Homeರಾಷ್ಟ್ರೀಯಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

ಕೇರಳ: ಬಾಲಕಿಯರ ಒಳವಸ್ತ್ರ ತೆಗೆಸಿದ ನೀಟ್‌ ಕೇಂದ್ರದ ಮೂವರು ಸೇರಿದಂತೆ ಐವರ ಬಂಧನ

- Advertisement -
- Advertisement -

ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರನ್ನು ಬ್ರಾ ತೆಗೆಯುವಂತೆ ಕೇಳಿದ ಮೂವರು ಸೇರಿದಂತೆ ಒಟ್ಟು ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ. ಪರೀಕ್ಷೆಗೂ ಮುನ್ನ ಅವಮಾನಕರವಾಗಿ ತಪಾಸಣೆಗೆ ಒಳಗಾದ ಮೂವರು ವಿದ್ಯಾರ್ಥಿನಿಯರು ಪೊಲೀಸರಿಗೆ ಮೂರು ನೀಡಿದ್ದಾರೆ.

ಈ ಬಗ್ಗೆ ಮೊದಲು ದೂರು ನೀಡಿದ್ದ ವಿದ್ಯಾರ್ಥಿನಿಯ ಆರೋಪಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಿರಾಕರಿಸಿದೆ. ದೂರನ್ನು ‘ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ’ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರದಂದು 17 ವರ್ಷದ ಬಾಲಕಿಯ ತಂದೆಯೊಬ್ಬರು ಮಾಧ್ಯಮಗಳ ಮುಂದೆ ಬಂದು ಈ ಬಗ್ಗೆ ಹೇಳಿಕೆ ನೀಡಿದಾಗ ವಿವಾದವು ಬೆಳಕಿಗೆ ಬಂದಿತ್ತು. ಅವರು, “ನನ್ನ ಮಗಳು ಮೊದಲ ಬಾರಿಗೆ ನೀಟ್ ಪರೀಕ್ಷೆಯನ್ನು ಬರೆದಿದ್ದಾರೆ. ಅವರು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ಒಳವಸ್ತ್ರಗಳನ್ನು ತೆಗೆಯುವಂತೆ ಕೇಳಲಾಯಿತು. ಪರೀಕ್ಷೆಯ ಮೂರು ಗಂಟೆಗಳ ಕಾಲ ಒಳ ಉಡುಪು ಧರಿಸದೇ ಕುಳಿತಿದ್ದರು. ಪರೀಕ್ಷೆಗೆ ಕುಳಿತ ‘ಆಘಾತಕಾರಿ ಅನುಭವ’ದಿಂದ ಇನ್ನೂ ಚೇತರಿಸಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಪರೀಕ್ಷಾ ಕೇಂದ್ರವಾದ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಒಳವಸ್ತ್ರಕ್ಕೆ ಲೋಹಗಳ ಕೊಕ್ಕೆಗಳು ಇದ್ದುದರಿಂದ ಬಾಲಕಿಯ ಬ್ರಾ ತೆಗೆಯುವಂತೆ ಹೇಳಲಾಗಿತ್ತು ಎಂದು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳ-ನೀಟ್ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಒಳವಸ್ತ್ರ ತೆಗೆಯುವಂತೆ ಒತ್ತಾಯ; ಪ್ರಕರಣ ದಾಖಲು

“ಒಳಉಡುಪು ನಿಮ್ಮ ಭವಿಷ್ಯಕ್ಕಿಂತ ದೊಡ್ಡದೆ? ಅದನ್ನು ತೆಗೆದುಹಾಕಿ, ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. 90% ವಿದ್ಯಾರ್ಥಿನಿಯರು ತಮ್ಮ ಒಳ ವಸ್ತ್ರಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಇಡಬೇಕಾಯಿತು” ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ ಎಂದು ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಪರೀಕ್ಷಾ ಕೇಂದ್ರವು ಬಾಲಕಿಯ ತಂದೆಯ ಆರೋಪವನ್ನು ನಿರಾಕರಿಸಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, “NEET ಡ್ರೆಸ್ ಕೋಡ್ ಅಭ್ಯರ್ಥಿಯ ಪೋಷಕರು ಆಪಾದಿಸುವ ಯಾವುದೇ ಚಟುವಟಿಕೆಯನ್ನು ಅನುಮತಿಸುವುದಿಲ್ಲ” ಎಂದು ಇಂದು ಹೇಳಿದೆ.

ಘಟನೆಯ ಕುರಿತು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಹುಡುಗಿಯರನ್ನು ಅವರ ಬ್ರಾ ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ನೀಟ್‌ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಘನತೆ ಮತ್ತು ಗೌರವದ ಮೇಲೆ ದಾಳಿ ನಡೆಸಿದ್ದಕ್ಕೆ ಅವರು ನಿರಾಶೆ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

“ಈ ಅನಿರೀಕ್ಷಿತ ಘಟನೆಯ ಅವಮಾನ ಮತ್ತು ಆಘಾತವು ವಿದ್ಯಾರ್ಥಿಗಳ ನೈತಿಕತೆ ಮತ್ತು ಸ್ಥೈರ್ಯದ ಮೇಲೆ ಪರಿಣಾಮ ಬೀರಿದೆ. ಅದರ ಪರಿಣಾಮವಾಗಿ ಪರೀಕ್ಷೆಯಲ್ಲಿನ ಕಾರ್ಯಕ್ಷಮತೆಯು ಪರಿಣಾಮ ಬೀರುತ್ತದೆ. ದುಷ್ಕೃತ್ಯ ಎಸಗಿದವರ ವಿರುದ್ದ ತೀವ್ರ ಕ್ರಮ ಜರುಗಿಸಿ” ಎಂದು ಸಚಿವೆ ಪತ್ರದಲ್ಲಿ ಹೇಳಿದ್ದಾರೆ.

ಭದ್ರತಾ ತಪಾಸಣೆ ನಡೆಸಿ ಒಳ ಉಡುಪನ್ನು ತೆಗೆಯುವಂತೆ ಹೇಳಿದವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...