Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...