Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...