Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...