Homeಕರ್ನಾಟಕಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ (67) ನಿಧನ

- Advertisement -
- Advertisement -

ನಾಡಿನ ಖ್ಯಾತ ಫೋಟೊಗ್ರಾಫರ್‌‌ ಎ.ಎನ್‌. ಮುಕುಂದ ಅವರು ಕೊರೊನಾ ಸೋಂಕಿನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನ ಹೊಂದಿದ್ದಾರೆ. ಸೋಂಕಿನಿಂದಾಗಿ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

1955ರ ಏಪ್ರಿಲ್ 22 ರಂದು ಜನಿಸಿದ ಎ.ಎನ್.ಮುಕುಂದ ಅವರು, ಕರ್ನಾಟಕದ ಉತ್ತಮ ಫೋಟೊಗ್ರಾಫರ್‌ಗಳಲ್ಲಿ ಒಬ್ಬರು. ದಾವಣಗೆರೆಯಲ್ಲಿ ಹೈಸ್ಕೂಲು ವಿದ್ಯಾಭ್ಯಾಸ ಮತ್ತು ಬೆಂಗಳೂರಿನ ಬಿ.ಎಮ್.ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ವಿದ್ಯಾಭ್ಯಾಸದ ನಂತರ ಕೆ.ಪಿ.ಟಿ.ಸಿ.ಎಲ್.ನಲ್ಲಿ 30 ವರ್ಷದ ಸೇವೆ ಸಲ್ಲಿಸಿದ್ದ ಅವರು 2008ರಲ್ಲಿ ಸ್ವಯಂ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೃತ್ತಿಯಲ್ಲಿ ಇಂಜಿನಿಯರ್ ಅಗಿದ್ದ ಅವರು, ಸಾಹಿತ್ಯ ಮತ್ತು ಸಾಸ್ಕೃತಿಕ ಚಟುವಟಿಕೆಗಳ ಜೊತೆಗೆ ಗುರುತಿಸಿಕೊಂಡಿದ್ದು, ಛಾಯಾಗ್ರಾಹಕರಾಗಿ ಸಾಹಿತ್ಯಕ್ಕೆ ಪೂರಕವಾದ ಸಾಹಿತಿಗಳ ಭಾವಚಿತ್ರ, ವಿಶೇಷ ಚಿತ್ರಗಳನ್ನು ಅವರು ಕ್ಲಿಕ್ಕಿಸಿದ್ದಾರೆ.

ಇದನ್ನೂ ಓದಿ: ‘ಕೊಲುವೆನೆಂಬ ಭಾಶೆ’ ಕೃತಿ ಪರಿಚಯ: ಉಳಿಸುವ ನುಡಿಯ ಹುಡುಕುತ್ತಾ…

‘ಮುಖಮುದ್ರೆ’ ಎಂಬುದು ಎ.ಎನ್. ಮುಕುಂದ ಅವರ ವಿಶಿಷ್ಟ ಕೃತಿಯಾಗಿದ್ದು, ಅದರಲ್ಲಿ ಅವರು ಕನ್ನಡ ಸಾಹಿತ್ಯ ಲೋಕದ 50 ಮಂದಿ ಅಗ್ರಮಾನ್ಯ ಲೇಖಕರ ಸುಂದರ ಭಾವಚಿತ್ರಗಳನ್ನು ದಾಖಲಿಸಿದ್ದಾರೆ. ಕಳೆದ ಸುಮಾರು ಎರಡೂವರೆ ದಶಕಗಳಲ್ಲಿ ಅವರು ತೆಗೆದ ಸಾಹಿತಿಗಳ, ಸಂಗೀತಗಾರರ, ರಾಜಕಾರಣಿಗಳ, ಮಕ್ಕಳ ಭಾವಚಿತ್ರಗಳು ರಾಜ್ಯದ ಪ್ರತಿಷ್ಠಿತ ಕನ್ನಡ ಮತ್ತು ಇಂಗ್ಲಿಷ್‌ ನಿಯತಕಾಲಿಕೆಗಳಲ್ಲಿ, ಪತ್ರಿಕೆಗಳಲ್ಲಿ ನಿರಂತರವಾಗಿ ಪ್ರಕಟವಾಗಿವೆ.

ಎ.ಎನ್. ಮುಕುಂದ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೈಸೂರಿನ ಮಹಾರಾಣಿ ಕಾಲೇಜಿನ ಸಹಾಯಕ ಪ್ರೊಫೆಸರ್‌ ಜಯಶಂಕರ್‌ ಹಲಗೂರು ಅವರು ಮುಕುಂದ ಅವರೊಂದಿಗೆ ಕಳೆದ ಕ್ಷಣಗಳನ್ನು ನೆನೆದುಕೊಂಡಿದ್ದು, ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಲೇಖಕರು ಮತ್ತು ಪ್ರಕಾಶಕರಾದ ಜಿ.ಎನ್. ಮೋಹನ್ ಅವರು, “ಅವರಿಗೆ ಖಂಡಿತಾ ಧಣಿವಾಗಿರಲಿಲ್ಲ. ಆದರೆ ಅವರು ಹೊರಟೇ ಹೋದರು. ದಣಿವು ಎನ್ನುವ ಶಬ್ದಕ್ಕೂ ಎಎನ್ ಮುಕುಂದರಿಗೂ ಆರ್ಥಾತ್ ಸಂಬಂಧ ಇರಲಿಲ್ಲ. ನಮ್ಮೊಳಗೇ ಒಂದು ಸುಸ್ತು ಆವರಿಸಿದರೂ ಅವರೊಳಗಿನ ಚೈತನ್ಯ, ಮುಖದ ತುಂಬಾ ಹರಡಿಕೊಳ್ಳುತ್ತಿದ್ದ ನಗು ಎರಡಕ್ಕೂ ಕೊನೆ ಇರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಯುವ ಕವಿ ರಾಜೇಂದ್ರ ಪ್ರಸಾದ್ ಅವರು, “ಹುಷಾರಾಗಿ ಬಂದುಬಿಡ್ತಾರೆ ಅನ್ನುವ ನನ್ನ ನಂಬುಗೆ ಹುಸಿಯಾಗಿ ಬಿಡ್ತು. ನಾಕ್ಲೈದು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.. ಮುಕುಂದ್ ಅಂಕಲ್ ತೋರುತ್ತಿದ್ದ ಪ್ರೀತಿ, ವಿಶ್ವಾಸ, ಕಾಳಜಿಗಳು ದೊಡ್ಡವು. ಮಾತು-ಮನಸುಗಳಿಗೆ ಏನೂ ತೋಚುತ್ತಿಲ್ಲ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...