Homeಕರ್ನಾಟಕಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

- Advertisement -
- Advertisement -

ನಾಡಿನ ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ ಅವರು ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದ್ದಾರೆ. ಸೋಂಕಿನಿಂದಾಗಿ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

1955ರ ಏಪ್ರಿಲ್ 22 ರಂದು ಜನಿಸಿದ ಎ.ಎನ್.ಮುಕುಂದ ಅವರು, ಕರ್ನಾಟಕದ ಉತ್ತಮ ಫೋಟೊಗ್ರಾಫರ್‌ಗಳಲ್ಲಿ ಒಬ್ಬರು. ದಾವಣಗೆರೆಯಲ್ಲಿ ಹೈಸ್ಕೂಲು ವಿದ್ಯಾಭ್ಯಾಸ ಮತ್ತು ಬೆಂಗಳೂರಿನ ಬಿ.ಎಮ್.ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ವಿದ್ಯಾಭ್ಯಾಸದ ನಂತರ ಕೆ.ಪಿ.ಟಿ.ಸಿ.ಎಲ್.ನಲ್ಲಿ 30 ವರ್ಷದ ಸೇವೆ ಸಲ್ಲಿಸಿದ್ದ ಅವರು 2008ರಲ್ಲಿ ಸ್ವಯಂ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೃತ್ತಿಯಲ್ಲಿ ಇಂಜಿನಿಯರ್ ಅಗಿದ್ದ ಅವರು, ಸಾಹಿತ್ಯ ಮತ್ತು ಸಾಸ್ಕೃತಿಕ ಚಟುವಟಿಕೆಗಳ ಜೊತೆಗೆ ಗುರುತಿಸಿಕೊಂಡಿದ್ದು, ಛಾಯಾಗ್ರಾಹಕರಾಗಿ ಸಾಹಿತ್ಯಕ್ಕೆ ಪೂರಕವಾದ ಸಾಹಿತಿಗಳ ಭಾವಚಿತ್ರ, ವಿಶೇಷ ಚಿತ್ರಗಳನ್ನು ಅವರು ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ: ‘ಕೊಲುವೆನೆಂಬ ಭಾಶೆ’ ಕೃತಿ ಪರಿಚಯ: ಉಳಿಸುವ ನುಡಿಯ ಹುಡುಕುತ್ತಾ…

‘ಮುಖಮುದ್ರೆ’ ಎಂಬುದು ಎ.ಎನ್. ಮುಕುಂದ ಅವರ ವಿಶಿಷ್ಟ ಕೃತಿಯಾಗಿದ್ದು, ಅದರಲ್ಲಿ ಅವರು ಕನ್ನಡ ಸಾಹಿತ್ಯ ಲೋಕದ 50 ಮಂದಿ ಅಗ್ರಮಾನ್ಯ ಲೇಖಕರ ಸುಂದರ ಭಾವಚಿತ್ರಗಳನ್ನು ದಾಖಲಿಸಿದ್ದಾರೆ. ಕಳೆದ ಸುಮಾರು ಎರಡೂವರೆ ದಶಕಗಳಲ್ಲಿ ಅವರು ತೆಗೆದ ಸಾಹಿತಿಗಳ, ಸಂಗೀತಗಾರರ, ರಾಜಕಾರಣಿಗಳ, ಮಕ್ಕಳ ಭಾವಚಿತ್ರಗಳು ರಾಜ್ಯದ ಪ್ರತಿಷ್ಠಿತ ಕನ್ನಡ ಮತ್ತು ಇಂಗ್ಲಿಷ್‌ ನಿಯತಕಾಲಿಕೆಗಳಲ್ಲಿ, ಪತ್ರಿಕೆಗಳಲ್ಲಿ ನಿರಂತರವಾಗಿ ಪ್ರಕಟವಾಗಿವೆ.

ಎ.ಎನ್. ಮುಕುಂದ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ಸಹಾಯಕ ಪ್ರೊಫೆಸರ್‌ ಜಯಶಂಕರ್‌ ಹಲಗೂರು ಅವರು ಮುಕುಂದ ಅವರೊಂದಿಗೆ ಕಳೆದ ಕ್ಷಣಗಳನ್ನು ನೆನೆದುಕೊಂಡಿದ್ದು, ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಲೇಖಕರು ಮತ್ತು ಪ್ರಕಾಶಕರಾದ ಜಿ.ಎನ್. ಮೋಹನ್ ಅವರು, “ಅವರಿಗೆ ಖಂಡಿತಾ ಧಣಿವಾಗಿರಲಿಲ್ಲ. ಆದರೆ ಅವರು ಹೊರಟೇ ಹೋದರು. ದಣಿವು ಎನ್ನುವ ಶಬ್ದಕ್ಕೂ ಎಎನ್ ಮುಕುಂದರಿಗೂ ಆರ್ಥಾತ್ ಸಂಬಂಧ ಇರಲಿಲ್ಲ. ನಮ್ಮೊಳಗೇ ಒಂದು ಸುಸ್ತು ಆವರಿಸಿದರೂ ಅವರೊಳಗಿನ ಚೈತನ್ಯ, ಮುಖದ ತುಂಬಾ ಹರಡಿಕೊಳ್ಳುತ್ತಿದ್ದ ನಗು ಎರಡಕ್ಕೂ ಕೊನೆ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಯುವ ಕವಿ ರಾಜೇಂದ್ರ ಪ್ರಸಾದ್ ಅವರು, “ಹುಷಾರಾಗಿ ಬಂದುಬಿಡ್ತಾರೆ ಅನ್ನುವ ನನ್ನ ನಂಬುಗೆ ಹುಸಿಯಾಗಿ ಬಿಡ್ತು. ನಾಕ್ಲೈದು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.. ಮುಕುಂದ್ ಅಂಕಲ್ ತೋರುತ್ತಿದ್ದ ಪ್ರೀತಿ, ವಿಶ್ವಾಸ, ಕಾಳಜಿಗಳು ದೊಡ್ಡವು. ಮಾತು-ಮನಸುಗಳಿಗೆ ಏನೂ ತೋಚುತ್ತಿಲ್ಲ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...