Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...