Homeರಾಷ್ಟ್ರೀಯಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಬೇರ್‌ ಪ್ರಕರಣಗಳ ‘ವಿಷ ವರ್ತುಲ’ದಲ್ಲಿ ಸಿಲುಕಿದ್ದಾರೆ: ಸುಪ್ರೀಂಕೋರ್ಟ್‌ ಹೇಳಿಕೆ

ಜುಲೈ 20ರ ವರೆಗೆ ಯುಪಿ ಪೊಲೀಸರು ಅವರನ್ನು ಬಂಧಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ಕರ್‌‌, ಪತ್ರಕರ್ತ ಮೊಹಮ್ಮದ್ ಜುಬೇರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾದ ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಆತುರದ ಕ್ರಮ ಕೈಗೊಳ್ಳದಂತೆ ಸೋಮವಾರದಂದು ಸುಪ್ರೀಂಕೋರ್ಟ್ ಜುಲೈ 20 ರವರೆಗೆ ರಕ್ಷಣೆ ಒದಗಿಸಿದೆ. ಜೊತೆಗೆ ಅವರು ಅನೇಕ ಪ್ರಕರಣಗಳ ‘ವಿಷ ವರ್ತುಲ’ ದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್ ಯುಪಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಐದು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿದ್ದ ಜುಬೈರ್ ಅವರ ಮನವಿಯನ್ನು ಬುಧವಾರ ವಿಚಾರಣೆಗೆ ಮುಂದೂಡಿದೆ. ಜುಬೈರ್ ವಿರುದ್ಧ ದಾಖಲಾಗಿರುವ ಐದು ಎಫ್‌ಐಆರ್‌ಗಳ ಅಡಿಯಲ್ಲಿ ಜುಲೈ 20ರ ವರೆಗೆ ಯುಪಿ ಪೊಲೀಸರು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದ ಅರ್ಥ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೈರ್ ಪರ ವಕೀಲರಾದ ವೃಂದಾ ಗ್ರೋವರ್ ಅವರು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎ ಎಸ್ ಬೋಪಣ್ಣ ಅವರ ಪೀಠಕ್ಕೆ ಎಫ್‌ಐಆರ್‌ಗಳ ವಿಷಯವು ದೆಹಲಿ ಪೊಲೀಸರು ದಾಖಲಿಸಿದಂತೆಯೇ ಇದೆ ಎಂದು ಹೇಳಿದ್ದಾರೆ. ದೆಹಲಿ ಪೊಲೀಸರು ಜಬೇರ್‌ ಅವರ ಟ್ವೀಟ್‌ಗಳಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ನಿಂದಿಸಲಾಗಿದೆ ಮತ್ತು ವಿದೇಶದಿಂದ ಅನಧಿಕೃತ ಹಣವನ್ನು ಪಡೆದಿವೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

“ಐದು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಜುಬೈರ್ ವಿರುದ್ಧ ಆತುರದ ಕ್ರಮವನ್ನು ತಡೆಹಿಡಿಯಲಾಗಿದೆ. ಯಾಕೆಂದರೆ ಅವರು ಒಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಹೊಸ ಎಫ್‌ಐಆರ್‌ನಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತಿದೆ. ಆದರೆ ಈ ಹೊಸ ಪ್ರಕರಣಗಳ ವಿಷಯವು ಹಳೆಯ ಎಫ್‌ಐಆರ್‌ ಅನ್ನು ಹೋಲುತ್ತದೆ ಎಂದು ತೋರುತ್ತಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

ಧಾರ್ಮಿಕ ಭಾವನೆಗಳಿಗೆ ನೋವು ಮಾಡಿರುವ ಆರೋಪದ ಮೇಲೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ತುರ್ತು ಪಟ್ಟಿ ಮಾಡಬೇಕು ಎಂದು ಸೋಮವಾರ ಜುಬೇರ್‌ ಕೋರಿದ್ದರು.

ಅರ್ಜಿದಾರರು, ಫ್ಯಾಕ್ಟ್‌ಚೆಕ್ಕರ್‌ ಮತ್ತು ಪತ್ರಕರ್ತರಾಗಿದ್ದು ಹಲವಾರು ಎಫ್‌ಐಆರ್‌ಗಳನ್ನು ಎದುರಿಸುತ್ತಿದ್ದಾರೆ. ಅವರ ಮನವಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಜುಬೇರ್‌ ಪರವಾಗಿ ಹಾಜರಾದ ವಕೀಲೆ ವೃಂದಾ ಗ್ರೋವರ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠವು ಗಮನಿಸಿದೆ. “ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಪಟ್ಟಿ ಮಾಡಿ. ಆ ಪೀಠದ ಮುಂದೆ ನೀವು ಪ್ರಕರಣಗಳನ್ನು ಪ್ರಸ್ತಾಪಿಸಬಹುದು” ಎಂದು ಸಿಜೆಐ ಪೀಠ ಹೇಳಿದೆ.

ಇದನ್ನೂ ಓದಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಜುಬೇರ್‌ನ ಹೊಸ ಮನವಿಯು ಆರು ಪ್ರಕರಣಗಳ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ತನಿಖಾ ತಂಡದ (ಎಸ್‌ಐಟಿ) ರಚನೆಯನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ದಾಖಲಾಗಿರುವ ಎಲ್ಲಾ ಆರು ಎಫ್‌ಐಆರ್‌ಗಳನ್ನು ತನಿಖೆಗಾಗಿ ಎಸ್‌ಐಟಿಗೆ ವರ್ಗಾಯಿಸಲಾಗಿದ್ದು, ದೆಹಲಿ ಪೊಲೀಸ್ ವಿಶೇಷ ಸೆಲ್‌ ಕೂಡಾ ಅದೇ ಎಫ್‌ಐಆರ್‌ನ ವಿಷಯದ ಮೇಲೆ ತನಿಖೆ ನಡೆಸುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...