‌ಎಸ್‌ಎಸ್‌ ಆಳ ಮತ್ತು ಅಗಲ ಕೃತಿಯು ಬಹುಭಾಷೆಗಳಿಗೆ ತರ್ಜುಮೆಯಾಗುತ್ತಿದೆ. ಈ ವಿದ್ಯಮಾನವು ಕೃತಿಯ ಮಹತ್ವವನ್ನು ಹಾಗೂ ಆರ್‌ಎಸ್‌ಎಸ್‌ ಕುರಿತು ತಿಳಿದುಕೊಳ್ಳಬೇಕೆಂಬ ಜನರ ತವಕವನ್ನು ತೋರಿಸುತ್ತದೆ. ದೇಶ ಆತಂಕ ಸ್ಥಿತಿಯಲ್ಲಿರುವ ಸಂದರ್ಭದಲ್ಲಿ ಈ ಕೃತಿ ನಮಗೆ ಮಾರ್ಗದರ್ಶನ ತೋರಿದೆ” ಎಂದು ವಿವರಿಸಿದರು.

ವಿಜಯನಗರ ಬಂಡಾಯ ಸಾಹಿತ್ಯ ಸಂಚಾಲಕರಾದ ಪಿ.ಆರ್. ವೆಂಕಟೇಶ ಮಾತನಾಡಿ, “ಪ್ರಗತಿಪರರು, ಸಮಾನತೆ ಬಯಸುವವರು ವಿದೇಶದ ವಿಚಾರಗಳನ್ನು ತುರುಕುತ್ತಿದ್ದಾರೆಂದು ಆರ್‌ಎಸ್‌ಎಸ್‌ ಹೇಳುತ್ತಿದೆ. ಆದರೆ ಗೋಲ್ವಲ್ಕರ್‌ ಅವರ ಬಂಚ್‌ ಆಫ್ ಥಾಟ್ಸ್‌ ಯಾವ ದೇಶದ್ದು ಎಂದು ದೇವನೂರರು ಕೇಳುತ್ತಿದ್ದಾರೆ. ನಾಜಿ ಸಿದ್ಧಾಂತ ಎಲ್ಲಿಯದ್ದು ಎಂದು ಪ್ರಶ್ನಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಅಜೆಂಡಾಗಳನ್ನು ಬಯಲುಗೊಳಿಸುವ ಕನ್ನಡ ಕೃತಿಗಳು

ಬಣ್ಣದ ಮನೆ ಸೋಮಶೇಖರ್ ಮಾತನಾಡಿ, “ದೇವನೂರರ ಆರ್.ಎಸ್.ಎಸ್ ಆಳ ಮತ್ತು ಅಗಲ ಕೃತಿಯಿಂದ ಕೆಲವರ ಎದೆಯಲ್ಲಿ ನಡುಕ ಹುಟ್ಟಿರುವುದು ಸತ್ಯ. ಹೀಗಾಗಿ ಪುಸ್ತಕ ಹಂಚುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣಗಳಲ್ಲಿ ಆಯೋಜಿಸಬೇಕು. ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಬೇಕು” ಎಂದು ಆಶಿಸಿದರು.

ಪ್ರಗತಿಪರ ಸಂಘಟನೆಯ ದುರ್ಗಪ್ಪ ಪೂಜಾರಿ, ಆಟೋ ಯುನಿಯನ್ ರಾಮಚಂದ್ರ ಮತ್ತು ಎಮ್.ಆರ್.ಎಮ್ ಮಂಜು, ಸ್ಲಮ್ ಜಾಗೃತಿಯ ವೆಂಕಟೇಶ್‌ ಸೇರಿದಂತೆ ಅನೇಕ ಚಿಂತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಓದುಕಟ್ಟಿನಲ್ಲಿ ಹಲವಾರು ಕಡೆ ಸಂಸ್ಕೃತ ಪದಗಳಿಗೆ ಕನ್ನಡ ಪದಗಳನ್ನು ಬಳಸಬಹುದಿತ್ತು.

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...