Homeಕರ್ನಾಟಕಶರಾವತಿ ಕಣಿವೆಯ ಕೂಗು

ಶರಾವತಿ ಕಣಿವೆಯ ಕೂಗು

ಏನದು ಯೋಜನೆ? ಯಾಕೆ ಈ ಮಟ್ಟದ ವಿರೋಧ

- Advertisement -
- Advertisement -

ಕಳೆದ ಒಂದು ವಾರದಿಂದ ಶರಾವತಿ ಕಣಿವೆ ಕದಲುತ್ತಿದೆ. ಉಪಮುಖ್ಯಮಂತ್ರಿ ಡಾಜಿ.ಪರಮೇಶ್ವರ್ ಅವರು ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನಿಭಾಯಿಸಲು ಶರಾವತಿ ನದಿಯ ನೀರನ್ನು ತರುವ 12,500 ಕೋಟಿ ರೂಪಾಯಿ ವೆಚ್ಚದ ಯೋಜನೆಯೊಂದಕ್ಕೆ ಡಿಪಿಆರ್ ತಯಾರಿಸಲು ಆದೇಶ ನೀಡಲಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದೇ ತಡ ಶರಾವತಿಯ ಎಡ ಬಲಗಳ ಊರುಗಳ ಜನರೆಲ್ಲ ಕೆಂಡಾಮಂಡಲವಾಗಿದ್ದಾರೆ. ಅವರು ಹಾಗೆ ಹೇಳಿದ ಎರಡೇ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜನಾಂದೋಲನವೊಂದು ಶುರುವಾಗಿ ಈಗ ಜಿಲ್ಲೆಯ ಪ್ರತಿ ತಾಲ್ಲೂಕು ಪ್ರತಿ ಹೋಬಳಿ ಹಾಗೂ ಪ್ರತಿ ಊರಿನಲ್ಲೂ ಪ್ರತಿಧ್ವನಿಸತೊಡಗಿದೆ. ಚಳವಳಿಗಳ ತವರೂರೆಂದೇ ಹೆಸರಾಗಿರುವ ಶಿವಮೊಗ್ಗ ಜಿಲ್ಲೆ ಹಲವಾರು ವರ್ಷಗಳ ನಂತರ ಬೃಹತ್ ಮಟ್ಟದ ಹೋರಾಟವೊಂದಕ್ಕೆ ಸಾಕ್ಷಿಯಾಗಿದ್ದು ಜುಲೈ 10ನೇ ತಾರೀಖಿನಂದು ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಬಹುತೇಕ ಯಶಸ್ವಿಗೊಳ್ಳುವುದು ಖಚಿತವಾಗಿದೆ. ಈ ಮೂಲಕ ಆಡಳಿತಾರೂಢ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಭಾರೀ ಮುಖಭಂಗಕ್ಕೊಳಗಾಗಲಿರುವುದೂ ನಿಜ. ಮಾತ್ರವಲ್ಲ ಈ ವಿಷಯ ವಿರೋಧ ಪಕ್ಷವಾಗಿರುವ ಬಿಜೆಪಿಗೂ ಮಲೆನಾಡಿನಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಭಿಪ್ರಾಯ ರೂಪಿಸಲು ಹೇಳಿ ಮಾಡಿಸಿದಂತಿದೆ. ಈಗಾಗಲೇ ಈ ಭಾಗದ ಹಲವು ಕಾಂಗ್ರೆಸ್-ಜೆಡಿಎಸ್ ನಾಯಕರು, ಕಾರ್ಯಕರ್ತರು ಸರ್ಕಾರವನ್ನು ಸಮರ್ಥಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.


ಏನದು ಯೋಜನೆ?
ಯಾಕೆ ಈ ಮಟ್ಟದ ವಿರೋಧ
2031ನೇ ಇಸವಿಗೆ ಬೆಂಗಳೂರು ಎದುರಿಸುವ ಕುಡಿಯುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು 2010ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿವೃತ್ತ ಚೀಫ್ ಎಂಜಿನಿಯರ್ ತ್ಯಾಗರಾಜ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಅದು 2014ರಲ್ಲಿ ವರದಿ ಸಲ್ಲಿಸಿ ಇರುವ ಎಲ್ಲಾ ಮಾರ್ಗಗಳ ಪೈಕಿ ಶರಾವತಿ ನದಿಯಿಂದ ನೀರು ತರುವುದೇ ಉತ್ತಮ ಮಾರ್ಗ ಎಂದು ಶಿಫಾರಸು ನೀಡಿತ್ತು. ಆದರೆ 2014ಲ್ಲೇ ಈ ವರದಿ ಪ್ರಾಯೋಗಿಕವಲ್ಲ ಎಂಬ ಅಭಿಪ್ರಾಯಗಳು ತಜ್ಞ ವಲಯದಿಂದ ಬಂದಿದ್ದವು. ಇದರ ನಂತರ 2016ರಲ್ಲಿ ಕೇಂದ್ರ ಜಲ ಆಯೋಗದ ಮಾಜಿ ಅಧ್ಯಕ್ಷ ಎ.ಕೆ. ಬಜಾಜ್ ನೇತೃತ್ವದ ಸಮಿತಿಯೊಂದನ್ನು ನೇಮಿಸಲಾಗಿತ್ತು.

ಆದರೆ ಹಾಲಿ ಸರ್ಕಾರ 2014ರ ತ್ಯಾಗರಾಜ್ ಸಮಿತಿ ವರದಿಯನ್ನೇ ಹಠ ಹಿಡಿದು ಜಾರಿಗೊಳಿಸಲು ಹೊರಟಿರುವುದು ತೀವ್ರ ಟೀಕೆಗೆ, ಜನವಿರೋಧಕ್ಕೆ ಕಾರಣವಾಗುವುದು ಮಾತ್ರವಲ್ಲ ಅನುಮಾನಗಳಿಗೂ ಕಾರಣವಾಗಿದೆ. 12 ಸಾವಿರ ಕೋಟಿ ರೂಪಾಯಿಗಳ ಯೋಜನೆಯನ್ನು ಡಿಸಿಎಂ ಘೋಷಿಸುವುದರ ಹಿಂದೆ ಬೆಂಗಳೂರಿಗೆ ನೀರು ತರುವುದಕ್ಕಿಂತಲೂ ಹೆಚ್ಚಾಗಿ ತಮ್ಮ ತಿಜೋರಿ ಭರ್ತಿ ಮಾಡಿಕೊಳ್ಳುವ ಉದ್ದೇಶವೇ ಇರಬಹುದೆ ಎಂದು ಗುಮಾನಿ ಎದ್ದಿದೆ. ಈಗಗಲೇ 18 ಸಾವಿರ ಕೋಟಿ ವೆಚ್ಚದ ಇಂತಹುವೇ ಒಂದು ಅಪ್ರಾಯೋಗಿಕ ಫ್ಲಾಪ್ ಯೋಜನೆಯನ್ನು ಎತ್ತಿನಹೊಳೆ ಹೆಸರಲ್ಲಿ ಜಾರಿಗೊಳಿಸಿ, ಅತ್ತ ನದಿ ಒರತೆಗಳೂ ಬತ್ತಿ ಇತ್ತ ನೀರೂ ಇಲ್ಲದ ಸ್ಥಿತಿ ಉಂಟಾಗಿರುವ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಅಂತಹುದ್ದೇ ಮತ್ತೊಂದು ಯೋಜನೆ ಘೋಷಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಶರಾವತಿ ಕಣಿವೆಯ ಜನತೆ ಈ ಮಟ್ಟದಲ್ಲಿ ಪ್ರತಿಕ್ರಿಯಿಸಲು ಕಳೆದ ಎಂಟು ದಶಕಗಳಿಂದಲೂ ಪದೇ ಪದೇ ಅಭಿವೃದ್ಧಿ ಹೆಸರಿನ ಯೋಜನೆಗಳಿಗೆ ಅವರು ತಲೆ ಕೊಟ್ಟುಕೊಂಡು ಬಂದಿರುವುದೇ ಆಗಿದೆ. 1940ರ ದಶಕದಷ್ಟು ಹಿಂದೆಯೇ ಹಿರೇಭಾಸ್ಕರ ಜಲಾಶಯಕ್ಕಾಗಿ ಮನೆ ಮಠ ತೊರೆದು ಬೀದಿಗೆ ಬಿದ್ದವರು ಮತ್ತೆ 1964ರಲ್ಲಿ ಲಿಂಗನಮಕ್ಕಿ ಅಣೆಕಟ್ಟೆಯಾದಾಗ, ನಂತರ ತಲಕಳಲೆ ಅಣೆಕಟ್ಟೆಯಾದಾಗ ಮತ್ತೆ ಮತ್ತೆ ಬೀದಿಗೆ ಬಿದ್ದರು. ವಾರಾಹಿ ನದಿಗೆ ಅಡ್ಡಲಾಗಿ ಮಾಣಿ, ಚಕ್ರಾ ನದಿಗೆ ಸಾವೆಹಕ್ಲು ಅಣೆಕಟ್ಟೆ ಕಟ್ಟುವಾಗ ಕತ್ತಲಿಗೆ ತಳ್ಳಲ್ಪಟ್ಟ ಲಕ್ಷಾಂತರ ಜನರ ಬದುಕು ಇಷ್ಟು ದಶಕಗಳಾದರೂ ಬೆಳಕು ಕಾಣಲೇ ಇಲ್ಲ. ನಾಡಿಗೇ ಬೆಳಕು ಕೊಟ್ಟ ಶರಾವತಿ, ವಾರಾಹಿಯರ ಮಕ್ಕಳ ಬದುಕು ಕತ್ತಲಲ್ಲೇ ಉಳಿಯಿತು. ಸರ್ಕಾರಗಳು ನೀಡಿದ್ದು ಪುಗಸಟ್ಟೆ ಭರವಸೆಗಳನ್ನು ಮಾತ್ರವೇ ಹೊರತು ಪುಡಿಗಾಸಿನ ಪರಿಹಾರವೂ ದೊರೆಯಲಿಲ್ಲ. ಇಂತಹ ಸನ್ನಿವೇಶದಲ್ಲಿ ಶರಾವತಿ ಮಕ್ಕಳ ಪ್ರಶ್ನೆ ಇದು- ರಾಜ್ಯವನ್ನು ಏಳಿಗೆ ಮಾಡಲು ಜಾರಿ ಮಾಡಿದ ಯೋಜನೆಗಳ ಮೂಲಕ ನಮ್ಮ ಬದುಕುಗಳನ್ನೇ ಮುಳುಗಡೆ ಮಾಡಿರುವ ನೀವು ಇನ್ನೂ ನಮ್ಮ ಮೇಲೆ ಎಷ್ಟು ಸಲ ದೌರ್ಜನ್ಯ ನಡೆಸುತ್ತೀರಿ ಎಂದು ಅವರೀಗ ತಿರುಗಿ ಬಿದ್ದಿದ್ದಾರೆ.

ಸಮುದ್ರಕ್ಕೆ ಪೋಲಾಗಿ ಹೋಗುವ ನೀರು?

ಶರಾವತಿ ನದಿಯನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ಕುರಿತು ಸುದ್ದಿ ಮಾಧ್ಯಮಗಳೆದುರು ಮಾತಾಡಿರುವ ಮಾನ್ಯ ಉಪಮುಖ್ಯಮಂತ್ರಿಗಳು “ಸಮುದ್ರಕ್ಕೆ ಪೋಲಾಗಿ ಹೋಗುವ ನೀರನ್ನು ಬೆಂಗಳೂರಿಗೆ ತರಿಸುತ್ತೇವೆ” ಎಂದು ಆಡಿರುವ ಮಾತು ಈ ಭಾಗದ ಜನರಿಗೆ ಆಕ್ರೋಶವನ್ನೇ ತರಿಸಿದೆ. ಜೋಗ ಜಲಪಾತದ ನಂತರದಲ್ಲಿ ಶರಾವತಿಯ ಟೇಲ್‍ಎಂಡ್‍ನಲ್ಲಿ ಈ ನದಿಯ ಹರಿವನ್ನೇ ಆಶ್ರಯಿಸಿ ಬದುಕುತ್ತಿರುವ ನೂರಾರು ಎಷ್ಟೋ ಹಳ್ಳಿಗಳ ಸಾವಿರಾರು ಮೀನುಗಾರರ, ಕೃಷಿಕರ ಮಾನವ ಹಕ್ಕಿನ ಉಲ್ಲಂಘನೆಯ ಮಾತೂ ಹೌದಾಗಿದೆ. ಈ ನೀರನ್ನೇ ಆಶ್ರಯಿಸಿರುವ ಅಸಂಖ್ಯಾತ ಜಲಚರಗಳ, ವನ್ಯಜೀವಿಗಳ ಪಾಲಿನ ಮರಣಶಾಸನವೂ ಹೌದು. ಅಷ್ಟಕ್ಕೂ ಕಳೆದ ಕೆಲವು ದಶಕಗಳಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿ ನದೀಪಾತ್ರವೇ ಕಿರಿದಾಗಿ ಹೋಗಿರುವ ಬಗ್ಗೆ ಇವರಿಗೇನಾದರೂ ಕಾಳಜಿ ಇದೆಯೇ? ಲಿಂಗನಮಕ್ಕಿ ಅಣೆಕಟ್ಟೆ ಪೂರ್ತಿ ತುಂಬಿದಾಗ 155 ಟಿಎಂಸಿ ನೀರು ಹಿಡಿದಿಡುತ್ತದೆ ಎನ್ನಲಾಗಿದೆ. ಆದರೆ ಈಗ ಡ್ಯಾಮಿನಲ್ಲ್ಲಿ ಶೇಕಡಾ 40ರಷ್ಟು ಹೂಳು ತುಂಬಿಕೊಂಡಿದೆ. ಕಳೆದ ಒಂದು ದಶಕದಲ್ಲಿ ಅಣೆಕಟ್ಟೆ ಪೂರ್ತಿ ತುಂಬಿರುವುದು ಕೇವಲ ಎರಡು ಸಲ ಮಾತ್ರ. ಉಳಿದ ವರ್ಷಗಳಲ್ಲಿ ಮಳೆಯ ಕೊರತೆಯಿಂದಾಗಿ ಅರ್ಧ ಮಟ್ಟವನ್ನೂ ತುಂಬಿರುವುದಿಲ್ಲ. ಈ ಸ್ಥಿತಿಯಲ್ಲಿ 30 ಟಿಎಂಸಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಮಾತೆಷ್ಟು ಅವಿವೇಕತನದ್ದು ಎಂಬುದು ಸ್ಪಷ್ಟವಾಗಿದೆ.

ಕಾವೇರಿದ ಶರಾವತಿ ಕಣಿವೆ

ಶರಾವತಿಯಿಂದ ಬೆಂಗಳೂರಿಗೆ ನೀರು ಒಯ್ಯುವ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ. ಪ್ರಾಣ ಕೊಟ್ಟೇವು ಶರಾವತಿ ಬಿಡೆವು ಎಂಬ ಘೋಷಣೆಗಳು ಈಗ ಈ ಭಾಗದ ಹಳ್ಳಿಹಳ್ಳಿಗಳಲ್ಲಿ ಮೊಳಗತೊಡಗಿವೆ. ಕಾಂಗ್ರೆಸ್ ಜೆಡಿಎಸ್‍ಗಳನ್ನೂ ಒಳಗೊಂಡಂತೆ ಈ ಭಾಗದ ರಾಜಕೀಯ ಮುಖಂಡರು ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾದ್ಯಂತ ಹರಳುಗಟ್ಟುತ್ತಿರುವ ಆಂದೋಲನಕ್ಕೆ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ನಾಯಕತ್ವ ನೀಡುತ್ತಿದೆ. ನಾಡಿನ ಹಿರಿಯ ಸಾಹಿತಿ ನಾ ಡಿಸೋಜಾ ಇದರ ಗೌರವಾಧ್ಯಕ್ಷರಾಗಿ ತಮ್ಮ 86ರ ಇಳಿ ವಯಸ್ಸಿನಲ್ಲಿಯೂ ಹಳ್ಳಿಗಳಿಗೆ ಹೋಗಿ ಸಭೆಗಳಲ್ಲಿ ಭಾಗವಹಿಸುತ್ತಾ ಯುವಕರಿಗೆಲ್ಲಾ ಪ್ರೇರಣೆಯಾಗಿದ್ದಾರೆ. ಸಾಗರ ತಾಲ್ಲೂಕಿನ ಆವಿನಹಳ್ಳಿ, ತುಮರಿ, ತ್ಯಾಗತಿ, ಆನಂದಪುರ, ಹೊಸನಗರ, ರಿಪ್ಪನ್ ಪೇಟೆ, ಬಿದನೂರು-ನಗರ, ಶಿರಾಳಕೊಪ್ಪ, ಸೊರಬದ ಎಲ್ಲ ಹೋಬಳಿ ಕೇಂದ್ರಗಳು ಹೀಗೆ ಎಲ್ಲಾ ಕಡೆಗಳಲ್ಲಿ ಇದುವರೆಗೆ ನೂರಾರು ಸಭೆಗಳು ನಡೆದಿವೆ, ಸ್ಥಳೀಯವಾಗಿ ಸಣ್ಣ, ದೊಡ್ಡ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ.
ಒಟ್ಟಿನಲ್ಲಿ ಜುಲೈ 10ರಂದು ಇಡೀ ಶಿವಮೊಗ್ಗ ಜಿಲ್ಲೆಯ ವ್ಯಾಪಾರ-ವಹಿವಾಟು, ಮತ್ತೆಲ್ಲ ಆರ್ಥಿಕ ಶೈಕ್ಷಣಿಕ ಚಟುವಟಿಕೆಗಳು ಸ್ತಬ್ದಗೊಳ್ಳುವುದಂತೂ ಖಚಿತವಾಗಿದೆ. ಒಂದೊಮ್ಮೆ ಇದಕ್ಕೂ ಸರ್ಕಾರ ಬಗ್ಗದಿದ್ದರೆ ಇಡೀ ಮಲೆನಾಡು ವ್ಯಘ್ರಗೊಳ್ಳಲೂಬಹುದು… ಸರ್ಕಾರಕ್ಕೆ ಜವಾಬ್ದಾರಿ, ಜನರ ಆತಂಕಗಳನ್ನು ಕೇಳಿಸಿಕೊಳ್ಳುವ ಮನಸ್ಸು ಇರುವುದೇ ನಿಜವಾದರೆ ಯಾವುದೇ ಅನಾಹುತಗಳಿಗೆ ಮೊದಲು ಈ ಯೋಜನೆ ಕೈ ಬಿಡಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...